ಮಡಿಕೇರಿ: ಸರಳ ದಸರಾಕ್ಕೆ ತೆರೆ
Team Udayavani, Oct 26, 2020, 10:15 PM IST
ಸಾಂದರ್ಭಿಕ ಚಿತ್ರ
ಮಡಿಕೇರಿ: ಮಡಿಕೇರಿ ದಸರಾ ಮಹೋತ್ಸವದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕೋವಿಡ್ ಕಾರಣದಿಂದ ಅತ್ಯಂತ ಸರಳವಾಗಿ ವಿಜಯ ದಶಮಿಯನ್ನು ಆಚರಿಸಲಾಯಿತು. ಸೋಮವಾರ ದೇವರ ಒಂದು ಸಣ್ಣ ಮೂರ್ತಿ ಮತ್ತು ಕಳಸ ಮೆರವಣಿಗೆಯನ್ನಷ್ಟೇ ಮಾಡಲಾಯಿತು. ನಗರದ ದಶ ಮಂಟಪ ಸಮಿತಿಗಳು ಸಣ್ಣ ಸಣ್ಣ ಮಂಟಪಗಳೊಂದಿಗೆ ಮುಂದೆ ಸಾಗಿದವು. ದಶಮಂಟಪ ಶೋಭಾಯಾತ್ರೆಗೆ ಅವಕಾಶ ಇರಲಿಲ್ಲ.
ಇಲ್ಲಿನ ದಸರಾದಲ್ಲಿ 10 ದೇವಾಲಯಗಳ ಮಂಟಪಗಳು ಶೋಭಾ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದವು. ಶ್ರೀ ಕುಂದುರು ಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿಯಮ್ಮ, ಶ್ರೀ ಕೋಟೆ ಮಾರಿಯಮ್ಮ, ಶ್ರೀ ಪೇಟೆ ರಾಮ ಮಂದಿರ, ಶ್ರೀ ಕೋಟೆ ಗಣಪತಿ, ದೇಚೂರು ಶ್ರೀರಾಮ ಮಂದಿರ, ಕರವಲೆ ಭಗವತಿ, ಶ್ರೀ ಚೌಡೇಶ್ವರಿ, ಶ್ರೀ ಕೋದಂಡರಾಮ ಮಂಟಪಗಳು ಶೋಭಾಯಾತ್ರೆಯಲ್ಲಿ ಸಾಗುತ್ತಿದ್ದವು.
ಜನಸಂದಣಿಯನ್ನು ತಡೆಯುವ ಸಲುವಾಗಿ ನಗರದ ಎಲ್ಲ ಪ್ರವಾಸಿತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಮದ್ಯ ಮಾರಾಟವನ್ನು ಎರಡು ದಿನಗಳ ಕಾಲ ನಿಷೇಧಿಸಲಾಗಿತ್ತು. ನಗರದ ಶಕ್ತಿ ದೇವತೆಗಳಾದ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕೋಟೆ ಮಾರಿಯಮ್ಮ ಹಾಗೂ ಶ್ರೀಕಂಚಿ ಕಾಮಾಕ್ಷಿಯಮ್ಮ ಕರಗಗಳು ರಾತ್ರಿ ಸಂಪ್ರದಾಯದಂತೆ ಸಾಗಿ ಬನ್ನಿ ಮಂಟಪದಲ್ಲಿ ಬನ್ನಿ ಕಡಿಯುವ ಮೂಲಕ ಮಡಿಕೇರಿ ದಸರಾಕ್ಕೆ ತೆರೆ ಎಳೆಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ