ಮಡಿಕೇರಿ, ಗೋಣಿಕೊಪ್ಪ : 700 ಪೊಲೀಸರ ನಿಯೋಜನೆ; ಮದ್ಯ ನಿಷೇಧ


Team Udayavani, Oct 7, 2019, 5:16 AM IST

BAN

ಮಡಿಕೇರಿ: ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾದ ಬಂದೋಬಸ್ತ್ ಗಾಗಿ 4 ಮಂದಿ ಡಿ.ವೈ.ಎಸ್‌.ಪಿಗಳ ನೇತೃತ್ವದಲ್ಲಿ ಒಟ್ಟು 700 ಮಂದಿ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದ್ದು, ಶಾಂತಿಯುತ ದಸರಾ ಆಚರಣೆಗೆ ಕೊಡಗು ಪೊಲೀಸ್‌ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಡಾ. ಸುಮನ್‌ ಡಿ.ಪನ್ನೇಕರ್‌ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಡಿಕೇರಿ ದಸರಾಕ್ಕೆ 60ರಿಂದ 80 ಸಾವಿರ ಮಂದಿ ಹಾಗೂ ಗೋಣಿಕೊಪ್ಪಕ್ಕೆ 15 ಸಾವಿರ ಮಂದಿ ಆಗಮಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. ದಶ ಮಂಟಪಗಳ ಶೋಭಾ ಯಾತ್ರೆ ತೆರಳುವ ಸಂದರ್ಭ ಜನ ದಟ್ಟಣೆ ಏರ್ಪಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಬಂದೋಬಸ್ತ್ ಕರ್ತವ್ಯಕ್ಕಾಗಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬಂದಿಯನ್ನು ನಿಯೋಜನೆ ಮಾಡಲಾಗುತ್ತಿದ್ದು, ಭದ್ರತೆಯ ಕುರಿತು ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಬಂದೋಬಸ್ತ್ಗಾಗಿ 4 ಡಿ.ವೈ.ಎಸ್‌.ಪಿ 15 ಸಿಪಿಐ, 24 ಪಿ.ಎಸ್‌.ಐ, ಎ.ಎಸ್‌.ಐ ಮತ್ತು 700 ಮಂದಿ ಪೊಲೀಸ್‌ ಸಿಬಂದಿಯನ್ನು ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಮಹಿಳೆಯರು ಮತ್ತು ಹೆಣ್ಣು ಮಕ್ಕಳು ದಸರಾದಲ್ಲಿ ಪಾಲ್ಗೊಳ್ಳುವುದರಿಂದ ಆಯಕಟ್ಟಿ ಸ್ಥಳಗಳಲ್ಲಿ 100 ಮಂದಿ ಮಹಿಳಾ ಕೂಡ ನಿಯೋಜಿಸಲಾಗುತ್ತಿದೆ. ಮಾತ್ರವಲ್ಲದೇ 200 ಗೃಹ ರಕ್ಷಕರು, ಕೆ.ಎಸ್‌.ಆರ್‌.ಪಿಯ 3 ತುಕಡಿ, ಡಿ.ಎ.ಆರ್‌ 13 ತುಕಡಿಗಳನ್ನು ನೇಮಿಸಲಾಗುತ್ತಿದೆ. ಇದಲ್ಲದೆ ದಸರ ಕಾರ್ಯಕ್ರಮದ ಪ್ರಯುಕ್ತ ಭದ್ರತಾ ದೃಷ್ಟಿಯಿಂದ ವಿಧ್ವಂಸಕ ತಪಾಸಣಾ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಮಡಿಕೇರಿ ನಗರ ಮತ್ತು ಗೋಣಿಕೊಪ್ಪದಲ್ಲಿ ನಡೆಯಲಿರುವ ಆಯುಧ ಪೂಜೆ, ದಸರಾದ ಸಂಬಂಧ ಅ.7 ರ ಬೆಳಗ್ಗೆ 6 ಗಂಟೆಯಿಂದ ಅ.9 ರ ಬೆಳಗ್ಗೆ 10 ಗಂಟೆಯವರೆಗೆ ಮಡಿಕೇರಿ ನಗರ ಠಾಣಾ ಸರಹದ್ದಿನ 10 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಅ.7 ರ ಮಧ್ಯರಾತ್ರಿಯಿಂದ ಅ.9 ರ ಬೆಳಗ್ಗೆ 10 ಗಂಟೆಯವರೆಗೆ ಗೋಣಿಕೊಪ್ಪ ನಗರ ಹಾಗೂ ಗೋಣಿಕೊಪ್ಪದ 10 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿರುವ ಎಲ್ಲಾ ರೀತಿಯ ಅಂಗಡಿ, ಬಾರ್‌ ಮತ್ತು ರೆಸ್ಟೋರೆಂಟ್‌, ಕ್ಲಬ್‌, ಹೋಟೆಲ್‌ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಆದೇಶ ಹೊರಡಿಸಿದ್ದಾರೆ.

10 ಜೀಪು 12 ಬೈಕ್‌ಗಳಲ್ಲಿ ಸಿಬಂದಿ
ನಗರದ ಹೊರ ವಲಯದಲ್ಲಿ ಗಸ್ತು ಕರ್ತವ್ಯಕ್ಕಾಗಿ 10 ಜೀಪುಗಳಲ್ಲಿ ಮತ್ತು 12 ಬೈಕ್‌ಗಳ ಸಿಬಂದಿಯನ್ನು ನೇಮಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಮಡಿಕೇರಿ ಮತ್ತು ಗೋಣಿಕೊಪ್ಪದ ಜನ ನಿಬಿಡ ಪ್ರದೇಶಗಳಲ್ಲಿ ಒಟ್ಟು 40 ಸಿ.ಸಿ.ಕೆಮರಾ ಅಳವಡಿಕೆ, ನಗರದಲ್ಲಿ ವಿಡಿಯೋ ಚಿತ್ರಿಕರಣಕ್ಕಾಗಿ 17 ವಿಡಿಯೋಗ್ರಾಫ‌ರ್‌ಗಳನ್ನು ನೇಮಿಸಲಾಗುತ್ತದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕಾಗಿ 7 ರ್‍ಯಾಂಬೋ ತಂಡವನ್ನು ನೇಮಿಸಲಾಗುತ್ತದೆ. ಈ ತಂಡ ಗುಂಪು ಘರ್ಷಣೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಎಸ್‌.ಪಿ. ತಿಳಿಸಿದರು. ದಸರಾ ದಿನದಂದು ನಗರದ‌ಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳಲಿದ್ದು ಈ ಸಂದರ್ಭದಲ್ಲಿ ಪಿಕ್‌ಪಾಕೆಟ್‌, ಸರಗಳ್ಳತನ, ಮಹಿಳೆಯರನ್ನು ಚುಡಾಯಿಸುವುದು ಮತ್ತಿತರ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಮಫ್ತಿಯಲ್ಲಿ ಅಪರಾಧ 7 ತಂಡಗಳನ್ನು ರಚಿಸಲಾಗಿದೆ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.