ಮಡಿಕೇರಿ ದಸರಾ ಸಂಭ್ರಮ: ಗಮನ ಸೆಳೆದ ದಶಮಂಟಪಗಳ ಶೋಭಾಯಾತ್ರೆ


Team Udayavani, Oct 10, 2019, 5:44 AM IST

madikeri-dasara

ಮಡಿಕೇರಿ: ಮಡಿಕೇರಿ ದಸರಾ ಜನೋತ್ಸವದ ಕೊನೆಯ ದಿನವಾದ ಮಂಗಳವಾರ ದಶಮಂಟಪಗಳ ಶೋಭಾಯಾತ್ರೆ ಗಮನ ಸೆಳೆಯಿತು. ಜಿಲ್ಲೆ ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದ್ದ ಸಾವಿರಾರು ಜನರನ್ನು ವಿವಿಧ ಕಥಾವಸ್ತುಗಳ ವಿದ್ಯುತ್‌ ಅಲಂಕೃತ ಮಂಟಪಗಳು ಆಕರ್ಷಿಸಿದವು.

ನವೀನ ತಂತ್ರಜ್ಞಾನದ ಮೂಲಕ ಕಥಾವಸ್ತುವನ್ನು ಪ್ರಸ್ತುತ ಪಡಿಸಿದ ಬೃಹತ್‌ ಮಂಟಪಗಳ ವರ್ಣರಂಜಿತ ಬೆಳಕಿನ ಚಿತ್ತಾರ ಇಡೀ ನಗರವನ್ನು ಆವರಿಸಿತ್ತು. ನಗರದ ಮುಖ್ಯ ರಸ್ತೆ ತುಂಬಾ ಜನಜಂಗುಳಿ ಇತ್ತು. ದಶಮಂಟಪಗಳ ಡಿಜೆ ಸಂಗೀತಕ್ಕೆ ಯುವ ಸಮೂಹ ಕುಣಿದು ಕುಪ್ಪಳಿಸಿತು.

ನಗರದ ಶ್ರೀ ಚೌಡೇಶ್ವರಿ ದೇವಾಲಯ ಮಂಟಪ ಸಮಿತಿ 57ನೇ ವರ್ಷದ ದಸರಾ ಉತ್ಸವ ಆಚರಣೆಯೊಂದಿಗೆ ಮಹಿಷಾಸುರ ಮರ್ದಿನಿ ಕಥಾಸಾರಾಂಶವನ್ನು ಮಂಟಪದಲ್ಲಿ ಪ್ರಸ್ತುತ ಪಡಿಸಿತು.

ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾಗಿರುವ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಮಂಟಪ ಸಮಿತಿ 89ನೇ ವರ್ಷದ ಉತ್ಸವದಲ್ಲಿ ನರಸಿಂಹನಿಂದ ಹಿರಣ್ಯ ಕಶಿಪು ವಧೆ ಕಥಾ ಸಾರಾಂಶ ಪ್ರದರ್ಶಿಸಿತು. àಕಂಚಿ ಕಾಮಾಕ್ಷಿಯಮ್ಮ ದೇವಾಲಯ ಈ ಬಾರಿ 56 ನೇ ಉತ್ಸವ ಆಚರಣೆಯೊಂದಿಗೆ ಉಗ್ರ ನರಸಿಂಹನಿಂದ ಹಿರಣ್ಯ ಕಶಿಪುವಿನ ವಧೆ ಕಥಾ ಸಾರಾಂಶವನ್ನು ಅನಾವರಣಗೊಳಿಸಿತು.

ಕೋದಂಡರಾಮ ದೇವಾಲಯ ದಸರಾ ಮಂಟಪ ಸಮಿತಿ 45ನೇ ವರ್ಷದ ಉತ್ಸವ ಆಚರಣೆಯಲ್ಲಿ ಶಿವನಿಂದ ತ್ರಿಪುರಾಸುರರ ಸಂಹಾರ ಕಥಾ ಸಾರಾಂಶವನ್ನು ಪ್ರದರ್ಶಿಸಿತು.

ಕರವಲೆ ಭಗವತಿ ಮಹಿಷ ಮರ್ದಿನಿ ದೇಗುಲ ಮಂಟಪ ಸಮಿತಿ 24ನೇ ವರ್ಷದ ದಸರಾ ಉತ್ಸವದಲ್ಲಿ ಭ್ರಮರಾಂಬಿಕೆಯಿಂದ ಅರುಣಾಸುರ ವಧೆ ಕಥಾ ಸಾರಾಂಶವನ್ನು ಪ್ರಸ್ತುತ ಪಡಿಸಿತು. ದೇಚೂರು ರಾಮ ಮಂದಿರ ಸಮಿತಿ 101ನೇ ವರ್ಷದ ಉತ್ಸವದಲ್ಲಿ ಪಂಚಮುಖೀ ಆಂಜನೇಯನ ಕಥಾ ಸಾರಾಂಶವನ್ನು ಪ್ರದರ್ಶಿಸಿತು.

ಕೋಟೆ ಮಹಾಗಣಪತಿ ದೇವಾಲಯ ದಸರಾ ಮಂಟಪ ಸಮಿತಿ 43ನೇ ವರ್ಷದ ಉತ್ಸವ ಆಚರಣೆಯೊಂದಿಗೆ ಮಯೂರೇಶ್ವರನಿಂದ ಶಿಖಂಡಿ ಪಕ್ಷಿಯು ಮಯೂರನಾದ ಸಾರಾಂಶ, ಕೋಟೆ ಮಾರಿಯಮ್ಮ ದೇಗುಲದಸರಾ ಮಂಟಪ ಸಮಿತಿ 44ನೇ ವರ್ಷದ ಉತ್ಸವದಲ್ಲಿ ಹಯಗ್ರೀವನಿಂದ ಹಯಗ್ರೀವ ದಾನವನ ಸಂಹಾರ ಕಥಾ ಸಾರಾಂಶ, 150 ವರ್ಷಗಳ ಇತಿಹಾಸವಿರುವ ದಶಮಂಟಪಗಳ ಸಾರಥಿಯಾಗಿರುವ ಪೇಟೆ ಶ್ರೀರಾಮಮಂದಿರ ದೇಗುಲ ದಸರಾ ಮಂಟಪ ಸಮಿತಿ ಅರ್ಧನಾರೀಶ್ವರ ದರ್ಶನ ಕಥಾ ಸಾರಾಂಶ ಹಾಗೂ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಹಿರಿಯ ಅಕ್ಕಳೆಂದೆ ಖ್ಯಾತಿ ಪಡೆದಿರುವ ಕುಂದುರುಮೊಟ್ಟೆ ಚೌಟಿಮಾರಿಯಮ್ಮ ದೇವಾಲಯ ಮಂಟಪ ಸಮಿತಿಯು 46ನೇ ವರ್ಷದ ದಸರಾ ಮಂಟಪದಲ್ಲಿ ಸುಬ್ರಹ್ಮಣ್ಯನಿಂದ ತಾರಕಾಸುರನ ವಧೆ ಕಥಾ ಸಾರಾಂಶವನ್ನು ಪ್ರಸ್ತುತ ಪಡಿಸಿದವು. ಈ ಬಾರಿ ದಶಮಂಟಪಗಳು ಬಹುಮಾನಕ್ಕಾಗಿ ಪೈಪೋಟಿ ನೀಡಿದ್ದವು.

ಕಾಲೇಜು ರಸ್ತೆಯ ರಾಮಮಂದಿರದ ಅರ್ಧನಾರೀಶ್ವನ ಕಲಾಕೃತಿಯನ್ನು ಹೊತ್ತ ಮಂಟಪದ ಮೆರವಣಿಗೆಯ ಆರಂಭದೊಂದಿಗೆ ಶೋಭಾಯಾತ್ರೆಗೆ ಚಾಲನೆ ದೊರಕಿತು. ಸಂಪ್ರದಾಯದಂತೆ ಪೇಟೆ ಶ್ರೀರಾಮ ಮಂದಿರ ಮಂಟಪ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಕಂಚಿ ಕಾಮಾಕ್ಷಿಯಮ್ಮ, ದಂಡಿನ ಮಾರಿಯಮ್ಮ ಮತ್ತು ಕೋಟೆ ಮಾರಿಯಮ್ಮ ದೇವಸ್ಥಾನಕ್ಕೆ ತೆರಳಿ ಪ್ರಜೆ ಸಲ್ಲಿಸುವುದರೊಂದಿಗೆ ನಾಲ್ಕು ಶಕ್ತಿ ದೇವತೆಗಳು ಸಹಿತ ಮಂಟಪಗಳ ಮೆರವಣಿಗೆ ಮಂಜಿನ ನಗರಿಯ ಇರುಳಿಗೆ ಬೆಳಕಿನ ರಂಗೋಲಿಯನ್ನು ಮೂಡಿಸಿತು.

ಶಕ್ತಿ ಮಂಟಪಗಳು
ಹಾಲೇರಿ ರಾಜವಂಶಸ್ಥರ ಆಳ್ವಿಕೆಯ ಅವಧಿಯಲ್ಲೆ ನಾಡಿನ ಸುಭಿಕ್ಷೆಗಾಗಿ ಪೂಜಿಸಲ್ಪಡುತ್ತಿದ್ದ ಶಕ್ತಿ ದೇವತೆಗಳ ಮಂಟಪಗಳು ದಸರಾ ಮೆರವಣಿಗೆಗೆ ವಿಶೇಷ ಮೆರುಗನ್ನು ನೀಡಿದರು.

ನಗರದ ರಾಜಬೀದಿಗಳಲ್ಲಿ ಶೋಭಾಯಾತ್ರೆಯ ಸಂಭ್ರಮ ಮನೆ ಮಾಡಿತ್ತಾದರೆ, ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿನ ಮಂಗಳೂರಿನ ಸ್ವರಾಗ್‌ ಸೌಂಡ್ಸ್‌ ಆರ್ಕೆಸ್ಟ್ರಾ ಗಮನ ಸೆಳೆಯಿತು. ಇದಕ್ಕೂ ಮುನ್ನ ಕರ್ನಾಟಕ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಚಿದ ಲೇಸರ್‌ ಶೋ, ಡಾ. ಶ್ರೀ ವಿದ್ಯಾ ಮುರಳೀಧರ್‌ ಸೌರಭ ಕಲಾ ತಂಡದಿಂದ ನೃತ್ಯ ವರ್ಷ, ಕುಕ್ಕೆ ಸುಬ್ರಹ್ಮಣ್ಯದ ಆರ್ಟ್‌ ಇನ್‌ ಮೋಷನ್‌ ಕಲಾ ತಂಡದಿಂದ ಡ್ಯಾನ್ಸ್‌ ಶೋ ಆಕರ್ಷಕವಾಗಿ ಮೂಡಿಬಂದಿತು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.