Madikeri; ಅರಣ್ಯ ರಕ್ಷಕರ ಬೆನ್ನಟ್ಟಿದ ಆನೆ!
Team Udayavani, Feb 10, 2024, 11:23 PM IST
ಮಡಿಕೇರಿ: ಮದವೇರಿದ ಕಾಡಾನೆ ಯೊಂದು ಅರಣ್ಯ ರಕ್ಷಕರನ್ನು ಬೆನ್ನಟ್ಟಿದ್ದಲ್ಲದೆ ಬೈಕೊಂದನ್ನು ಜಖಂಗೊಳಿಸಿದ ಘಟನೆ ಸೋಮವಾರ ಪೇಟೆಯ ಕೋವರ್ ಕೊಲ್ಲಿ ಕಾಜೂರು ಅರಣ್ಯ ಭಾಗದಲ್ಲಿ ನಡೆದಿದೆ.
ಕಾಫಿ ತೋಟದಲ್ಲಿ ಕಾಡಾನೆಗಳು ಬೀಡು ಬಿಟ್ಟಿರುವ ಬಗ್ಗೆ ದೂರು ಬಂದ ಹಿನ್ನೆಲೆ ಅರಣ್ಯ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿತು.
ಸಿಬಂದಿಗಳಾದ ಹರ್ಷಿತ್, ಶ್ರೀಕಾಂತ್, ದರ್ಶನ್, ವಿನೋದ್ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಆನೆಯು ಬೈಕನ್ನು ತುಳಿದು ಹಾನಿಗೊಳಿಸಿತು. ಅಲ್ಲದೆ ಟಾಟಾ ಎಸ್ಟೇಟ್ನ ಗೇಟನ್ನು ಮುರಿದು ಹಾಕಿದೆ. ಗ್ರಾಮದಲ್ಲಿ ಆತಂಕದ ವಾತಾವರಣ ನೆಲೆಸಿದೆ. ಅರಣ್ಯ ಇಲಾಖೆ ಸಿಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ