ಹಾರಂಗಿ ಉದ್ಯಾನವನಕ್ಕೆ ಎಂಟ್ರಿ ಕೊಟ್ಟ ಕಾಡಾನೆ : ಚೆಲ್ಲಾಪಿಲ್ಲಿಯಾಗಿ ಓಡಿದ ಪ್ರವಾಸಿಗರು
Team Udayavani, Jul 23, 2022, 10:49 PM IST
ಮಡಿಕೇರಿ : ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಹಾರಂಗಿ ಉದ್ಯಾನವನಕ್ಕೆ ಶನಿವಾರ ಸಂಜೆ ದಿಢೀರ್ ಆಗಿ ಕಾಡಾನೆಯೊಂದು ನುಗ್ಗಿದ ಪರಿಣಾಮ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿ ಹೋದ ಘಟನೆ ನಡೆದಿದೆ.
ಹಾರಂಗಿ ಅಣೆಕಟ್ಟೆಗೆ ಹೊಂದಿಕೊಂಡಂತೆ ಇರುವ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ಆಗಮಿಸಿದ ಕಾಡಾನೆ ಅಣೆಕಟ್ಟೆ ವ್ಯಾಪ್ತಿಗೆ ಆಗಮಿಸಿ ಅಲ್ಲಿನ ಉದ್ಯಾನವನದೊಳಗೆ ಅಡ್ಡಾಡಿದೆ. ಸಂಜೆ ಸಂಗೀತ ಕಾರಂಜಿ ವೀಕ್ಷಣೆ ಆಗಮಿಸಿದ್ದ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಜಲಾಶಯದ ಭದ್ರತಾ ಪಡೆಯ ಸಿಬ್ಬಂದಿಗಳು ಎಲ್ಲಾ ಪ್ರವಾಸಿಗರನ್ನು ಸುರಕ್ಷಿತವಾಗಿ ಹೊರ ಕಳುಹಿಸುವಲ್ಲಿ ಯಶಶ್ವಿಯಾಗಿದ್ದಾರೆ.
ಹಾರಂಗಿ ಗ್ರಾಮದ ಕಿರು ಸೇತುವೆ ಬಳಿಯ ಕಾವೇರಿ ದೇವಾಲಯ ಮುಂಭಾಗ ಹಾರಂಗಿ ಅಣೆಕಟ್ಟೆ ಆವರಣದಲ್ಲಿರುವ ಗೇಟ್ ಒಂದನ್ನು ಒದ್ದು ಹೊರಕ್ಕೆ ಬಂದ ಕಾಡಾನೆ ಗ್ರಾಮದೊಳಗಿನಿಂದ ಹಾದು ಸಮೀಪದ ದೊಡ್ಡತ್ತೂರು ಅರಣ್ಯ ಪ್ರದೇಶದತ್ತ ತೆರಳಿದೆ.
ಇದನ್ನೂ ಓದಿ : ಮಂಕಿಪಾಕ್ಸ್ ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಸ್ಥಿತಿ: ವಿಶ್ವ ಆರೋಗ್ಯ ಸಂಸ್ಥೆ
ಸಂಜೆ 7 ಗಂಟೆ ವೇಳೆಗೆ ನಡೆದ ಈ ಘಟನೆಯಿಂದ ಜಲಾಶಯಕ್ಕೆ ಭೇಟಿ ನೀಡಿದ್ದ ಪ್ರವಾಸಿಗರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಈ ಕಾಡಾನೆ ಸಕಲೇಶಪುರ ವ್ಯಾಪ್ತಿಯಲ್ಲಿ ದಾಂಧಲೆ ನಡೆಸುತ್ತಿದ್ದ ಕಾರಣ ಕಳೆದ ಒಂದು ವರ್ಷದ ಹಿಂದೆ ಹಿಡಿದು ರೇಡಿಯೋ ಕಾಲರ್ ಅಳವಡಿಸಿ ಬಂಡೀಪುರ ಅರಣ್ಯಕ್ಕೆ ಬಿಡಲಾಗಿತ್ತು ಎಂದು ತಿಳಿದುಬಂದಿದ್ದು ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾಡಾನೆ ಪತ್ತೆಗೆ ಕ್ರಮಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?