ಮಡಿಕೇರಿ : ಬ್ರೇಕ್ ವಿಫಲಗೊಂಡು ಹಿಮ್ಮುಖವಾಗಿ ಚಲಿಸಿದ ಜೆಸಿಬಿ : ಕಾರ್ಮಿಕ ಸ್ಥಳದಲ್ಲೇ ಸಾವು
Team Udayavani, May 26, 2022, 6:05 PM IST
ಮಡಿಕೇರಿ : ಬ್ರೇಕ್ ವಿಫಲಗೊಂಡು ಹಿಮ್ಮುಖವಾಗಿ ಚಲಿಸಿದ ಜೆಸಿಬಿಯಡಿಗೆ ಸಿಲುಕಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿಯ ಕೂಟುಹೊಳೆ ಬಳಿ ಗುರುವಾರ ನಡೆದಿದೆ.
ಹಾಸನ ಮೂಲದ ಕಾರ್ಮಿಕ ಸಂತೋಷ್(22) ಮೃತ ದುರ್ದೈವಿಯಾಗಿದ್ದಾರೆ.
ಜೆಸಿಬಿಯ ಬ್ರೇಕ್ ವಿಫಲಗೊಂಡು ಇಳಿಜಾರಿನಲ್ಲಿ ಹಿಮ್ಮುಖವಾಗಿ ಚಲಿಸಿದೆ. ಈ ಸಂದರ್ಭ ಕಾರ್ಮಿಕ ಸಂತೋಷ್ ಜೆಸಿಬಿಯಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಒಂದು ಕಾಲು ದೇಹದಿಂದ ಬೇರ್ಪಟ್ಟಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಮೇ 27ರಿಂದ ಮಾವು, ಹಲಸು ಮೇಳ; 50ಕ್ಕೂ ಹೆಚ್ಚು ವಿವಿಧ ತಳಿಯ ಮಾವು ಪ್ರದರ್ಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್