Madikeri ಕತ್ತಿಯಿಂದ ಹಲ್ಲೆ: 10 ವರ್ಷ ಕಠಿನ ಶಿಕ್ಷೆ
Team Udayavani, Mar 6, 2024, 1:10 AM IST
ಮಡಿಕೇರಿ: ಅರಣ್ಯ ರಕ್ಷಕರೋರ್ವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿನ ಶಿಕ್ಷೆ ಮತ್ತು 15,500 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಗಾಳಿಬೀಡು ಕಾನೆಕಂಡಿ ನಿವಾಸಿ ತಿಮ್ಮಯ್ಯ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.
ಪ್ರಕರಣ ಹಿನ್ನೆಲೆ
2022ರ ಮೇ 11ರಂದು ಗಾಳಿಬೀಡು ಕಾಲೂರು ರಸ್ತೆಯಲ್ಲಿ ಅರಣ್ಯ ರಕ್ಷಕ ಅಪ್ಪಣ್ಣ ರೈ ಅವರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅವರನ್ನು ದಾರಿ ಮಧ್ಯೆ ತಡೆದ ತಿಮ್ಮಯ್ಯ, ಗಾಳಿಬೀಡು ಪಂಚಾಯಿತಿಗೆ ಕಸ ವಿಲೇವಾರಿ ಮಾಡಲು ತಮ್ಮ ಮನೆಯ ಪಕ್ಕದ ಜಾಗವನ್ನು ತೋರಿಸಿಕೊಟ್ಟಿದ್ದೀಯ ಎಂದು ಪ್ರಶ್ನಿಸಿ ಕತ್ತಿಯಿಂದ ಕಡಿಯಲು ಮುಂದಾಗಿದ್ದ. ಈ ವೇಳೆ ಅಪ್ಪಣ್ಣ ರೈ ಅವರು ಎಡಕೈಯಿಂದ ತಡೆದಾಗ ಅವರ ಕೈ ಬೆರಳುಗಳು ತುಂಡಾಗಿದ್ದವು. ತಿಮ್ಮ ಯ್ಯ ಮತ್ತೂಮ್ಮೆ ಹಲ್ಲೆ ಮಾಡಿದಾಗ ಅಪ್ಪಣ್ಣ ರೈ ತಮ್ಮ ಬಲಕೈಯಿಂದ ತಡೆಯಲು ಪ್ರಯತ್ನಿಸಿದಾಗ ಬಲ ಕೈಗೆ ಕೂಡ ಗಂಭೀರ ಗಾಯವಾಗಿತ್ತು ಎಂದು ಆರೋಪಿಸಲಾಗಿತ್ತು.
ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಠಾಣಾಧಿಕಾರಿ ವಾಣಿಶ್ರೀ ಅವರು ನ್ಯಾಯಾಲಯಕ್ಕೆ ದೋಷಾ ರೋಪಣ ಪತ್ರ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾ ಧೀಶರಾದ ಎಚ್. ಸಿ. ಶ್ಯಾಮ್ ಪ್ರಸಾದ್ ಅವರು ಆರೋಪಿಗೆ 10 ವರ್ಷ ಕಠಿನ ಶಿಕ್ಷೆ ಮತ್ತು 15,500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಕೆ.ಜೆ. ಅಶ್ವಿನಿ ವಾದ ಮಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ