ಹುಲಿಯ ಆತಂಕವಿದ್ದರೆ ತಲೆಯ ಹಿಂಬದಿಗೆ ಮುಖವಾಡ ಧರಿಸಿ!


Team Udayavani, Jan 12, 2023, 7:25 AM IST

ಹುಲಿಯ ಆತಂಕವಿದ್ದರೆ ತಲೆಯ ಹಿಂಬದಿಗೆ ಮುಖವಾಡ ಧರಿಸಿ!

ಮಡಿಕೇರಿ: ಹುಲಿಗಳು ಎಂದಿಗೂ ಮನುಷ್ಯನ ಮೇಲೆ ಎದುರು ಭಾಗದಿಂದ ನೇರವಾಗಿ ದಾಳಿ ಮಾಡುವುದಿಲ್ಲ, ಬದಲಾಗಿ ಹಿಂಬದಿಯಿಂದ ದಾಳಿ ಮಾಡುತ್ತವೆ. ಇದರಿಂದ ಪಾರಾಗಲು ಪಶ್ಚಿಮ ಬಂಗಾಲದ ಸುಂದರ ಬನ್‌ ವ್ಯಾಪ್ತಿಯಲ್ಲಿ ತಲೆಯ ಹಿಂಭಾಗಕ್ಕೆ ಮುಖವಾಡವನ್ನು ಅಳವಡಿಸಿಕೊಳ್ಳುವ ತಂತ್ರಗಾರಿಕೆಯನ್ನು ಅನುಸರಿಸಲಾಗುತ್ತಿದ್ದು, ಇದು ಫ‌ಲಪ್ರದವಾಗಿದೆ. ಈ ಮಾದರಿ ಕೊಡಗು ಜಿಲ್ಲೆಯಲ್ಲೂ ಉಪಯುಕ್ತವಾಗಬಹುದು ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಕರ್ನಲ್‌ ಸಿ.ಪಿ. ಮುತ್ತಣ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಲದಲ್ಲಿ ಬ್ರಹ್ಮಪುತ್ರ ನದಿ ಸಮುದ್ರ ವನ್ನು ಸೇರುವ ಸುಂದರಬನ್‌ನಲ್ಲಿ ಹುಲಿ ದಾಳಿಗೆ ಸಾಕಷ್ಟು ಮಂದಿ ಸಾವನ್ನಪ್ಪಿದ್ದು, ಅಲ್ಲಿ ಇದೀಗ ತಲೆಯ ಹಿಂಭಾಗಕ್ಕೆ ಅಳವಡಿಸುವ ಮುಖ ವಾಡ ಬಳಸಲಾಗುತ್ತಿದೆ. ಇದರಿಂದ ಹುಲಿ ದಾಳಿ ಪ್ರಕರಣ ಗಳು ಇಳಿಮುಖವಾಗಿದೆ. ಈ ಮುಖ ವಾಡ ಧರಿಸಿದಲ್ಲಿ, ದಾಳಿ ಮಾಡುವ ಹುಲಿಗೆ ವ್ಯಕ್ತಿಯ ಹಿಂಭಾಗದ ಮುಖವಾಡ ವ್ಯಕ್ತಿಯ ಮುಖ ದಂತೆ ಗೋಚರಿಸುವುದರಿಂದ ದಾಳಿಗೆ ಮುಂದಾಗುವುದಿಲ್ಲವೆಂದು ಗಮನ ಸೆಳೆದರು.

ಪ್ರಸ್ತಾವನೆ
ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ಹುಲಿಹಾವಳಿ ಹೆಚ್ಚಾಗುತ್ತಿದ್ದು, ಈಗಾಗಲೆ ಐವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರಬ್ಬರ್‌ನಿಂದ ಸಿದ್ಧಪಡಿಸಿದ ಮುಖವಾಡವನ್ನು ಬಳಸುವುದಕ್ಕೆ ಕ್ರಮ ಕೈಗೊಳ್ಳುವಂತೆ ಸರಕಾರ ಮತ್ತು ಅರಣ್ಯ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಮುತ್ತಣ್ಣ ಹೇಳಿದರು.

ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಸಾವನ್ನಪ್ಪಿದ ಪ್ರಕರಣಗಳನ್ನು ಗಮನಿಸಿದಾಗ ಬೆಳಗ್ಗಿನ ಜಾವ ಬಹಿರ್ದೆಸೆಗೆಂದು ತೆರಳಿದವರ ಮೇಲೆ ಹುಲಿ ಹಿಂಬದಿಯಿಂದ ದಾಳಿ ನಡೆಸಿ ಕೊಂದು ಹಾಕಿರುವುದು ಸ್ಪಷ್ಟವಾಗುತ್ತಿದೆ. ಜಿಲ್ಲೆಯಲ್ಲಿ ಬಯಲು ಶೌಚ ಇಲ್ಲವೆಂದು ಹೇಳಿಕೊಳ್ಳಲಾಗುತ್ತದೆಯಾದರೂ ಸಾಕಷ್ಟು ಕಡೆಗಳಲ್ಲಿ ಇಂದಿಗೂ ಮನೆಗಳಲ್ಲಿ ಶೌಚಾಲಯಗಳ ವ್ಯವಸ್ಥೆ ಇಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಶೌಚಾಲಯಗಳಿಲ್ಲದ ಮನೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಸರಕಾರ ಸೂಕ್ತ ಯೋಜನೆ ರೂಪಿಸುವುದು ಅವಶ್ಯಕ. ಬಯಲು ಶೌಚದಿಂದಾಗಿಯೇ ಸಾಕಷ್ಟು ಮಂದಿ ಹುಲಿ ದಾಳಿಗೆ ಸಿಲುಕುತ್ತಿರುವುದು ಗಮನಾರ್ಹ ಎಂದರು.

ದಾಳಿಯಿಂದ ಮೃತ ಹಸುಗಳನ್ನು ಹಾಗೇ ಬಿಡಿ
ಹುಲಿ ಜಾನುವಾರುಗಳನ್ನು ಕೊಂದು, ಒಂದಷ್ಟು ತಿಂದು ತೆರಳುತ್ತದೆ. ಹಸಿವಾದಾಗ ಮತ್ತೆ ಅದೇ ಸ್ಥಳಕ್ಕೆ ಉಳಿದ ಭಾಗವನ್ನು ಭಕ್ಷಿಸಲು ಬರುತ್ತದೆ.

ಈ ಹಿನ್ನೆಲೆಯಲ್ಲಿ ಸತ್ತ ಜಾನುವಾರುಗಳನ್ನು ಅಲ್ಲೇ ಬಿಟ್ಟು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಲ್ಲಿ, ಮತ್ತೆ ಹುಲಿ ಆ ಸ್ಥಳಕ್ಕೆ ಬಂದಾಗ ಸೆರೆ ಹಿಡಿಯಲು ಅನುಕೂಲವಾಗುತ್ತದೆ. ಸತ್ತ ಜಾನುವಾರನ್ನು ಮಾಲಕರು ಕೊಂಡೊಯ್ದಲ್ಲಿ ಹುಲಿಯು ಆಹಾರಕ್ಕಾಗಿ ಮತ್ತೆ ಬೇರೊಂದನ್ನು ಹುಡುಕಲು ಮುಂದಾಗುತ್ತದೆ ಎಂದು ತಿಳಿಸಿದರು.

ಹುಲಿ ಹಾವಳಿ ಹೆಚ್ಚಾಗಿರುವ ಪ್ರದೇಶದ ಮಕ್ಕಳನ್ನು ಶಾಲೆಗೆ ಕರೆದೊಯ್ಯಲು ಸೂಕ್ತ ವಾಹನ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಬೇಕು. ಪಾಳು ಬಿದ್ದ ಗದ್ದೆಗಳಲ್ಲಿ ಕಾಡು ಹಂದಿ ಸೇರಿಕೊಳ್ಳುವುದರಿಂದ ಅದನ್ನು ಬೇಟೆಯಾಡಲು ಹುಲಿಗಳು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಗದ್ದೆಗಳಲ್ಲಿ, ಕಾಫಿ ತೋಟಗಳಲ್ಲಿ ಕಾಡು ಪೊದೆ ಬೆಳೆಯಲು ಅವಕಾಶ ಮಾಡಿಕೊಡಬಾರದೆಂದು ಕರ್ನಲ್‌ ಮುತ್ತಣ್ಣ ಸಲಹೆ ನೀಡಿದರು.

ಹುಲಿ ದಾಳಿಯಿಂದ ಜಾನುವಾರುಗಳು ಮೃತಪಟ್ಟಲ್ಲಿ ನಮ್ಮ ಸಂಸ್ಥೆಯಿಂದ ವರ್ಲ್ಡ್ ವೈಲ್ಡ್‌ ಲೈಫ್ ಫ‌ಂಡ್‌ನಿಂದ ಲಭ್ಯ ಅನುದಾನದಲ್ಲಿ ತತ್‌ಕ್ಷಣ 5 ಸಾವಿರ ರೂ. ಪರಿಹಾರವನ್ನು ನೀಡಲಾಗುತ್ತಿದೆ. ಇಲ್ಲಿಯವರೆಗೆ 78 ಮಂದಿಗೆ ಪರಿಹಾರ ಒದಗಿಸಲಾಗಿದೆ ಎಂದು ಎಂದು ಸಂಸ್ಥೆಯ ಪ್ರಮುಖರಾದ ರಾಯ್‌ ಬೋಪಣ್ಣ ತಿಳಿಸಿದರು.

ಟಾಪ್ ನ್ಯೂಸ್

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ಅಳಿವಿನಂಚಿನಲ್ಲಿರುವ ಗೀಜಗನ ಹಕ್ಕಿ ಗೂಡುಗಳು… 

ಅಳಿವಿನಂಚಿನಲ್ಲಿರುವ ಗೀಜಗದ ಹಕ್ಕಿ ಗೂಡುಗಳು… ಗೀಜಗದ ಹೆಣಿಕೆಗೆ ಸರಿಸಾಟಿ ಯಾರಿಲ್ಲ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sadss

ಬಡವರ ಕೆಲಸದ ಬಗ್ಗೆ ನಿರ್ಲಕ್ಷ್ಯ ತರವಲ್ಲ: ಶಾಸಕ ಹರೀಶ್‌ ಗೌಡ ಎಚ್ಚರಿಕೆ

1-sad-sa

Hunsur ಟ್ರಾಕ್ಟರ್ ಕಳ್ಳತನ ಮಾಡಿದ್ದ ಆರೋಪಿ ಬಂಧನ