ಮಡಿಕೇರಿ: ಲಾರಿಯಿಂದ ಜೀಪಿನ ಗಾಜು ಸೀಳಿ ಒಳ ಹೊಕ್ಕ ದಿಮ್ಮಿ!
Team Udayavani, Jan 29, 2023, 6:15 AM IST
ಮಡಿಕೇರಿ: ಟಿಂಬರ್ ಸಾಗಾಟದ ಸಂದರ್ಭ ಮರದ ದಿಮ್ಮಿಯೊಂದು ಲಾರಿಯಿಂದ ಜಾರಿ ಪಿಕ್ಅಪ್ ಜೀಪಿನ ಗಾಜನ್ನು ಸೀಳಿ ಒಳಹೊಕ್ಕ ಘಟನೆ ಸಂಪಾಜೆ ರಸ್ತೆಯ ಜೋಡುಪಾಲ ಸಮೀಪ ಸಂಭವಿಸಿದೆ.
ಶುಕ್ರವಾರ ರಾತ್ರಿ 14 ಚಕ್ರದ ಲಾರಿಯೊಂದರಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಮಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು. ಜೋಡುಪಾಲ ಸಮೀಪ ಹಗ್ಗ ತುಂಡರಿಸಲ್ಪಟ್ಟ ಪರಿಣಾಮ ದಿಮ್ಮಿಗಳು ರಸ್ತೆಗೆ ಉರುಳಿದವು.
ಜೋಡುಪಾಲದಿಂದ ಮದೆನಾಡು ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನಕ್ಕೆ ಮರದ ದಿಮ್ಮಿ ಅಪ್ಪಳಿಸಿ ಗಾಜನ್ನು ಸೀಳಿ ಒಳಹೊಕ್ಕಿತು. ಚಾಲಕ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನ ಜಖಂಗೊಂಡಿದ್ದು, ಕೆಲ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಘಟನೆ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ