ಕೊಡಗಿನ ಪ್ರವಾಸಿ ತಾಣಗಳು ಖಾಲಿ ಖಾಲಿ : ಪ್ರವಾಸೋದ್ಯಮಕ್ಕೆ ನಷ್ಟ

ಕೊರೊನಾ ಜಾಗೃತಿ ಪರಿಣಾಮ

Team Udayavani, Mar 16, 2020, 5:40 AM IST

ಕೊಡಗಿನ ಪ್ರವಾಸಿ ತಾಣಗಳು ಖಾಲಿ ಖಾಲಿ : ಪ್ರವಾಸೋದ್ಯಮಕ್ಕೆ ನಷ್ಟ

ಮಡಿಕೇರಿ: ಕೊರೊನಾ ವೈರಸ್‌ ಹರಡುತ್ತಿರುವ ಕುರಿತು ಜನಜಾಗೃತಿ ಪ್ರಚಾರ ಕಾರ್ಯಗಳು ನಡೆದ ಪರಿಣಾಮ ಪ್ರತಿದಿನ ಸಾವಿರಾರು ಪ್ರವಾಸಿಗರನ್ನು ಕಾಣುತಿದ್ದ ಕೊಡಗು ಜಿಲ್ಲೆ ಖಾಲಿ ಖಾಲಿಯಾಗಿದೆ.

ಜಿಲ್ಲೆಯ ಬಹುತೇಕ ಪ್ರವಾಸಿ ಕೇಂದ್ರಗಳು ಕಳೆದೊಂದು ವಾರದಿಂದ ಪ್ರವಾಸಿಗರಿಲ್ಲದೆ ಭಣಗುಡುತ್ತಿವೆ. ಜೊತೆಗೆ ಹೊಟೇಲ್‌, ಹೋಂಸ್ಟೇ, ರೆಸಾರ್ಟ್‌ಗಳು ಕೂಡಾ ಪ್ರವಾಸಿಗರಿಲ್ಲದೆ ನಷ್ಟದ ಹಾದಿ ಹಿಡಿದಿವೆ.ಈ ಮೊದಲೇ ಪ್ರವಾಸ ನಿಗದಿಪಡಿಸಿದ್ದ ಪ್ರವಾಸಿಗರು ಕೂಡಾ ತಮ್ಮ ಪ್ರವಾಸವನ್ನು ಮೊಟಕುಗೊಳಿದ್ದು, ಇದರಿಂದಾಗಿ ಪ್ರವಾಸಿ ಕೇಂದ್ರಗಳಲ್ಲಿ ವ್ಯಾಪಾರ ನಡೆಸುತ್ತಿದ್ದ ಸಣ್ಣ ವ್ಯಾಪಾರಿಗಳು ಕೂಡಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪರೂಪಕ್ಕೆ ಪ್ರವಾಸಿಗರು ಬಂದರೂ, ರಸ್ತೆ ಬದಿಯ ವ್ಯಾಪಾರಿಗಳಿಂದ ಆಹಾರ ವಸ್ತುಗಳನ್ನು ಖರೀದಿಸಲು ಹಿಂಜರಿಯುತ್ತಿದ್ದು, ಪರಿಣಾಮವಾಗಿ ನಗರದ ರಾಜಾಸೀಟ್‌ ಬಳಿ ವ್ಯಾಪಾರ ನಡೆಸುತ್ತಿದ್ದ ಹತ್ತಾರು ಮಂದಿ ವ್ಯಾಪಾರಿಗಳು ತಮ್ಮ ವಹಿವಾಟು ಸ್ಥಗಿತಗೊಳಿಸಿದ್ದಾರೆ.

ವಾರಾಂತ್ಯದಲ್ಲಿ ಗಿಜಿಗುಡುತ್ತಿದ್ದ ನಗರದ ರಾಜಾಸೀಟ್‌, ಮಾಂದಲಪಟ್ಟಿ, ಅಬ್ಬಿಫಾಲ್ಸ್‌, ದುಬಾರೆ, ಕಾವೇರಿ ನಿಸರ್ಗಧಾಮ ಮುಂತಾದ ಪ್ರೇಕ್ಷಣೀಯ ಸ್ಥಳಗಳು ಶನಿವಾರ ಪ್ರವಾಸಿಗರಿಲ್ಲದೆ ಭಣಗುಡುತ್ತಿದ್ದುದು ಗೋಚರಿಸಿದೆ.

ಮಧ್ಯಾಹ್ನ ಬಂದ್‌ ಆಯಿತು
ಶನಿವಾರ ಮುಂಜಾನೆ ನಗರದ ಪ್ರವಾಸಿತಾಣ ರಾಜಾಸೀಟ್‌ ಪ್ರವಾಸಿಗರಿಗೆ ತೆರೆದಿತ್ತಾದರೂ,ಮಧ್ಯಾಹ್ನದ ವೇಳೆಗೆಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು,ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಾಸೀಟು, ಅಬ್ಬಿ ಜಲಪಾತ, ಮಾಂದಲಪಟ್ಟಿ ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳನ್ನು ಒಂದು ವಾರಗಳ ಕಾಲ ಮುಚ್ಚುವಂತೆ ಆದೇಶ ಹೊರಡಿಸಿದರು. ನಂತರ ಪ್ರವಾಸಿತಾಣಗಳು ಮುಚಲ್ಪಟ್ಟವು. ರಾಜಾಸೀಟ್‌ನ ಪ್ರವೇಶದ್ವಾರದಲ್ಲಿ ಕೊರೊನಾ ವೈರಸ್‌-ಭಯಬೇಡ, ಎಚ್ಚರವಿರಲಿ ಎಂಬ ಸಂದೇಶ ಸಾರುವ ಹಾಗೂ ವೈರಸ್‌ ಹರಡದಂತೆ ವಹಿಸಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸುವ ಫ‌ಲಕವನ್ನು ಪ್ರದರ್ಶಿಸಲಾಗಿದೆ.

ಈ ನಡುವೆ ರಾಜ್ಯ ಸರಕಾರ ಶುಕ್ರವಾರ ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ ಪ್ರವಾಸಿತಾಣಗಳಾದ ಕಾವೇರಿ ನಿಸರ್ಗಧಾಮ ಹಾಗೂ ದುಬಾರೆ ಆನೆ ಶಿಬಿರಕ್ಕೂ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್‌ ಅವರು ಆದೇಶ ಹೊರಡಿಸಿದ್ದಾರೆ.

ಸಂತೆಗಳೂ ರದ್ದು
ಸರಕಾರದ ಆದೇಶ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಜಾತ್ರೆ, ಉತ್ಸವಗಳು ಹಾಗೂ ಸಂತೆಯನ್ನೂ ರದ್ದುಗೊಳಿಸಲಾಗಿದೆ.

ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವ ಸಲುವಾಗಿ ಸುಂಟಿಕೊಪ್ಪದಲ್ಲಿ ಭಾನುವಾರ(ತಾ.15) ನಡೆಯಬೇಕಾಗಿದ್ದ ಸಂತೆಯನ್ನು ರದ್ದುಪಡಿಸಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.