ಮಡಿಕೇರಿ: ಗಣರಾಜ್ಯೋತ್ಸವ


Team Udayavani, Jan 27, 2020, 5:58 AM IST

Z-REPUBLIC-DAY-1

ಮಡಿಕೇರಿ: ಸ್ವಾತಂತ್ರ್ಯ, ಸಮಾನತೆ, ಭಾÅತೃತ್ವಗಳ ಅಡಿಗಲ್ಲಿನ ಮೇಲೆ ಪ್ರಜಾಸತ್ತಾತ್ಮಕ ಗಣರಾಜ್ಯದ ಕಲ್ಪನೆಯನ್ನು ಅರ್ಥೈಸಿಕೊಳ್ಳುವುದರೊಂದಿಗೆ, ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ನೀತಿಯೊಂದಿಗೆ ಯಾವುದೇ ಭೇದ ಭಾವವಿಲ್ಲದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೊಡಿಸೋಣ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಕರೆ ನೀಡಿದರು.

ನಗರದ ಜನರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ 71ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.

ಕೊಡಗು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಕಟಿಬದ್ಧವಾಗಿದ್ದು, ಕಳೆದ ಎರಡು ವರ್ಷಗಳಲ್ಲಿ ಪ್ರಕೃತಿ ವಿಕೋಪದಿಂದ ನಲುಗಿರುವ ಕೊಡಗಿನ ಪುನರ್‌ ನಿರ್ಮಾಣಕ್ಕಾಗಿ ಜಿಲ್ಲೆಗೆ ಈಗಾಗಲೇ 100 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್‌ನ್ನು ಬಿಡುಗಡೆ ಮಾಡಿದ್ದು, ವಿವಿಧ ಪುನರ್‌ ನಿರ್ಮಾಣ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಹೇಳಿದರು.ಕಸ್ವಾತಂತ್ರ್ಯ ಪೂರ್ವದಲ್ಲಿ ಅನೇಕ ಸಂಸ್ಥಾನಗಳಾಗಿ ಹರಿದು ಹಂಚಿಹೋಗಿದ್ದ ಅನೇಕ ರಾಜ ಮಹಾರಾಜರ ಆಳ್ವಿಕೆಗೆ ಒಳಪಟ್ಟು ಚಿಕ್ಕಪುಟ್ಟ ಸಂಸ್ಥಾನಗಳಾಗಿ ತಮ್ಮದೇ ಆದ ವೈಶಿಷ್ಟ್ಯವನ್ನು ಒಳಗೊಂಡಿದ್ದ ಪ್ರಾಂತ್ಯಗಳೆಲ್ಲವನ್ನೂ ಸ್ವಾತಂತ್ರ್ಯ ನಂತರದಲ್ಲಿ ಸರ್ದಾರ್‌ ವಲ್ಲಭಭಾಯ್‌ ಪಟೇಲರ ನೇತೃತ್ವದಲ್ಲಿ ಒಗ್ಗೂಡಿಸಿ ಒಂದೇ ಆಡಳಿತ ವ್ಯವಸ್ಥೆಯೊಳಗೆ ತರಲಾಯಿತು. ಹೀಗೆ ಒಗ್ಗೂಡಿದ ಭಾರತಕ್ಕೆ ಅಗತ್ಯವಿದ್ದ ಸಂವಿಧಾನ ರಚನೆಗೆ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ನೇತೃತ್ವದಲ್ಲಿ ಸಂವಿಧಾನ ರಚನಾ ಸಮಿತಿಯನ್ನು ರಚಿಸಿ, ಅದರ ಮೂಲಕ ಅಂಬೇಡ್ಕರ್‌ ಅವರಿಂದ ರಚಿಸಲ್ಪಟ್ಟ ಸಂವಿಧಾನವನ್ನು 1949ರ ನ.26ರಂದು ಅಂಗೀಕರಿಸಲಾಯಿತು. ಆದರೆ ಅದನ್ನು 1950ರ ಜನವರಿ 26ರಿಂದ ಜಾರಿಗೆ ತರಲಾಯಿತು ಎಂದು ಗಣರಾಜ್ಯೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಅನೀಸ್‌ ಕಣ್ಮಣಿ ಜಾಯ್‌ ವಿವರಿಸಿದರು.

ಸಂವಿಧಾನ ಜಾರಿಗೆ ಬಂದು ರಾಜ ಪ್ರಭುತ್ವ ಕೊನೆಗೊಂಡು ನಿಜವಾದ ಅರ್ಥದದಲ್ಲಿ ಪ್ರಜಾಸತ್ತಾತ್ಮಕ, ಸಮಾಜವಾದಿ, ಸಾರ್ವಭೌಮ ಗಣರಾಜ್ಯವಾಗಿ ರೂಪುಗೊಂಡ ಭಾರತ ಕಳೆದ 70 ವರ್ಷಗಳ ಅವಧಿಯಲ್ಲಿ ಅಪಾರ ಪ್ರಗತಿಯನ್ನು ಸಾಧಿಸಿದೆ. ಈ ದೇಶದ ಸರಕಾರಗಳು ಎಲ್ಲಾ ಜಾತಿ, ಧರ್ಮ, ಭಾಷೆಗಳ ಗಡಿಗಳನ್ನು ಮೀರಿ ಸರ್ವ ಜನರ ಹಿತಕ್ಕಾಗಿ ಶ್ರಮಿಸುತ್ತಿವೆ ಎಂದು ಅವರು ಹೇಳಿದರು.

ಧ್ವಜಾರೋಹಣದ ಬಳಿಕ ಪಥಸಂಚಲನದ ಪರಿವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿಗಳು ವಂದನೆ ಸ್ವೀಕರಿಸಿದರು. ಪೆರೇಡ್‌ ಕಮಾಂಡರ್‌ ರಾಚಯ್ಯ ಅವರ ನೇತೃತ್ವದಲ್ಲಿ ಜಿಲ್ಲಾ ಸಶಸ್ತ್ರ ದಳ, ಸಿವಿಲ್‌ ಪೊಲೀಸ್‌, ಗೃಹರಕ್ಷಕ ದಳ, ಅರಣ್ಯ ಇಲಾಖೆ, ನಗರದ ವಿವಿಧ ಶಾಲೆ ಕಾಲೇಜುಗಳ ಎನ್‌ಸಿಸಿ, ಸ್ಕೌಟ್‌ ಮತ್ತು ಗೈಡ್ಸ್‌, ಸೇವಾದಳ ಸೇರಿದಂತೆ ಸುಮಾರು 20 ತಂಡಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು.ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯ, ಮಡಿಕೇರಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಲಿಟ್ಲ ಫ್ಲವರ್‌ ವಿದ್ಯಾಸಂಸ್ಥೆ, ಬಸವನಹಳ್ಳಿಯ ಆಶ್ರಮ ಶಾಲೆ, ಮಡಿಕೇರಿಯ ಸಂತ ಜೋಸೆಫ‌ರ ಶಾಲೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ನಡೆಯಿತು. ವಿಶೇಷವಾಗಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಬಸವನಹಳ್ಳಿ ಆಶ್ರಮ ಶಾಲೆಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಗಮನಸೆಳೆಯಿತು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.