ಮರಾಠ ಮರಾಟಿ ಕ್ರೀಡಾಕೂಟ : “ಕಾನೂರು ಗೂಗ್ಲಿ’ ತಂಡ ಚಾಂಪಿಯನ್‌


Team Udayavani, May 21, 2019, 6:10 AM IST

kreeda-koota

ಮಡಿಕೇರಿ :ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಬಾಂಧವರಿಗಾಗಿ ಮೂರ್ನಾಡು ವಿದ್ಯಾಸಂಸ್ಥೆ ಮೈದಾನದಲ್ಲಿ ಆಯೋಜಿಸಿದ್ದ 6ನೇ ವರ್ಷದ ಕ್ರಿಕೆಟ್‌ ಪಂದ್ಯಾವಳಿಯಲ್ಲಿ “”ಕಾನೂರು ಗೂಗ್ಲಿ” ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘ, ಕೊಡಗು ಜಿಲ್ಲಾ ಅಂಭಾಭವಾನಿ ಯುವ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ ತಾಳತ್ತಮನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಡಿಕೇರಿ ತಾಲೂಕಿನ ಮೂರ್ನಾಡಿನಲ್ಲಿ ಸಮಾಜಬಾಂಧವರಿಗೆ 2 ದಿನಗಳ ಕಾಲ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಫೈನಲ್‌ ಪಂದ್ಯಟದಲ್ಲಿ ರಾಯಲ್‌ ಫ್ರೆಂಡ್ಸ್‌ ಕರಿಕೆ ಮತ್ತು ಕಾನೂರು ಗೂಗ್ಲಿ ತಂಡ ಪ್ರಶಸ್ತಿಗಾಗಿ ಹಣಾಹಣಿ ನಡೆಸಿತು. ಟಾಸ್‌ ಸೋತ ಗೂಗ್ಲಿ ತಂಡ ನಿಗಧಿತ 6 ಓವರ್‌ನಲ್ಲಿ 5 ವಿಕೆಟ್‌ ನಷ್ಟಕ್ಕೆ 60 ರನ್‌ ಕಲೆ ಹಾಕಿತು. ತಂಡದ ಪರ ಮೋಹನ್‌ 16, ಹರೀಶ್‌ 10, ಜೀವನ್‌ 11 ರನ್‌ ದಾಖಲಿಸಿದರು. ಗುರಿ ಬೆನ್ನತ್ತಿದ ರಾಯಲ್‌ ಫ್ರೆಂಡ್ಸ್‌ ಕರಿಕೆ ತಂಡ ನಿಗದಿತ ಓವರ್‌ನಲ್ಲಿ 59ರನ್‌ ಕಲೆ ಹಾಕಿ 1 ರನ್‌ ಅಂತರದಲ್ಲಿ ವೀರೋಚಿತ ಸೋಲು ಕಂಡಿತ್ತು. ಪರಿಣಾಮವಾಗಿ 2019ರ ಚಾಂಪಿಯನ್‌ ತಂಡವಾಗಿ ಕಾನೂರು ಗೂಗ್ಲಿ ತಂಡ ಹೊರನಡೆದರೆ, ಕರಿಕೆ ತಂಡ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಅನಂತರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ನಗದು ಹಾಗೂ ಆಕರ್ಷಕ ಟ್ರೋಪಿ ನೀಡಿ ಗೌರವಿಸಲಾಯಿತು.

ವಾಲಿಬಾಲ್‌ ಅಂಚಿಗೈಯ್ಸ ಚಾಂಪಿಯನ್‌
ಪುರುಷರ ವಾಲಿಬಾಲ್‌ನ ಫೈನಲ್‌ ಪಂದ್ಯಾಟದಲ್ಲಿ ಅಂಚಿಗೈಯ್ಸ ಕಾನೂರು ತಂಡ 2-1 ಸೆಟ್‌ಗಳಿಂದ ರಾಯಲ್‌ ಫ್ರೆಂಡ್ಸ್‌ ಕರಿಕೆ ತಂಡವನ್ನು ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಮಹಿಳೆಯರ ಥ್ರೋಬಾಲ್‌ ಪಂದ್ಯಾಟದಲ್ಲಿ ಅಂಚಿಗರ್ಲ್ಸ್‌ ಕಾನೂರು ತಂಡ ಪ್ರಥಮ ಸ್ಥಾನಗಳಿಸಿದರೆ, ಮರಾಠ ಗರ್ಲ್ಸ್‌ ಬದ್ರಗೋಳ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಮಹಿಳೆಯರ ಹಗ್ಗಜಗ್ಗಾಟದಲ್ಲಿ ಅಂಚಿಗರ್ಲ್ಸ್‌ ಪ್ರಥಮ ಸ್ಥಾನ ಪಡೆದರೆ, ಮರಾಠ ಗ್ರೂಪ್‌ ದ್ವಿತೀಯ ಸ್ಥಾನ ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ ಗಂಡುಗಲಿ ತಂಡ ಪ್ರಥಮಸ್ಥಾನ ಪಡೆದರೆ, ಬದ್ರಗೋಳ ಮರಾಠ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.

ಕ್ರೀಡಾ ವಿಜೇತರು
5ರಿಂದ 7 ವರ್ಷದ 50 ಮೀಟರ್‌ ಓಟದ ಸ್ಪರ್ಧೆಯಲ್ಲಿ ನಿಕಿಲ್‌(ಪ್ರ), ಜಿತನ್‌(ದ್ವಿ), ಕೋಶಲ್‌(ತೃ) ಹೆಣ್ಣು ಮಕ್ಕಳಲ್ಲಿ ಯಕ್ಷಿತ(ಪ್ರ), ಡಿಂಪಲ್‌(ದ್ವಿ), ಯಶೀಕ(ತೃ) ಸ್ಥಾನ ಪಡೆದುಕೊಂಡರು. 8 ರಿಂದ 12 ವರ್ಷದ ಬಾಲಕಿಯರ ವಿಭಾಗದಲ್ಲಿ ಅಮೃತ(ಪ್ರ), ಅಶ್ವಿ‌ನಿ(ದ್ವಿ), ಮೋಕ್ಷಿತ (ತೃ), ಬಾಲಕರ ವಿಭಾಗದಲ್ಲಿ ದನುಸ್‌Õ(ಪ್ರ), ಭುವನ್‌(ದ್ವಿ), ಎ.ಎನ್‌.ಧನುಸ್‌Õ(ತೃ) ಸ್ಥಾನ ಪಡೆದರು. 30ರಿಂದ 45 ವರ್ಷದ ವಿಭಾಗದಲ್ಲಿ ವಿಕಾಸ್‌(ಪ್ರ), ಆದರ್ಶ್‌ ಅದ್ಕಲೇಗಾರ್‌(ದ್ವಿ), ಸುರೇಶ್‌(ತೃ), ಮಹಿಳೆಯರ ವಿಭಾಗದಲ್ಲಿ ಅಶ್ವಿ‌ನಿ(ಪ್ರ), ಜಲಜಾಕ್ಷಿ(ದ್ವಿ), ರೇಖವತಿ(ತೃ) ಸ್ಥಾನ ಪಡೆದುಕೊಂಡರು. ಗೋಣಿಚೀಲ ಓಟದ ಪುರುಷರ ವಿಭಾಗದಲ್ಲಿ ವಿನೀತ್‌(ಪ್ರ), ಪುನಿತ್‌(ದ್ವಿ), ಮಹಿಳೆಯರ ವಿಭಾಗದಲ್ಲಿ ರೇಖಾವತಿ(ಪ್ರ), ಜಲಜಾಕ್ಷಿ(ದ್ವಿ)ಸ್ಥಾನ ಪಡೆದುಕೊಂಡರು. ಭಾರದ ಗುಂಡು ಎಸೆತ‌ ವಿಭಾಗದಲ್ಲಿ ಗಣೇಶ್‌(ಪ್ರ), ವಿಕಾಸ್‌(ದ್ವಿ), ಆದರ್ಶ್‌ ಅದ್ಕಲೇಗಾರ್‌(ತೃ), ಮಹಿಳೆಯರ ವಿಭಾಗದಲ್ಲಿ ರೇಖಾವತಿ(ಪ್ರ), ಅಶ್ವಿ‌ನಿ(ದ್ವಿ), ರೂಪಾ(ತೃ) ಸ್ಥಾನ ಪಡೆದುಕೊಂಡರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.