ಕೊರೊನಾ ಇಲ್ಲದಿದ್ದರೂ ಕೊಡಗಿನಲ್ಲಿ ಮಾಸ್ಕ್ ಗೆ ಭಾರೀ ಬೇಡಿಕೆ


Team Udayavani, Mar 9, 2020, 5:32 AM IST

ಕೊರೊನಾ ಇಲ್ಲದಿದ್ದರೂ ಕೊಡಗಿನಲ್ಲಿ ಮಾಸ್ಕ್ ಗೆ ಭಾರೀ ಬೇಡಿಕೆ

ಮಡಿಕೇರಿ: ಮಡಿಕೇರಿ ಮಾ.8: ಕೊಡಗು ಜಿಲ್ಲೆಯಲ್ಲಿ ಕೊರೊನಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ, ಆದರೂ ಮಾಸ್ಕ್ ಗಳಿಗೆ ಮಾತ್ರ ಭಾರೀ ಬೇಡಿಕೆ ಇದೆ. ಐಎಸ್‌ಐ ಗುಣಮಟ್ಟ ಹೊಂದಿರುವ “”ಎನ್‌.95” ಮಾಸ್ಕ್ ನ ಬೆಲೆ ಇದೀಗ ಮಡಿಕೇರಿಯಲ್ಲಿ 200 ರೂ.ಗೆ ಮತ್ತು ಸಾಮಾನ್ಯ ಮಾಸ್ಕ್ ನ ಬೆಲೆ 3 ರೂ.ಗಳಿಂದ 15 ರೂ.ಗಳಿಗೆ ಏರಿಕೆಯಾಗಿದೆ. ಅದರೊಂದಿಗೆ “”ಸ್ಯಾನಿಟರಿ” ವಸ್ತುಗಳ ಬೆಲೆ ಏರಿಕೆಯೊಂದಿಗೆ ಪೂರೈಕೆಯಲ್ಲಿ ಕೊರತೆಯೂ ಕಂಡು ಬಂದಿದೆ.

ಕೊಡಗು ಜಿಲ್ಲೆಯಲ್ಲಿ ಕೊರೊನಾ ವೈರಸ್‌ನ ಶಂಕಿತ ಪ್ರಕರಣ ಇಂದಿನವರೆಗೂ ಕಂಡು ಬಂದಿಲ್ಲ. ಹೀಗಿದ್ದರೂ ಕೂಡ ರಾಜ್ಯ ಆರೋಗ್ಯ ಇಲಾಖೆಯ ಸ್ಪಷ್ಟ ಸೂಚನೆಯಂತೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾ ಆರೋಗ್ಯ ಇಲಾಖೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ 5 ಹಾಸಿಗೆಗಳ ವಾರ್ಡ್‌ ಒಂದನ್ನು ಶಂಕಿತ ಪ್ರಕರಣದ ಚಿಕಿತ್ಸೆಗಾಗಿ ಮೀಸಲಿಟ್ಟಿದೆ. ಭಿತ್ತಿ ಪತ್ರಗಳು, ಕರ ಪತ್ರಗಳನ್ನು ಜನ ಸಂದಣಿ ಇರುವ ಪ್ರದೇಶಗಳಲ್ಲಿ ಹಂಚಲಾಗುತ್ತಿದೆ. ಕೊಡಗು ಜಿಲ್ಲೆಯ ನೆರೆಯ ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಹಿನ್ನಲೆಯಲ್ಲಿ ಗಡಿ ಗ್ರಾಮಗಳಲ್ಲಿ, ಚೆಕ್‌ಪೋಸ್ಟ್‌ಗಳಲ್ಲಿ ಆರೋಗ್ಯ ಇಲಾಖೆ ವಿಶೇಷ ನಿಗಾ ವ್ಯವಸ್ಥೆ ಮಾಡಿದ್ದು, ಸೋಂಕು ಹರಡದಂತೆ ತಡೆಯುವ ಮಾಹಿತಿಗಳನ್ನು ವ್ಯಾಪಕವಾಗಿ ಪ್ರಚಾರ ಮಾಡುತ್ತಿದೆ.

ಈ ನಡುವೆ ಕೊಡಗು ಜಿಲ್ಲೆಯಲ್ಲಿ ವೈರಸ್‌ ತಡೆಯುವ ಮಾಸ್ಕ್ಗೆ ಭಾರೀ ಬೇಡಿಕೆ ಕಂಡು ಬಂದಿದ್ದು, ಜನರು ಹೆಚ್ಚಿನ ಪ್ರಮಾಣದಲ್ಲಿ ಖರೀದಿಗೆ ಮುಂದಾಗುತ್ತಿರುವುದು ಕಂಡು ಬಂದಿದೆ. ಮೆಡಿಕಲ್‌ ಸ್ಟೋರ್‌ಗಳು ಮಾಸ್ಕ್ಗಳಿಗೆ ಬೇಡಿಕೆ ಮುಂದಿಟ್ಟ ಪ್ರಮಾಣದಷ್ಟು ಪೂರೈಕೆಯಾಗುತ್ತಿಲ್ಲ ಎಂದು ಔಷಧಿ ಮಳಿಗೆಗಳ ವರ್ತಕರು ಹೇಳಿದ್ದಾರೆ.

ಐಎಸ್‌ಐ ಗುಣಮಟ್ಟ ಹೊಂದಿರುವ “”ಎನ್‌.95” ಮಾಸ್ಕ್ನ ಬೆಲೆ ಇದೀಗ ಮಡಿಕೇರಿಯಲ್ಲಿ 200 ರೂ.ಗೆ ಏರಿಕೆಯಾಗಿದೆ. ಸಾಮಾನ್ಯ ಮಾಸ್ಕ್ ಬೆಲೆ 3 ರೂ.ಗಳಾಗಿದ್ದು, ಇದರ ಬೆಲೆ ಇದೀಗ 15 ರೂ.ಗಳಿಗೆ ಏರಿಕೆಯಾಗಿದೆ. ಇದು ಮಾಸ್ಕ್ಗಳನ್ನು ಪೂರೈಕೆ ಮಾಡುವ ಸಂಸ್ಥೆಗಳು ಏರಿಕೆ ಮಾಡಿದ ದರವಾಗಿದೆ. ಅದರೊಂದಿಗೆ “”ಸ್ಯಾನಿಟರಿ” ವಸ್ತುಗಳ ಬೆಲೆ ಏರಿಕೆಯೊಂದಿಗೆ ಪೂರೈಕೆಯಲ್ಲಿ ಕೊರತೆಯೂ ಕಂಡು ಬಂದಿದೆ. ಜಿಲ್ಲೆಯಲ್ಲಿ ಕೊರೊನಾ ವೈರಸ್‌ನ ಶಂಕಿತ ಪ್ರಕರಣ ಕೂಡ ಕಂಡು ಬರದಿದ್ದರೂ ಮಾಸ್ಕ್ಗಳಿಗೆ ಭಾರಿ ಬೇಡಿಕೆ ಮತ್ತು ದರವೂ ಏರಿಕೆಯಾಗಿರುವುದು ಅಚ್ಚರಿ ಮೂಡಿಸುತ್ತಿದೆ. ದುಪ್ಪಟ್ಟು ಹಣಕ್ಕೆ ಮಾಸ್ಕ್ ಗಳನ್ನು ಮಾರುವುದಾದರೂ ಹೇಗೆ ಎಂದು ಔಷಧಿ ಮಳಿಗೆಗಳ ವರ್ತಕರು ಅಳಲು ತೋಡಿಕೊಳ್ಳುತ್ತಿದಾರೆ. ಜನರು ಏಕೆ ಕೊರೊನಾ ಸೋಂಕಿನ ಬಗ್ಗೆ ಇಷ್ಟೊಂದು ಭಯಭೀತಿಗೆ ಒಳಗಾಗುತ್ತಿದ್ದಾರೋ ಎಂದು ಮೆಡಿಕಲ್‌ ಸ್ಟೋರ್‌ಗ ವರ್ತಕರು ಪ್ರಶ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.