ಹೊಸ ವರ್ಷದಲ್ಲಿ  ಮೆಸ್ಕಾಂ ಶಾಕ್‌?


Team Udayavani, Jan 4, 2019, 4:31 AM IST

mescm.jpg

ಮಂಗಳೂರು: ಹೊಸ ವರ್ಷದ ಸಡಗರದ ನಡುವೆ ವಿದ್ಯುತ್‌ ಬಳಕೆದಾರರಿಗೆ ಮೆಸ್ಕಾಂ ದರ ಏರಿಕೆಯ ಶಾಕ್‌ ನೀಡಲು ಮುಂದಾಗಿದೆ. ವಿವಿಧ ಸ್ತರಗಳಲ್ಲಿ ಹಾಲಿ ಯೂನಿಟ್‌ ದರದ ಮೇಲೆ ಸರಾಸರಿ 1.38 ರೂ. ಏರಿಕೆ ಮಾಡಲು ಕರ್ನಾಟಕ ವಿದ್ಯು ತ್ಛಕ್ತಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಮೆಸ್ಕಾಂ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸುವುದಕ್ಕೆ ಬಳಕೆದಾರರಿಗೆ 30 ದಿನಗಳ ಕಾಲಾವಕಾಶ ಇದೆ. ಬಳಿಕ ವಿದುತ್ಛಕ್ತಿ ಆಯೋಗದ ಮುಂದೆ ವಿಚಾರಣೆ ನಡೆದು ದರ ಹೆಚ್ಚಳದ ಬಗ್ಗೆ ಅಂತಿಮ ತೀರ್ಮಾನ ವಾಗಲಿದೆ. ಪ್ರತಿವರ್ಷವೂ ಮೆಸ್ಕಾಂ ಸಹಿತ ರಾಜ್ಯದ ಐದು ಎಸ್ಕಾಂಗಳು ತಮ್ಮ ಖರ್ಚುವೆಚ್ಚಗಳನ್ನು ಗಮನದಲ್ಲಿಟ್ಟು ದರ ಪರಿಷ್ಕರಣೆ ಮಾಡುವುದು ವಾಡಿಕೆ. ಕಳೆದ ವರ್ಷ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ ಮೇಲೆ ಸರಾಸರಿ 1.23 ರೂ. ಹೆಚ್ಚಳವಾಗಿತ್ತು.

ಮೆಸ್ಕಾಂಗೆ ಆದಾಯ ಕೊರತೆ
ಮೆಸ್ಕಾಂ ಮುಂದಿನ ಮೂರು ವರ್ಷಗಳ ವರೆಗಿನ ಆದಾಯ ಅಗತ್ಯ ಲೆಕ್ಕಹಾಕಿ ಎದುರಾಗುವ ಕೊರತೆಯ ಪಟ್ಟಿಯನ್ನು ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿದೆ. ಅದರಂತೆ 2019- 20ರಲ್ಲಿ 4,153.51 ಕೋ.ರೂ. ವಾರ್ಷಿಕ ಆದಾಯ ಅಗತ್ಯ ಇದ್ದು, ಪ್ರಸ್ತುತ ಜಾರಿಯಲ್ಲಿರುವ ದರಗಳ ಪ್ರಕಾರ 3447.12 ಕೋ.ರೂ. ವಾರ್ಷಿಕ ಆದಾಯ ನಿರೀಕ್ಷಿಸಿದರೆ, 706.39 ಕೋ.ರೂ. ಕೊರತೆಯಾಗಲಿದೆ. 

2020-21ರಲ್ಲಿ 3753.02 ಕೋ. ರೂ. ಅಗತ್ಯ ಆದಾಯದ ಪೈಕಿ ಈಗಿನ ದರದ ಪ್ರಕಾರ 3,541.43 ಕೋ.ರೂ. ನಿರೀಕ್ಷಿಸಿದರೆ, 211 ಕೋ.ರೂ. ಕೊರತೆ ಎದುರಾಗಲಿದೆ. 2021-22ರಲ್ಲಿ 3973.74 ಕೋ.ರೂ. ವಾರ್ಷಿಕ ಅಗತ್ಯದಲ್ಲಿ 3639.49 ಕೋ.ರೂ. ನಿರೀಕ್ಷಿಸಿದರೆ 334.25 ಕೋ.ರೂ. ಆದಾಯ ಕೊರತೆ ಎದುರಾಗಲಿದೆ ಎಂಬುದು ಮೆಸ್ಕಾಂ ವಾದ.


ದರ ಏರಿಕೆಗೆ ಮೆಸ್ಕಾಂ ಕಾರಣಗಳು

2018ರ ಎ.1ರಿಂದ ಜಾರಿಯಲ್ಲಿರುವ ವಿದ್ಯುತ್‌ ದರದಿಂದ ಮೆಸ್ಕಾಂ ತನ್ನ ಆದಾಯ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಖರೀದಿಸಿದ ವಿದ್ಯುತ್‌ಗೆ ಸಂಬಂಧಿಸಿದ ವೆಚ್ಚಗಳನ್ನು ಪಾವತಿಸದ ಹೊರತು ಏರುತ್ತಿರುವ ಬೇಡಿಕೆ ಪೂರೈಸಲು ಅಸಾಧ್ಯ. 2019-20ನೇ ಸಾಲಿಗೆ ವಿದ್ಯುತ್‌ ಖರೀದಿ ದರವನ್ನು ಪ್ರತಿ ಯುನಿಟಿಗೆ 4.09 ರೂ. (ಕಳೆದ ವರ್ಷ ಈ ದರ 3.37 ರೂ.) ಎಂದು ಅಂದಾಜಿಸಲಾಗಿರುವುದರಿಂದ ಖರೀದಿ ದರ ಈ ಬಾರಿ ಏರಲಿದೆ. ವಿತರಣ ಜಾಲ ಬಲಪಡಿಸಲು ಹಾಗೂ ಅನಿಶ್ಚಿತ ಸಂಭವಗಳನ್ನು ನಿರ್ವಹಿಸುವುದಕ್ಕೆ ಹೆಚ್ಚಿನ ಆದಾಯದ ನಿರೀಕ್ಷೆಯಿದೆ. ವಿಶೇಷವಾಗಿ ಅಗತ್ಯ ಆದಾಯ ಹಾಗೂ ನಿರೀಕ್ಷಿತ ಆದಾಯದ ಮಧ್ಯೆ ಇರುವ ಕೊರತೆ ನೀಗಿಸಲು ದರ ಪರಿಷ್ಕರಣೆ ಅನಿವಾರ್ಯ ಎಂಬುದು ಮೆಸ್ಕಾಂ ವಾದ. 

ಮುಂದಿನ ತಿಂಗಳು ಸಭೆ
ಪ್ರತೀ ಯುನಿಟ್‌ಗೆ ಸರಾಸರಿ 1.38 ರೂ. ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ತಿಂಗಳು ಆಯೋಗವು ಮಂಗಳೂರಿನಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ನಡೆಸಲಿದೆ. ಬಳಿಕ ದರ ಏರಿಕೆ ಬಗ್ಗೆ ಅಂತಿಮ ನಿರ್ಧಾರವಾಗಲಿದೆ.
 ಸ್ನೇಹಲ್‌ ಆರ್‌. ವ್ಯವಸ್ಥಾಪಕ ನಿರ್ದೇಶಕರು, ಮೆಸ್ಕಾಂ

ದಿನೇಶ್‌ ಇರಾ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.