ಕೊಡಗು ಜಿಲ್ಲೆಯಲ್ಲಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ
Team Udayavani, Sep 28, 2020, 11:15 PM IST
ಮಡಿಕೇರಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ವಿರುದ್ಧ ರೈತ, ಕಾರ್ಮಿಕ ಮತ್ತು ದಲಿತ ಪರ ಸಂಘಟನೆಗಳು ಕರೆ ನೀಡಿದ್ದ “ಕರ್ನಾಟಕ ಬಂದ್’ಗೆ ಕೊಡಗು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಹೆಚ್ಚಿನೆಲ್ಲೆಡೆ ಜನಜೀವನ ಎಂದಿನಂತೆಯೇ ಇತ್ತು.
ಪ್ರತಿಭಟನಕಾರರು ಬಂದ್ ಮಾಡಿ ಸಹಕರಿಸುವಂತೆ ಮನವಿ ಮಾಡಿದ್ದರೂ ಬಹುತೇಕ ವರ್ತಕರು ವ್ಯವಹಾರ ನಡೆಸಿದರು. ಕೆಲವು ಅಂಗಡಿ, ಹೊಟೇಲ್ಗಳು ಮುಚ್ಚಿದ್ದವು. ಸರಕಾರಿ ಕಚೇರಿಗಳು ಕಾರ್ಯನಿರ್ವಹಿಸಿದವು. ಬಸ್ಗಳ ಸಂಚಾರ ಎಂದಿನಂತೆ ಇತ್ತು. ಬಿಜೆಪಿಯೇತರ ಪಕ್ಷಗಳು, ರೈತ ಪರ ಸಂಘಟನೆಗಳು ಬೆಳಗ್ಗೆ ನಗರದ ಜ| ತಿಮ್ಮಯ್ಯ ವೃತ್ತದಲ್ಲಿ ಸಮಾವೇಶ ಗೊಂಡು, ಕೃಷಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದವು. ಪೊಲೀಸರು ಹಲವರನ್ನು ಬಂಧಿಸಿ ಅನಂತರ ಬಿಡುಗಡೆ ಮಾಡಿದರು.
ಪರ-ವಿರೋಧ ಪ್ರತಿಭಟನೆ!
ರೈತ ವಿರೋಧಿ ನೀತಿಯನ್ನು ಖಂಡಿಸಿ ವೀರಾಜಪೇಟೆ ಪಟ್ಟಣದಲ್ಲಿ ಮಾಜಿ ಎಂಎಲ್ಸಿ ಅರುಣ್ ಮಾಚಯ್ಯ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು. ಇದೇ ಸಂದರ್ಭ ಬಿಜೆಪಿ ಪ್ರಮುಖರು ಕೂಡ ಕೇಂದ್ರ ಸರಕಾರದ ಪರ ಘೋಷಣೆಗಳನ್ನು ಕೂಗುತ್ತಾ ಬಂದರು. ಪರಿಸ್ಥಿತಿ ಕಾವೇರು ತ್ತಿದ್ದಂತೆ ಪೊಲೀಸರು ಹತೋಟಿಗೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ