ಮೊಬೈಲ್ ಸಂಪರ್ಕ ಕಡಿತ: ಸರಿಪಡಿಸಲು ಮನವಿ
Team Udayavani, Jun 13, 2019, 6:10 AM IST
ಸೋಮವಾರಪೇಟೆ: ಸಮೀಪದ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರೆಕೊಪ್ಪ, ಬಸವನಳ್ಳಿ ಗ್ರಾಮಗಳಲ್ಲಿ ಮೊಬೈಲ್ ಸಂಪರ್ಕ ಕಡಿತಗೊಂಡಿದ್ದು, ಕೂಡಲೇ ಸರಿಪಡಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಗ್ರಾಮಸ್ಥರಾದ ಮಂಜು ಮಾತನಾಡಿ, ಕಳೆದ ಎಂಟು ದಿನಗಳಿಂದ ಈ ಭಾಗದಲ್ಲಿ ಮೊಬೈಲ್ ಸಂಪರ್ಕ ಕಡಿತಗೊಂಡಿದ್ದು, ಟವರ್ನ ನಿರ್ವಹಣಾ ಕಚೇರಿಗೆ ಬೀಗ ಜಡಿಯಲಾಗಿದೆ. ಇದರಿಂದ ಈ ಭಾಗದಲ್ಲಿ ಸಾಕಷ್ಟು ತೊಂದರೆಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳನ್ನು ಕೇಳಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮರಬಿದ್ದು ಸಂಪರ್ಕ ಕಡಿತಗೊಂಡಿದೆ ಇನ್ನಿತರ ಉತ್ತರ ನೀಡುತ್ತಿದಾರೆ. ಐವರ್ ನಿರ್ವಹಣೆಯನ್ನು ಖಾಸಗಿ ಯವರಿಗೆ ವಹಿಸಲಾಗಿದೆ. ಇವರ ಸಂಬಳ ಪಾವತಿಸುತ್ತಿಲ್ಲ, ಡಿಸೆಲ್ಗೆ ಹಣ ನೀಡುತ್ತಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಆದುದ್ದರಿಂದ ಸಂಬಂಧಿಸಿದವರು ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಲಾಗಿದೆ.
ದೂರವಾಣಿ ಇಲಾಖೆಯ ಎಂಜಿನಿಯರ್ರಿಗೆ ಸೋಮವಾರ ಮನವಿ ಸಲ್ಲಿಸಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ವಿನಂತಿಸಿದರು.
ಮನವಿ ಸ್ವೀಕರಿಸಿದ ಬಿಎಸ್ಎನ್ಎಲ್ ಗ್ರಾಮೀಣ ವಿಭಾಗದ ಕಿರಿಯ ಎಂಜಿನಿಯರ್ ಶ್ರೀನಿವಾಸ್ ಅವರು ಅನಂತರ ಮಾತನಾಡಿ, ಈಗಾಗಲೇ ಕಾರೆಕೊಪ್ಪ ಬಸವನಳ್ಳಿ ಮೊಬೈಲ್ ಟವರ್ ಜಿಎಸ್ಟಿ ಕಂಪೆನಿಗೆ ವಹಿಸಲಾಗಿದೆ ಎಂದು ತಿಳಿಸದರು.
ಬಿಎಸ್ಎನ್ಎಲ್ ನಿಂದ ನಿರ್ವಹಣಗೆ ಹಣ ಪಾವತಿಯಾಗಿಲ್ಲ ಎಂದು ತಾತ್ಕಾಲಿಕವಾಗಿ ಬೀಗ ಹಾಕಲಾಗಿದೆ. ಹಣ ಪಾವತಿಯಾದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಮನವಿ ನೀಡಿದ ಸಂದರ್ಭ ಗ್ರಾಮಸ್ಥರಾದ ಕೆ.ಎನ್. ಶರತ್ಕುಮಾರ್ ಮಂಜುನಾಥ್, ಕೆ.ಎ. ಪೂವಯ್ಯ, ಕೆ.ಈ. ರಾಜು, ನವೀನ, ನಾಗೇಶ್, ರವಿ, ಶ್ರೀ ನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ