ಮುಂಗಾರು : ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಕಡಿಮೆ


Team Udayavani, Jul 15, 2017, 3:40 AM IST

Z-BHAGAMANDALA-1.jpg

ಜಿಲ್ಲೆಯಲ್ಲಿ ಉತ್ತಮ ಮಳೆ : ಭಾಗಮಂಡಲದಲ್ಲಿ ತುಂತುರು 
ಮಡಿಕೇರಿ:
ಸುಮಾರು ಒಂದೂವರೆ ತಿಂಗಳ ಕಾಲ ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆಯಲ್ಲಿದ್ದ ಕಾವೇರಿನಾಡು ಕೊಡಗಿನಲ್ಲೀಗ ಮುಂಗಾರಿನ ವಾತಾವರಣ ಮೂಡಿದೆ. ಕಳೆದ ಎರಡು ದಿನಗಳಿಂದ ಮಡಿಕೇರಿ ತಾಲ್ಲಕು ಸೇರಿದಂತೆ ಜಿಲ್ಲೆಯ ಧೆಡೆ ಉತ್ತಮ ಮಳೆಯಾಗುತ್ತಿದೆ.

ಮಳೆಗಾಲ ಆರಂಭವಾಗುವುದಕ್ಕೂ ಮೊದಲು ಸುರಿದ ಅಕಾಲಿಕ ಮಳೆಯ ಅನಂತರ ಜೂನ್‌ ತಿಂಗಳಿನಲ್ಲಿ ಜಿಲ್ಲೆಯಲ್ಲಿ ನಿರೀಕ್ಷಿತ ಮಳೆಯಾಗಲಿಲ್ಲ. ಜುಲೈ ತಿಂಗಳಿನಲ್ಲಾದರೂ ಮಳೆ ಬರಬಹುದೆನ್ನುವ ನಿರೀಕ್ಷೆ ಮೂಡಿತ್ತಾದರೂ ಕಳೆದ 10 ದಿನಗಳಿಂದ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಇದೀಗ ದಿಢೀರ್‌ ಆಗಿ ಹವಾಗುಣ ಬದಲಾಗಿದ್ದು, ಸಾಧಾರಣ ಗಾಳಿ ಸಹಿತ ಮಳೆಯಾಗುತ್ತಿದೆ. ಮಡಿಕೇರಿಯಲ್ಲಿ ಉತ್ತಮ ಮಳೆಯಾಗುತ್ತಿದೆಯಾದರೂ ಅತಿ ಹೆಚ್ಚು ಮಳೆಯಾಗುವ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಮಳೆ ಕ್ಷೀಣಿಸಿದೆ.
 
ಜುಲೈ ತಿಂಗಳಿನಲ್ಲಿ ತುಂಬಿ ಹರಿಯ ಬೇಕಾಗಿದ್ದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಇನ್ನೂ ಕೂಡ ನೀರಿನ ಹರಿವು ಹೆಚ್ಚಾಗಿಲ್ಲ. ತುಂತುರು ಮಳೆಯಷ್ಟೇ ಆಗುತ್ತಿದ್ದು, ಈ ಭಾಗದ ರೈತಾಪಿ ವರ್ಗದಲ್ಲಿ ಆತಂಕ ಮನೆ ಮಾಡಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದಿರುವ ಮಳೆಯ ಪ್ರಮಾಣ ಕಳೆದ ವರ್ಷಕ್ಕಿಂತ ಕಡಿಮೆ ಇದೆ. ಕಳೆದ ವರ್ಷ ಬರದಿಂದ ಕೊಡಗು ಜಿಲ್ಲೆ ಕೂಡ ತತ್ತರಿಸಿತ್ತು. ಈ ಬಾರಿ ಕೂಡ ಇದೇ ಪರಿಸ್ಥಿತಿ ಎದುರಾಗಬಹುದೆಂದು ಹೇಳಲಾಗುತ್ತಿದೆ. ಉತ್ತಮ ಮಳೆಗಾಗಿ ಪ್ರಾರ್ಥಿಸಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆಯನ್ನು ಕೂಡ ಭಕ್ತರು ಸಮರ್ಪಿಸುತ್ತಿದ್ದಾರೆ. 
 
ಕೊಡಗು ಜಿಲ್ಲೆಯ ಇಂದಿನ ಸರಾಸರಿ ಮಳೆ 3.83 ಮಿ.ಮೀ. ಕಳೆದ ವರ್ಷ ಇದೇ ದಿನ 21.32 ಮಿ.ಮೀ. ಮಳೆಯಾಗಿತ್ತು. ಜನವರಿ ಯಿಂದ ಇಲ್ಲಿಯವರೆಗಿನ ಮಳೆ 826.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1012.21 ಮಿ.ಮೀ.ಮಳೆಯಾಗಿತ್ತು. 
      
ಮಡಿಕೇರಿ ತಾಲೂಕಿನಲ್ಲಿ ಗುರುವಾರ ಸರಾಸರಿ ಮಳೆ 6.85 ಮಿ.ಮೀ. ಕಳೆದ ವರ್ಷ ಇದೇ ದಿನ 26.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1137.6 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1480.69 ಮಿ.ಮೀ. ಮಳೆಯಾಗಿತ್ತು. 

ವಿರಾಜಪೇಟೆ ತಾಲೂಕಿನಲ್ಲಿ ಗುರುವಾರ ಸರಾಸರಿ ಮಳೆ 0.35 ಮಿ.ಮೀ. ಕಳೆದ ವರ್ಷ ಇದೇ ದಿನ 17.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 722.98 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 746.27 ಮಿ.ಮೀ. ಮಳೆಯಾಗಿತ್ತು.  
 
ಸೋಮವಾರಪೇಟೆ ತಾಲೂಕಿನಲ್ಲಿ ಗುರುವಾರ ಸರಾಸರಿ ಮಳೆ 4.3 ಮಿ.ಮೀ. ಕಳೆದ ವರ್ಷ ಇದೇ ದಿನ 19.67 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 617.82 ಮಿ.ಮೀ.  ಕಳೆದ ವರ್ಷ ಇದೇ ಅವಧಿಯಲ್ಲಿ 809.66 ಮಿ.ಮೀ. ಅಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು 
ದಾಖಲಾಗಿರುವ ಮಳೆ ವಿವರ

ಮಡಿಕೇರಿ ಕಸಬಾ 19.8, ಸಂಪಾಜೆ 1.6, ಭಾಗಮಂಡಲ 6, ರಾಜಪೇಟೆ ಕಸಬಾ 1.6, ಅಮ್ಮತ್ತಿ 0.5, ಸೋಮವಾರಪೇಟೆ ಕಸಬಾ 5.8, ಶನಿವಾರಸಂತೆ 3.2, ಶಾಂತಳ್ಳಿ 6.4, ಕುಶಾಲನಗರ 2.4, ಸುಂಟಿಕೊಪ್ಪ 8 ಮಿ.ಮೀ. ಮಳೆಯಾಗಿದೆ. 
  
ಹಾರಂಗಿ ಜಲಾಶಯದ ನೀರಿನ ಮಟ್ಟ 
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2,834.62 ಅಡಿಗಳು, ಕಳೆದ ವರ್ಷ ಇದೇ ದಿನ 2,857.74 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 2.2 ಮಿ.ಮೀ. ಕಳೆದ ವರ್ಷ ಇದೇ ದಿನ 6.8 ಮಿ.ಮೀ., ಇಂದಿನ ನೀರಿನ ಒಳ ಹರಿವು 746 ಕ್ಯೂಸೆಕ್‌, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 5,851 ಕ್ಯೂಸೆಕ್‌.
 

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.