ಭೂ ಕುಸಿತ,ಪ್ರವಾಹದ ಸ್ಥಳ,ಪರಿಹಾರ ಕೇಂದ್ರಗಳಿಗೆ ಸಂಸದರ ಭೇಟಿ 


Team Udayavani, Aug 21, 2018, 6:00 AM IST

19spt01.jpg

ಸೋಮವಾರಪೇಟೆ: ಮಹಾಮಳೆಯಿಂದ ಭೂ ಕುಸಿತ, ಪ್ರವಾಹದ ಸ್ಥಳ ಹಾಗೂ ಸಂತ್ರಸ್ಥರಿರುವ ಪರಿ ಹಾರ  ಕೇಂದ್ರಗಳಿಗೆ ಭೇಟಿ ನೀಡಿದ ಸಂಸದ ಪ್ರತಾಪ್‌ ಸಿಂಹ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಸಂಸದರು ಸೋಮವಾರಪೇಟೆಯ ಕೊಡವ ಸಮಾಜ, ಒಕ್ಕಲಿಗರ ಗೌಡ ಸಮಾಜ, ಐಗೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಿರಗಂದೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಗಂಜಿ ಕೇಂದ್ರಗಳಿಗೆ ಭೇಟಿ ನೀಡಿದರು. ಈ ಸಂದರ್ಭ ಸಂತ್ರಸ್ಥರೊಂದಿಗೆ ಸಂಸದರು ಮಾತನಾಡುತ್ತಾ, ನೀವುಗಳು ಯಾರೂ ದೃತಿಗೆಡುವ ಅವಶ್ಯಕತೆ ಇಲ್ಲ. ನಿಮ್ಮ ಆರೋಗ್ಯ ರಕ್ಷಣೆಗಾಗಿ ವೈದ್ಯರು, ಔಷಧಗಳು, ಆಹಾರಗಳು, ಬಟ್ಟೆ, ಹೊದಿಕೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಇಲ್ಲಿನ ಕೇಂದ್ರಗಳಲ್ಲಿ ಕಲ್ಪಿಸಲಾಗಿದೆ. 

ನಿಮಗಾಗಿ ಇಡೀ ರಾಜ್ಯವೇ ಸ್ಪಂಧಿಸುತ್ತಿದೆ ನೀವು ಕಳೆದುಕೊಂಡಿರುವ ಮನೆಗಳನ್ನು ಪ್ರಧಾನ ಮಂತ್ರಿ ಅವಾಜ್‌ ಯೋಜನೆಯಡಿಯಲ್ಲಿ ನಿರ್ಮಿಸಿಕೊಡಲಾಗುವುದು. ಮನೆಗಳ ವ್ಯವಸ್ಥೆ ಸೇರಿದಂತೆ ತಮ್ಮ ಊರುಗಳು ಸಾಮಾನ್ಯ ಸ್ಥಿತಿಗೆ ಮರಳಲು ಕೆಲವು ತಿಂಗಳು ಬೇಕಾಗುತ್ತದೆ. ಇಲ್ಲಿ ಎಲ್ಲಾ ನೋವುಗಳನ್ನು ಸಹಿಸಿಕೊಂಡು, ಸ್ವಲ್ಪ ಚೇತರಿಸಿಕೊಳ್ಳಿ ಎಂದು ಮನವಿ ಮಾಡಿದರು.

ಮಕ್ಕಳಗುಡಿ ಬೆಟ್ಟದ ತಪ್ಪಲಿಗೆ ಬೆಟ್ಟ ಕುಸಿದಿರುವ ಸ್ಥಳವನ್ನು ವೀಕ್ಷಿಸಿದರು. ಬೆಟ್ಟ ಕುಸಿತದಿಂದ ಸುಮಾರು 20 ಏಕರೆಗೂ ಹೆಚ್ಚು ಕಾಫಿ ತೋಟ ಸೇರಿದಂತೆ ಬೆಲೆ ಬಾಳುವ ಮರಗಳು, ಅದಕ್ಕೆ ಹಬ್ಬಿದ್ದ ಕಾಳು ಮೆಣಸಿನ ಬಳ್ಳಿಗಳೂ ಸೇರಿದಂತೆ ಲಕ್ಷಾಂತರ ರು ನಷ್ಟವಾಗಿದೆ. ಈ ಸಂದರ್ಭ ನಷ್ಟವನ್ನನುಭವಿಸಿದ ಕಿರಗಂದೂರು ಗ್ರಾಮದ ದಿವಂಗರ ಕೆ.ಟಿ. ಪೂವಯ್ಯನವರ ಪುತ್ರ ರೋಷನ್‌, ರವಿ, ಕೆ.ಟಿ. ಲಿಂಗರಾಜ್‌ ಸೇರಿದಂತೆ ಇತರರು ಇದ್ದು, ತಮಗಾದ ನಷ್ಟದ ಬಗ್ಗೆ ಅಳಲನ್ನು ತೋಡಿಕೊಂಡರು. ಈ ಸಂದರ್ಭ ಸಂಸದರು ಮಾತನಾಡಿ, ತಕ್ಷಣವೆ ರಸ್ತೆಗೆ ಬಿದ್ದಿರುವ ಮಣ್ಣು, ಕಲ್ಲು ಬಂಡೆಗಳನ್ನು ತೆರವುಗೊಳಿಸುವ ಕಾರ್ಯ ಮಾಡಲಾಗುತ್ತದೆ ಎಂದರು.  

ನಂತರದಲ್ಲಿ ಮಾಧ್ಯಮದವರೊಂದಿಗೆ ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ಜಿಲ್ಲೆ ಈ ಹಿಂದೆ ಎಂದೂ ಕಂಡರಿಯದ ಮಳೆ ಇದಾಗಿದೆ. ಇದರೊಂದಿಗೆ ಅಲ್ಲಲ್ಲಿ ಪ್ರವಾಹ ಹಾಗೂ ಬೆಟ್ಟಗುಡ್ಡಗಳ ಕುಸಿತದ ದುರಂತಗಳು ನಡೆಯುತ್ತಿದೆ. 

ದುರಂತದಿಂದ ಜೀವನ್ಮರಣಗಳ ಮಧ್ಯೆ ಸಿಲುಕಿದ್ದವರ ರಕ್ಷಣೆಗಾಗಿ ಭೂಸೇನೆಯ 174 ಮಂದಿ, ವಾಯು ಸೇನೆಯ 10 ಮಂದಿ, 30 ಮಂದಿ ಎನ್‌ಡಿಆರ್‌ಎಫ್‌ ಸಿಬ್ಬಂದಿಗಳು ಶ್ರಮಿಸುತ್ತಿದ್ದು, ಈಗಾಗಲೆ 661 ಮಂದಿಯನ್ನು ರಕ್ಷಿಸಿ, ಜಿಲ್ಲೆಯಲ್ಲಿ ತೆರೆದಿರುವ 36 ಗಂಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಶೌಚಾಲಯ ವ್ಯವಸ್ಥೆ ಇಲ್ಲದಿರುವೆಡೆಗೆ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ ಎಂದರು.

ಹವಮಾನ ವೈಪರಿತ್ಯದಿಂದಾಗಿ ಕೇಂದ್ರದಿಂದ ಬಂದ ಹೆಲಿಕಾಫ್ಟರ್‌ ಕಾರ್ಯನಿರ್ವಹಿಸಲಾಗದೇ ಮೈಸೂರಿನಲ್ಲಿ ನಿಲುಗಡೆ ಮಾಡಲಾಗಿದೆ ಎಂದರು.ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ. ರವಿ  ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಕಷ್ಟ-ನಷ್ಟದ ಬಗ್ಗೆ ವರದಿ ಮಾಡುವಂತೆ ತಿಳಿಸಿದ್ದಾರೆ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌.ಜಿ.ಮೇದಪ್ಪ,ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಅಧ್ಯಕ್ಷ ಬಿ.ಡಿ.ಮಂಜುನಾಥ್‌, ಪ್ರಾ.ಕೃ.ಪ.ಸಹಕಾರ ಸಂಘದ ಉಪಾಧ್ಯಕ್ಷ ಕೆ.ಡಿ. ಸುರೇಶ್‌, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಸ್‌.ಪಿ. ಪೊನ್ನಪ್ಪ ಉಪಸ್ಥಿತರಿದ್ದರು.

ಮಕ್ಕಳಗುಡಿ ಬೆಟ್ಟದಿಂದ ಜಾರಿದ ಮಣ್ಣು, ಕಲ್ಲುಗಳು ಹಾಗು ಭಾರೀ ಗಾತ್ರದ ಮರಗಳು ಐಗೂರು, ಕಿರಗಂದೂರು ಸಂಪರ್ಕ ರಸ್ತೆಗೆ ಬಿದ್ದಿವೆ ಅಲ್ಲಿನ ನಿವಾಸಿಗಳು ಮನೆ ಖಾಲಿ ಮಾಡಿ, ತೆರಳಿದ್ದಾರೆ. ತಾಕೇರಿ ಗ್ರಾಮದಲ್ಲಿ ಭೂಮಿ ಬಿರುಕು ಹೆಚ್ಚಾಗುತ್ತಿದ್ದು, ಗ್ರಾಮದ ಜನರು ರವಿವಾರದಸುರಕ್ಷಿತ ಸ್ಥಳಗಳಿಗೆ ತೆರಳಿದರು.  ಗ್ರಾಮದ ಸುರೇಂದ್ರ ಅವರ  ಮನೆಯ ಹಿಂಭಾಗ ರವಿವಾರ ಭೂಕುಸಿತ ಸಂಭವಿಸಿದೆ. 2006ರ ಜು.  26ರಂದು ಭೂಕುಸಿತ ಸಂಭವಿಸಿದ ಬಿಳಿಗೇರಿ ರಾಜಂಡಬಾಣೆಯಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಬಾಚಿನಾಡಂಡ ಚಿಟ್ಟಿಯಪ್ಪ ಅವರ ಮನೆ ಜರುಗುತ್ತಿದೆ. ಮೋಹನ್‌ ಬೋಪಣ್ಣ ಅವರ ಕೆರೆ ಒಡೆದಿದ್ದು, ಪಲ್ಪರ್‌ಗೌಸ್‌ ಕುಸಿದಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.