ಶಾಲಾ ಕಟ್ಟಡ ಕಾಮಗಾರಿಗೆ ತಡೆ

ಹಡಗಲಿ ತಾಂಡಾ ಶಾಲೆಗೆ ಕಳಪೆ ಗುಣಮಟ್ಟದ ಉಸುಕು-ಕಬ್ಬಿಣ ಬಳಕೆ; ಗ್ರಾಮಸ್ಥರ ಆರೋಪ

Team Udayavani, Mar 2, 2020, 1:45 PM IST

2-March-16

ಮುದಗಲ್ಲ: ಸಮೀಪದ ಹಡಗಲಿ ತಾಂಡಾದ ಹೊರವಲಯದಲ್ಲಿ ನಿರ್ಮಿಸ ಲಾಗುತ್ತಿರುವ ಶಾಲಾ ಕಟ್ಟಡ ಕಾಮಗಾರಿ ಕಳಪೆಯಾಗಿದ್ದರಿಂದ ಯುವಕರು ಕಾಮಗಾರಿಗೆ ತಡೆಯೊಡ್ಡಿದ ಘಟನೆ ನಡೆದಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆ ಯಡಿ 2018-19ನೇ ಸಾಲಿನಲ್ಲಿ ಸುಮಾರು 10.60 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕಟ್ಟಡ ಕಾಮಗಾರಿ ಕೈಗೊಳ್ಳಲಾಗಿದೆ. ರಾಯಚೂರಿನ ಶಕ್ತಿನಗರ ಮೂಲದ ಕ್ಯಾಶುಟೆಕ್‌ ಏಜೆನ್ಸಿ ಕಟ್ಟಡ ನಿರ್ಮಾಣ ಉಸ್ತುವಾರಿ ನೀಡಲಾಗಿದೆ.

ಕಾಮಗಾರಿ ಆರಂಭದಿಂದಲೂ ಕಳಪೆ ಗುಣಮಟ್ಟದ ಉಸಕು, ಕಬ್ಬಿಣ, ಸಿಮೆಂಟ್‌ ಬಳಸಲಾಗುತ್ತಿದೆ. ನಿರ್ಮಾಣ ಹಂತದಲ್ಲೇ ಕಟ್ಟಡ ಬೀಳುವ ಸ್ಥಿತಿಯಲ್ಲಿದೆ ಎಂದು ಯುವಕರು ದೂರಿದ್ದಾರೆ. ಶಾಲಾ ಕಟ್ಟಡದ ಛತ್ತಿಗೆ ಕೇವಲ 8 ಎಂಎಂ ಕಂಬಿಗಳನ್ನು ಬಳಸಲಾಗಿದೆ. ಭೀಮ್‌ಗೆ 12 ಮತ್ತು10 ಎಂಎಂ ಕಂಬಿ ಬಳಸಬೇಕು. ಛತ್ತಿಗೆ ಛತ್ತಿಗೆ 8 ಮತ್ತು 10 ಎಂಎಂ ಕಂಬಿಗಳನ್ನು ಬಳಸಬೇಕು. ಆದರೆ ಕ್ಯಾಶುಟೆಕ್‌ ಅಭಿಯಂತರ ತಿಮ್ಮಣ್ಣ ಬೇರೆಡೆ ಕಾಮಗಾರಿ ಮುಗಿಸಿ ಉಳಿದ 8 ಎಂಎಂ ಕಂಬಿಗಳನ್ನು ತಾಂಡಾದ ಶಾಲಾ ಕಟ್ಟಡಕ್ಕೆ ಬಳಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಹಾಗೂ ಮೂರನೇ ವ್ಯಕ್ತಿ ಕಾಮಗಾರಿ ಪರಿಶೀಲಿಸುವವರೆಗೆ ಕಟ್ಟಡ ಕಾಮಗಾರಿಗೆ ಅವಕಾಶ ನೀಡುವುದಿಲ್ಲ ಎಂದು ತಾಂಡಾದ ಯುವಕರಾದ ಮೌನೇಶ ರಾಠೊಡ, ಸುರೇಶ, ತಿರುಪತಿ ರಾಮಣ್ಣ, ಸಂತೋಷ ಗಂಗಪ್ಪ, ಕುಮಾರ ಮಾನಪ್ಪ, ಮಂಗಮ್ಮ ರಾಮಣ್ಣ, ಶೆಟಪ್ಪ ಎಚ್ಚರಿಸಿದ್ದಾರೆ.

ನಿರ್ಮಿತಿ ಕೇಂದ್ರ: ಇದೇ ತಾಂಡಾದಲ್ಲಿ 2018-19ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ 12 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಿಸಲಾಗುತ್ತಿದೆ. ಲಿಂಗಸುಗೂರಿನ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಕಟ್ಟಡ ನಿರ್ಮಾಣ ಉಸ್ತುವಾರಿ ವಹಿಸಲಾಗಿದೆ. ಕಟ್ಟಡಕ್ಕೆ ಹಾಕಿದ ಛತ್ತು ಒಂದೆಡೆ ಬಾಗಿದೆ. ಗೋಡೆಗಳು ಬಿರುಕು ಕಟ್ಟಡಕ್ಕೆ ಹಾಕಲಾದ ಕಾಲಂನ ಕಂಬಿಗಳು ಹೊರಗಡೆ ಕಾಣುತ್ತಿವೆ. ಕಟ್ಟಡಕ್ಕೆ ಬಳಸಿದ ಇಟ್ಟಿಗೆ ಮತ್ತು ಸಿಮೆಂಟ್‌ ಉದುರಿ ಬೀಳುತ್ತಿದೆ. ಸರಿಯಾಗಿ ಕ್ಯೂರಿಂಗ್‌ ಆಗಿಲ್ಲ. ನಿರ್ಮಿತಿ ಕೇಂದ್ರದ ಕಿರಿಯ ಅಭಿಯಂತರ ರಾಹುಲ್‌ ಕುಲಕರ್ಣಿ ಕಟ್ಟಡ ಪರಿಶೀಲನೆಗೆ ಬಂದಾಗ ತಾಂಡಾ ನಿವಾಸಿಗಳು ಕಟ್ಟಡ ಕಾಮಗಾರಿ ಕಳಪೆ ಕುರಿತು ಗಮನಕ್ಕೆ ತಂದರೂ ಸ್ಪಂದಿಸಿಲ್ಲ ಎಂದು ತಾಂಡಾದ ಲಿಂಬೆಣ್ಣ, ಥಾವರೆಪ್ಪ, ಪೀಕೆಪ್ಪ, ಶಂಕ್ರಪ್ಪ, ಮೌನೇಶ ರಾಠೊಡ ಆರೋಪಿಸಿದ್ದು, ಕಾಮಗಾರಿ ತಡೆಹಿಡಿಯಬೇಕೆಂದು ಆಗ್ರಹಿಸಿದ್ದಾರೆ.

ಅಂದಾಜು ಪತ್ರಿಕೆಯಂತೆ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಕಬ್ಬಿಣದ ಕಂಬಿ ಬಳಕೆ ಬಗ್ಗೆ ನನಗೆ ಗೊತ್ತಿಲ್ಲ. ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವೆ.
ತಿಮ್ಮಣ್ಣ,
ಕ್ಯಾಶುಟೆಕ್‌ ಅಭಿಯಂತರ

ಸಂಬಂಧಿಸಿದ ಇಂಜಿನಿಯರ್‌ಗಳಿಗೆ ಕಟ್ಟಡ ಕಾಮಗಾರಿಯನ್ನು ಅಂದಾಜು ಪತ್ರಿಕೆಯಂತೆ ಗುಣಮಟ್ಟದಿಂದ ನಿರ್ವಹಿಸಿ ಎಂದು ಹೇಳಿದರೆ ಕಾಮಗಾರಿ ಬೇಡ ಎಂದು ಮನವಿ ಪತ್ರ ಬರೆದು ಕೊಡುವಂತೆ ಹೆದರಿಸುತ್ತಿದ್ದಾರೆ.
ಮೌನೇಶ ರಾಠೊಡ,
ಅಧ್ಯಕ್ಷರು ಬಿಜೆಪಿ ಭೂತಮಟ್ಟ
ಹಡಗಲಿ ತಾಂಡಾ

ಟಾಪ್ ನ್ಯೂಸ್

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

Tiger

Ponnampet: ಹುಲಿಯ ಸೆರೆಗೆ ಹೋದ ಅರಣ್ಯ ಸಿಬಂದಿ ಮೇಲೆ ಹೆಜ್ಜೇನು ದಾಳಿ

Madikeri ಅಪಹರಣ-ದರೋಡೆ ಪ್ರಕರಣ: 8 ಮಂದಿ ಸೆರೆ

Madikeri ಅಪಹರಣ-ದರೋಡೆ ಪ್ರಕರಣ: 8 ಮಂದಿ ಸೆರೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.