‘ನಿನ್ನಮ್ಮ 2 ವಾರದಿಂದ ಕರೆದರೂ ಬರಲಿಲ್ಲ, ಪೆಟ್ರೋಲ್ ಹಾಕಿ ಸುಟ್ಟು ಬಿಟ್ಟೆ!’
ಮನೆಗೆ ಬೆಂಕಿ ಹಚ್ಚಿ, ಏಳು ಜನರನ್ನು ಕೊಂದು ಆತ್ಮಹತ್ಯೆಗೆ ಶರಣಾದ ಭೋಜ: ಇಂದು ಮೃತದೇಹ ಪತ್ತೆ
Team Udayavani, Apr 6, 2021, 11:18 AM IST
ಮಡಿಕೇರಿ: “ನಿನ್ನಮ್ಮ 2 ವಾರದಿಂದ ಕರೆದರೂ ಬರಲಿಲ್ಲ, ಅವಳನ್ನು ಪೆಟ್ರೋಲ್ ಹಾಕಿ ಸುಟ್ಟು ಬಿಟ್ಟೆ, ಅವಳ ಗೋಳು ನೋಡು ಹೋಗು” ಹೀಗೆಂದು ಗಂಡನ ಮನೆಯಲ್ಲಿರುವ ತನ್ನ ಮಗಳೊಂದಿಗೆ ಮೊಬೈಲ್ ಕರೆ ಮಾತನಾಡಿದವನು ಮುಗುಟಗೇರಿಯಲ್ಲಿ 7 ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡ ದುಷ್ಕರ್ಮಿ ಭೋಜ.
ಮುಗುಟಗೇರಿಯ ಲೈನ್ ಮನೆಯ ಮೇಲೇರಿ ಮಲಗಿದ್ದವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಂದವನೇ ನಿಗೂಢ ಜಾಗದಿಂದ ತನ್ನ ಮಗಳಿಗೆ ಕರೆ ಮಾಡಿದ್ದಾನೆ. ಈ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಾತು ಮುಂದುವರೆಸಿರುವ ಭೋಜ “ಅವಳನ್ನು ಪೆಟ್ರೋಲ್ ಹಾಕಿ ಸುಟ್ಟು ಬಿಟ್ಟೆ, ಅವಳ ಗೋಳು ನೋಡು ಹೋಗು, ಈಗ ನಾನು ಕೂಡ ಸಾಯ್ತೀನಿ ಎಂದು ಕರೆ ಕಟ್ ಮಾಡಿದ್ದಾನೆ.
ಇದನ್ನೂ ಓದಿ:ಪ್ರೇಮ ವಿಚಾರ: ಸಹೋದರಿ ಹತ್ಯೆ
ತನಿಖೆಯ ವೇಳೆ ಈ ಆಡಿಯೋ ತುಣುಕು ಬಹಿರಂಗಗೊಂಡಿದೆ. ಇದೀಗ ಭೋಜ ಆತ್ಮಹತ್ಯೆಗೆ ಶರಣಾಗಿರುವುದು ಖಾತ್ರಿಯಾಗಿದ್ದು, ಪೊನ್ನಂಪೇಟೆ ಸಮೀಪ ತಾನಿದ್ದ ಲೈನ್ ಮನೆಯ ತೋಟದಲ್ಲಿ ಮೃತದೇಹ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಮತ್ತೊಂದೆಡೆ ಮೈಸೂರು ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ತೋಲ ಅವರ ಪತ್ನಿ ಭಾಗ್ಯ (28) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ್ದಿದ್ದಾರೆ. ಇವರ ಇಬ್ಬರು ಮಕ್ಕಳು ಘಟನೆ ನಡೆದ ದಿನವೇ ಮೃತ ಪಟ್ಟಿದ್ದರು. ಮುಗುಟಗೇರಿ ಘಟನೆಯಲ್ಲಿ ಮೃತರಾದವರ ಸಂಖ್ಯೆ ಈಗ 7 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಕೊಣಾಜೆ ಕಂಬ್ಲಪದವು ಗುಳಿಗ ದೈವದ ಕಟ್ಟೆಯಲ್ಲಿ ‘ಚಪ್ಪಲಿ’ ಪತ್ತೆ!
ಏಳು ಅಮಾಯಕರನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಭೋಜನ ಮನೋಸ್ಥಿತಿಯ ಬಗ್ಗೆ ಸಮಾಜದಲ್ಲಿ ಧಿಕ್ಕಾರದ ಮನೋಭಾವನೆ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ