ಮತ ಯಂತ್ರಗಳಲ್ಲಿ ಸುಭದ್ರ: ಯಾರ ಕೊರಳಿಗೆ ವಿಜಯಮಾಲೆ?

ಮಹಾ ಚುನಾವ‌ಣೆ ಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ

Team Udayavani, Apr 23, 2019, 6:02 AM IST

vijayamale

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾರರು ನೀಡಿರುವ ಮತದಾನದ ತೀರ್ಪು ಮತಯ ಂತ್ರಗಳಲ್ಲಿ ಭದ್ರವಾಗಿರುವ ಬೆನ್ನಲ್ಲೇ ವಿಜೇತ ಅಭ್ಯರ್ಥಿ ಯಾರಾಗಬಹುದೆನ್ನುವ ಲೆಕ್ಕಾಚಾರಗಳು ಗರಿಗೆದರಲಾರಂಭಿಸಿದೆ.

ಈ ಕ್ಷೇತ್ರದಲ್ಲಿ 22 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದರು ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಮತ್ತು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿಜಯಶಂಕರ್‌ ಅವರ ನಡುವೆ ನೇರಾನೇರ ಹಣಾಹಣಿ ನಡೆದಿರುವುದರಿಂದ, ಇವರಿಬ್ಬರಲ್ಲಿ ವಿಜಯಮಾಲೆ ಯಾರ ಕೊರಳಿಗೆ ಬೀಳಬಹುದೆನ್ನುವ ವಿಶ್ಲೇಷಣೆಗಳು ನಡೆಯುತ್ತಿದೆ.

ಜಿಲ್ಲೆಯಲ್ಲಿ 4,40,730 ಮತದಾರರಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,21,157 ಮತದಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 2,19,573 ಮತದಾರರಿದ್ದಾರೆ. ಮಡಿಕೇರಿ ಕ್ಷೇತ್ರದಲ್ಲಿ ಶೇ. 76.55 ರಷ್ಟು ಮತ್ತು ವೀರಾಜಪೇಟೆ ಕ್ಷೇತ್ರದಲ್ಲಿ ಶೇ. 72.52 ರಷ್ಟು ಮತದಾನವಾಗಿದೆ.

ದೊಡ್ಡ ಸಂಖ್ಯೆಯಲ್ಲಿ ಮತಗಟ್ಟೆಗೆ ಹರಿದು ಬಂದ ಮತದಾರನ ಒಲವು ಯಾರತ್ತ ತಿರುಗಿದೆ ಎನ್ನುವುದನ್ನು ಸ್ಪಷ್ಟಪಡಿಸಿಕೊಳ್ಳಲು ಮೇ 23 ರ ವರೆಗೆ ಕಾಯುವುದು ಅನಿವಾರ್ಯವಾಗಿದೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಕೂಟ ಅಹಿಂದ ಮತಗಳ ಮೇಲೆ ಹೆಚ್ಚು ವಿಶ್ವಾಸವಿಟ್ಟುಕೊಂಡಿದ್ದು, ಪ್ರತಾಪ್‌ಸಿಂಹ ಅವರ ವೈಫ‌ಲ್ಯಗಳ ಲಾಭವೂ ನಮಗೆ ಆಗಲಿದೆ ಎಂದು ಮೈತ್ರಿ ಪಕ್ಷಗಳ ನಾಯಕರು ಬೀಗುತ್ತಿದ್ದಾರೆ. ಮೈಸೂರು ಕ್ಷೇತ್ರದಲ್ಲಿ ಬಿಜೆಪಿಗೆ ಮತ ಕೊರತೆ ಎದುರಾಗಬಹುದೆನ್ನುವ ಆತಂಕದಲ್ಲಿರುವ ನಾಯಕರು ಆ ಭಾಗದಲ್ಲಿ ಕಳೆದುಕೊಂಡ ಮತಗಳನ್ನು ಸರಿದೂಗಿಸುವ ಶಕ್ತಿ ಕೊಡಗಿನಲ್ಲಿದೆ ಎನ್ನುವ ಧೈರ್ಯವನ್ನೂ ವ್ಯಕ್ತಪಡಿಸುತ್ತಾರೆ. ಅಭ್ಯರ್ಥಿ ಪ್ರತಾಪ್‌ಸಿಂಹ ಕೂಡ ಈ ಚುನಾವಣೆಯಲ್ಲಿ ಒಂದಷ್ಟು ಹೆಚ್ಚಿನ ಸಮಯವನ್ನು ಕೊಡಗಿಗೆ ಮೀಸಲಿಟ್ಟಿದ್ದುದಲ್ಲದೆ, ಮತದಾನದ ದಿನವೂ ಮಡಿಕೆೇರಿಯ ಕೆಲವು ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಮನವೊಲಿಸುವ ಪ್ರಯತ್ನ ಮಾಡಿದ್ದರು.

ಬಿಜೆಪಿಯ ಭದ್ರಕೋಟೆಯನ್ನು ಜೆಡಿಎಸ್‌ನೊಂದಿಗಿನ ಮೈತ್ರಿಯ ಮೂಲಕ ಒಡೆದು ವಿಜಯ ಪತಾಕೆ ಹಾರಿಸುವ ಪ್ರಯತ್ನ ಕಾಂಗ್ರೆಸ್‌ನಿಂದಲು ನಡೆದಿದೆ. ಇದಕ್ಕೆ ಆರಂಭಿಕ ಹಂತದಲ್ಲಿ ಜೆಡಿಎಸ್‌ನೊಳಗಿನ ಆಂತರಿಕ ಭಿನ್ನಮತ ತೊಡಕಾಗಿ ಕಂಡು ಬಂದಿತಾದರು, ಆ ನಂತರದ ದಿನಗಳಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆದಿದೆ ಎಂದು ಮುಖಂಡರೂ ಹೇಳಿಕೊಳ್ಳುತ್ತಿದ್ದು, ಇದು ಎಷ್ಟರ ಮಟ್ಟಿಗೆ ಮತವಾಗಿ ಪರಿವರ್ತನೆಯಾಗಿದೆ ಎನ್ನು ವುದರ ಮೇಲೆ ವಿಜಯಶಂಕರ್‌ ಭವಿಷ್ಯ ನಿರ್ಧಾರವಾಗಲಿದೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ಸಂಸದ ಪ್ರತಾಪಸಿಂಹ ಅವರ ನಡೆಯ ಬಗ್ಗೆ ಸ್ಥಳೀಯ ಶಾಸಕರಿಂದ ಆಕ್ಷೇಪವೂ ವ್ಯಕ್ತವಾಗಿತ್ತು. ತಮ್ಮ ಪಕ್ಷದ ಕೆಲವು ಮುಖಂಡ ರೊಂದಿಗೂ ಮನಸ್ತಾಪ ಮಾಡಿಕೊಂಡಿದ್ದರು ಸಿಂಹ. ಈ ಎಲ್ಲÉ ಕಾರ್ಮೋಡಗಳು ಒಮ್ಮೆಗೆ ಕರಗಿ ಬಿಜೆಪಿಯ ನಾಗಾಲೋಟ ಮುಂದುವರಿಯುತ್ತದೆಯೆ ಅಥವಾ ವಿಜಯದ ಹಾದಿಯಲ್ಲಿ ಎಡವಿದೆಯೇ ಎಂಬುವುದನ್ನು ಕಾದು ನೋಡಬೇಕಾಗಿದೆ.

ಈ ಎಲ್ಲ ರಾಜಕೀಯ ಬೆಳವಣಿಗೆಗಳ ನಡುವೆ ಪ್ರಸ್ತಾಪಿಸಲ್ಪಟ್ಟಿರುವ ಮೋದಿ ಅಲೆ ತಳಮಟ್ಟದಲ್ಲಿ ನಿಜಕ್ಕೂ ಕೆಲಸ ಮಾಡಿದೆಯೇ ಅಥವಾ ಇದೊಂದು ಕೇವಲ ಭ್ರಮೆಯೇ ಎನ್ನುವುದು ಕೂಡ ಮೇ 23 ರಂದು ಸ್ಪಷ್ಟವಾಗಲಿದೆ.

ಕಾದು ನೋಡಬೇಕು
ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇà ಇದ್ದು, ಕೊಡಗು ಜಿಲ್ಲೆ ಬಿಜೆಪಿಯ ಭದ್ರಕೊಟೆ ಎನ್ನುವ ಹಣೆಪಟ್ಟಿಯನ್ನು ಹೊತ್ತಿದೆ. ಅದಕ್ಕೆ ತಕ್ಕಂತೆ ಬಿಜೆಪಿ ಪ್ರಮುಖರು ಈ ಬಾರಿ ಲೋಕಸಭೆಯಲ್ಲಿ ಬಿಜೆಪಿಯೇ ಗೆಲುವು ಸಾಧಿಸುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ಅಭ್ಯರ್ಥಿಯ ಹೆಸರನ್ನು ಅಷ್ಟಾಗಿ ಪ್ರಸ್ತಾವಿಸದೆ ಮೋದಿ, ತಾವರೆ, ದೇಶದ ಭದ್ರತೆಯ ಹೆಸರಿನಲ್ಲಿ ಪ್ರತಾಪ್‌ಸಿಂಹ ಪರ ಮತಯಾಚಿಸಿರುವ ಬಿಜೆಪಿ ತಂತ್ರಗಾರಿಕೆ ಫ‌ಲ ನೀಡುವುದೇ ಅಥವಾ ಮೈತ್ರಿ ಮಂತ್ರ ಫ‌ಲ ನೀಡುವುದೇ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.