ಪ್ರಕೃತಿ ವಿಕೋಪ 74.54 ಕೋ.ರೂ. ವಿಶೇಷ ಅನುದಾನ ಬಿಡುಗಡೆಗೆ ಮನವಿ


Team Udayavani, Mar 3, 2019, 1:00 AM IST

prakruti-vikopa.jpg

ಮಡಿಕೇರಿ: ಕೊಡಗು ಜಿಲ್ಲೆಯು ಬೆಟ್ಟಗುಡ್ಡಗಳಿಂದ ಕೂಡಿದ ಮಲೆನಾಡು ಪ್ರದೇಶವಾಗಿದ್ದು, ಈ  ಜಿಲ್ಲೆಗೆ   ಕಂಟಕವೆಂಬಂತೆ ಇತ್ತೀಚೆಗೆ ಜಲಪ್ರಳಯ ಉಂಟಾಗಿ ಕೊಡಗು ಜಿಲ್ಲೆಯು ಅಕ್ಷರಶಃ ನಲುಗಿ ಹೋಗಿತ್ತು. ಆದ್ದರಿಂದ ಜಿಲ್ಲೆಯನ್ನು ಮೊದಲಿನ ಸ್ಥಿತಿಗೆ ತರುವಲ್ಲಿ ವಿಶೇಷ ಗಮನ ಹರಿಸಬೇಕಾಗಿದೆ. ಅಲ್ಲದೆ ಈ ಬಗ್ಗೆ ಈ ಹಿಂದೆಯೂ ಮನವಿ ಸಲ್ಲಿಸಿದ್ದು, ಜಿಲ್ಲೆಯ ಹಿತದೃಷ್ಟಿಯಿಂದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಮೂಲಕ ಜಿಲ್ಲೆಯ ಸಂಕಷ್ಟವನ್ನು ಬಗೆಹರಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್‌ ಅವರು ಮನವಿ ಮಾಡಿದ್ದಾರೆ.  

ಜಿಲ್ಲೆಯಲ್ಲಿನ ರಸ್ತೆಗಳು, ಸೇತುವೆಗಳು, ಕೆರೆ ಕಟ್ಟೆಗಳು ಕೊಚ್ಚಿ ಹೋಗಿದ್ದು, ಈ ಬಗ್ಗೆ ಸರ್ಕಾರಕ್ಕೆ 172.62 ಕೋ.ರೂ. ಗಳ ವೆಚ್ಚದ ವರದಿಯನ್ನು ಜಿಲ್ಲಾಡಳಿತ ನೀಡಿರುವುದರಿಂದ ಕೂಡಲೇ ವಿಶೇಷವಾಗಿ ರಸ್ತೆ, ಸೇತುವೆ, ಕೆರೆ ಕಟ್ಟೆಗಳು ತಡೆಗೋಡೆ ನಿರ್ಮಿಸಲು ವಿಶೇಷ ಅನುದಾನ 74.54 ಕೋ. ರೂ. ಮಂಜೂರು ಮಾಡುವಂತೆ ಕೋರಿದರು.      

ಜಿಲ್ಲೆಯಲ್ಲಿ ಈಗಾಗಲೇ ಭತ್ತ, ಜೋಳ ಬೆಳೆದ 11,448 ಹೆಕ್ಟೇರ್‌ ವ್ಯಾಪ್ತಿಯಲ್ಲಿ ಬೆಳೆ ನಾಶವಾಗಿದ್ದು, ಈ ಬಗ್ಗೆ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡುವ ಮೂಲಕ ರೈತರಿಗೆ ದೀರ್ಘಾವಧಿಗೆ ಮರು ಸಾಲ ನೀಡುವುದು.

ಜಿಲ್ಲೆಯಲ್ಲಿನ ಹೆಚ್ಚಿನ ಸಂಖ್ಯೆಯಲ್ಲಿ ಕಾಫಿ ಬೆಳೆಗಾರರೇ ವಾಸಿಸುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ ಅಂದಾಜು 9,482.61 ಲಕ್ಷ ರೂ. ಬೆಳೆ ನಷ್ಟ ಹೊಂದಿರುವುದರಿಂದ ತಾವುಗಳು ವಿಶೇಷವಾಗಿ ಕಾಫಿ ಬೆಳೆಗಾರರಿಗೆ ಪರಿಹಾರ ನೀಡುವ ಮೂಲಕ ಕಾಫಿ ಬೆಳೆಗಾರರ ಸಂಪೂರ್ಣ ಸಾಲ ಮನ್ನಾ ಮಾಡುವಂತಾಗಬೇಕು ಎಂದರು. 

ಜಿಲ್ಲೆಯಲ್ಲಿ ಅಂದಾಜು 551.43 ಹೆಕ್ಟೇರ್‌ ಜಮೀನು ಕೊಚ್ಚಿ ಹೋಗಿದ್ದು, ಇದರಿಂದ ರೈತರು ಆತಂಕ ಸ್ಥಿತಿಯಲ್ಲಿದ್ದಾರೆ. ಆದ್ದರಿಂದ ಈ ರೀತಿ ಜಮೀನು ಕಳೆದುಕೊಂಡ ರೈತರಿಗೆ ಈಗಾಗಲೇ ಸಿ ಮತ್ತು ಡಿ ವರ್ಗದ ಜಮೀನನ್ನು ಸರ್ಕಾರ ವಾಪಸ್ಸು ಪಡೆದಿರುವುದರಿಂದ ಇಂತಹ ಜಮೀನನ್ನು ರೈತರಿಗೆ ಹಂಚಿಕೆ ಮಾಡುವಂತಾಗಬೇಕು ಎಂದು ಶಾಸಕರು ಕೋರಿದರು.   ಸಿ ಮತ್ತು ಡಿ ಜಮೀನನ್ನು ಲ್ಯಾಂಡ್‌ ಬ್ಯಾಂಕಿನಿಂದ ಈಗಾಗಲೇ ರಾಜ್ಯ ಸರ್ಕಾರ ವಾಪಸ್ಸು ಪಡೆದಿರುವುದರಿಂದ ಅದನ್ನು ಜಮೀನು ಕಳೆದುಕೊಂಡ ರೈತರಿಗೆ ಹಂಚುವುದು ಹಾಗೂ ರೈತರು ಈಗಾಗಲೇ ಒತ್ತುವರಿ ಮಾಡಿರುವ ಜಮೀನನ್ನು ಅವರವರ ಹೆಸರಿಗೆ ಮಂಜೂರು ಮಾಡುವುದು.  

ಈಗಾಗಲೇ ಕೆಲವು ಕಡೆ ಗುಡ್ಡದ ಮೇಲೆ ಮನೆ ನಿರ್ಮಿಸಿಕೊಂಡಿರುವ ಕಡೆಗಳಲ್ಲಿ ಗುಡ್ಡಗಳು ಬಿರುಕು ಬಿಟ್ಟಿದ್ದು, ಮುಂದೆ ಅಪಾಯವಾಗುವ ಸಂಭವ ಹೆಚ್ಚು. ಈ ಪ್ರದೇಶ ವಾಸ ಮಾಡಲು ಸೂಕ್ತವಾಗಿರುವುದಿಲ್ಲ. ಆದುದರಿಂದ ಇಂಥ‌ವರಿಗೂ ಹೊಸದಾಗಿ ಮನೆ ನೀಡಬೇಕು. 

ಈಗಾಗಲೇ ಮನೆಯಲ್ಲಿದ್ದ ಬೆಲೆಬಾಳುವ ಸಾಮಗ್ರಿ, ಚಿನ್ನಾಭರಣ, ಆಹಾರ ಧಾನ್ಯವನ್ನೊಳಗೊಂಡಂತೆ ವಸ್ತುಗಳನ್ನು ಕಳೆದುಕೊಂಡವರಿಗೆ ಅವರ ಜೀವನ ನಿರ್ವಹಣೆಗೆ ಪರಿಹಾರ ನೀಡಬೇಕು. ಗುಡ್ಡಗಳು ಕುಸಿದು ಮಣ್ಣು ಒಂದೆಡೆ ಸೇರಿದ್ದು, ಕೆಲವು ಕಡೆ ತುಂಬಾ ಇಳಿಜಾರು ಪ್ರದೇಶವಾಗಿರುವುದನ್ನು ಸರ್ಕಾರದ ಅನುದಾನದಲ್ಲಿ ಅದನ್ನು    ಸಮತಟ್ಟು ಪಡಿಸಿ ರೈತರು ಪುನಃ ವ್ಯವಸಾಯ ಮಾಡಲು ಯೋಗ್ಯವಾಗುವಂತೆ ಭೂಮಿಯನ್ನು ಸರ್ಕಾರದ ಅನುದಾನದಲ್ಲಿಯೇ ಹದ ಮಾಡಬೇಕು ಎಂದು ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್‌ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.