ನೆಲ್ಲಿಯರ ಕಾಲನಿ: 11 ಕುಟುಂಬಗಳಿಗೆ ಸರಕಾರದ ನೆರಳಲ್ಲಿ ಹೊಸಬಾಳು


Team Udayavani, Jul 6, 2019, 5:24 AM IST

05KSDE2

ಕಾಸರಗೋಡು: ಜಿಲ್ಲೆಯ ನೆಲ್ಲಿಯರ ಕಾಲನಿಯ ಹನ್ನೊಂದು ಕುಟುಂಬಗಳಿಗೆ ಸರಕಾರದ ನೆರಳು ಹೊಸಬಾಳು ಒದಗಿಸು ತ್ತಿದೆ. ಲೋಕಸಭೆ ಚುನಾವಣೆಯ ಬಿರುಸಿ ನಲ್ಲಿದ್ದ ವೇಳೆ ಜಿಲ್ಲೆಯ ಮಲೆನಾಡ ಪ್ರದೇಶದಲ್ಲಿ ಸುರಿದ ಭಾರೀ ಗಾಳಿಮಳೆಗೆ ಎಲ್ಲವನ್ನೂ ಕಳೆದುಕೊಂಡು ಕಂಗೆಟ್ಟಿದ್ದ 11 ಕುಟುಂಬಗಳ 47 ಮಂದಿಗೆ ರಾಜ್ಯ ಸರಕಾರ ಶಾಶ್ವತ ಪುನರ್ವಸತಿ ಒದಗಿಸುವ ಯತ್ನದಲ್ಲಿ ಮುಂದುವರಿಯುತ್ತಿದೆ.

ಕಿನಾನೂರು-ಕರಿಂದಳಂ ಗ್ರಾಮ ಪಂಚಾ ಯತ್‌ ವ್ಯಾಪ್ತಿಯ ನೆಲ್ಲಿಯರ ಕಾಲನಿಯಲ್ಲಿ ವಾಸಿಸುತ್ತಿದ್ದ 11 ಕುಟುಂಬಗಳು ಈ ಪ್ರಯೋಜನ ಪಡೆಯಲಿವೆ. ಕೂಲಿ ಕಾಯಕ ನಡೆಸುತ್ತಿರುವವರ ಸಹಿತ ಬಡವರೇ ವಾಸಿಸುತ್ತಿರುವ ಈ ಕಾಲನಿಯಲ್ಲಿ ಇದು ನುಂಗಲಾರದ ತುತ್ತಾಗಿತ್ತು. ಕಳೆದ ಎ. 23ರಂದು ಅನಿರೀಕ್ಷಿತವಾಗಿ ಅಪ್ಪಳಿಸಿದ ಬೇಸಗೆ ಮಳೆಯ ಬಿರುಸಿಗೆ ಈ ಮಂದಿ ಸರ್ವಸ್ವವನ್ನೂ ಕಳೆದುಕೊಂಡು ಅನಾಥರಾಗಿದ್ದರು. ಇಲ್ಲೇ ಹುಟ್ಟಿ, ಇಲ್ಲೇ ಬೆಳೆದ ಈ ಮಂದಿ ಬದುಕಿನಲ್ಲಿ ಮಾಡಿಕೊಂಡಿದ್ದ ಮನೆ ಮತ್ತು ಬದುಕು ಒಂದೇ ದಿನದಲ್ಲಿ ನೆಲಸಮವಾಗಿತ್ತು.

ತಾತ್ಕಾಲಿಕ ಪುನರ್ವಸತಿಯಾಗಿ ಪರಪ್ಪ ಶಾಲೆಯಲ್ಲಿ ಈ ಮಂದಿಗೆ ಆಸರೆ ಒದಗಿಸ ಲಾಗಿತ್ತು. ಅನಂತರ ಇಲ್ಲಿನ ಸಮುದಾಯ ಸಭಾಂಗಣಕ್ಕೆ ಇವರನ್ನು ಸ್ಥಳಾಂತರಿಸ ಲಾಗಿತ್ತು. ಆದರೆ ಎಷ್ಟು ದಿನ ಇದೇ ಸ್ಥಿತಿಯಲ್ಲಿ ಬದುಕ ಬೇಕು ಎಂಬ ಚಿಂತೆ ಆಬಾಲವೃದ್ಧರನ್ನು ಕಾಡ ತೊಡಗಿತ್ತು. ಆದರೆ ಈ ದುಃಸ್ಥಿತಿಯನ್ನು ಗಮನಿ ಸಿದ ರಾಜ್ಯ ಸರಕಾರ ತತ್‌ಕ್ಷಣ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಂಡಿತ್ತು. ಪರಿಶಿಷ್ಟ ಪಂಗಡ ಅಭಿವೃದ್ಧಿ ನೇತೃತ್ವದಲ್ಲಿ ಕಿನಾನೂರು- ಕರಿಂದಳಂ ಗ್ರಾ. ಪಂ. ಮತ್ತು ಸಾರ್ವಜನಿಕರು ಪರಿಹಾರಕ್ಕೆ ಯತ್ನಿಸಿದ್ದರು. ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆಯ 2019-20 ವರ್ಷದ ಕಾರ್ಪ್‌ ನಿಧಿಯಲ್ಲಿ ಅಳವಡಿಸಿ ಮೊದಲ ಹಂತವಾಗಿ ವಿವಿಧೋದ್ದೇಶ ಸಮುದಾಯ ಸಭಾಂಗಣ ನಿರ್ಮಿಸಿದೆ. ಕೆಲವು ತಾಂತ್ರಿಕ ಸಮಸ್ಯೆಗಳಿ ದ್ದರೂ, ಪ್ರಾಮಾಣಿಕ ಯತ್ನಗಳ ಫಲವಾಗಿ ಕೇವಲ 27 ದಿನಗಳಲ್ಲಿ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದೆ. ಜೂ.16ರಂದು ಈ ಕುಟುಂಬಗಳ ಮಂದಿ ಈ ಕಟ್ಟಡಕ್ಕೆ ಸ್ಥಳಾಂತರ ಗೊಂಡಿದ್ದಾರೆ. ರೆಡ್‌ ಕ್ರಾಸ್‌ ಸಂಸ್ಥೆಯ ವತಿ ಯಿಂದ ಒಂದೊಂದು ಕುಟುಂಬಕ್ಕೂ ತಲಾ 2 ಮಂಚ, ಹಾಸುಗೆ, ತಲೆದಿಂಬು, ಗ್ಯಾಸ್‌ ಸ್ಟವ್‌ ಇತ್ಯಾದಿ ಒದಗಿಸಲಾಗಿದೆ.

ಮುಂದಿನ ಒಂದೇ ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಯಾ ರಾಜ್ಯ ಸರಕಾರದ ಲೈಫ್‌ ಯೋಜನೆ ಪ್ರಕಾರ ಈ ಮಂದಿಗೆ ಸ್ವಂತ ಮನೆ ನಿರ್ಮಿಸಿ ನೀಡ ಲಾಗುವುದು ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.