ನಿರ್ಮಲಾ ಪರ ರಕ್ಷಣಾ ಸಚಿವಾಲಯ ಸಮರ್ಥನೆ​​​​​​​


Team Udayavani, Aug 26, 2018, 6:00 AM IST

nirmala-defense-ministr.jpg

ಮಡಿಕೇರಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೊಡಗು ಭೇಟಿಯ ಸಂದರ್ಭ ಜಿಲ್ಲಾಡಳಿತದೊಂದಿಗೆ ನಡೆದ 
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಅವರ ವಿರುದ್ಧ ಗರಂ ಆಗಿದ್ದರೆಂದು ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿರುವುದಕ್ಕೆ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ರಕ್ಷಣಾ ಸಚಿವಾಲಯ, ಶುಕ್ರವಾರದ ಕಾರ್ಯಕ್ರಮದ ಪೂರ್ಣ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ. ಕೆಲವು ಮಾಧ್ಯಮಗಳು ಜಿಲ್ಲಾ ಉಸ್ತುವಾರಿ ಸಚಿವರು ರಕ್ಷಣಾ ಸಚಿವರ ಬಗ್ಗೆ ವೈಯಕ್ತಿಕ ಟೀಕೆ ಮಾಡಿರುವುದಾಗಿ ವರದಿಯಾಗಿದೆ.

ಆದರೆ, ಈ ಟೀಕೆ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಘನತೆಗೆ ಚ್ಯುತಿ ಉಂಟು ಮಾಡುವ ಮತ್ತು ಭಾರತದ ರಾಜಕೀಯ ವ್ಯವಸ್ಥೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವುದೇ ಗೌರವ ಮತ್ತು ತಿಳಿವಳಿಕೆ ಇಲ್ಲ ಎಂಬುದನ್ನು ತೋರಿಸಿದೆ ಎಂದು ತಿಳಿಸಿದೆ.

ಜಿಲ್ಲಾಡಳಿತವೇ ಕಾರ್ಯಕ್ರಮ ಪಟ್ಟಿ ಅಂತಿಮಗೊಳಿಸಿತ್ತು: ರಕ್ಷಣಾ ಸಚಿವರ ಪ್ರವಾಸ ಕಾರ್ಯಕ್ರಮವನ್ನು ಸ್ಥಳೀಯ ಜನಪ್ರತಿನಿಧಿ
ಗಳೊಂದಿಗೆ ಸಮಾಲೋಚಿಸಿ ಕೊಡಗು ಜಿಲ್ಲಾಡಳಿತವೇ ಅಂತಿಮಗೊಳಿಸಿದ್ದು, ಸಚಿವರು ಭೇಟಿ ನೀಡುವ ಎರಡು ದಿನಗಳ ಮೊದಲೇ ಸಂಬಂಧಿಸಿದವರಿಗೆ ಪ್ರವಾಸದ ವಿವರ ಕಳುಹಿಸಲಾಗಿತ್ತು. ನಂತರ ಜಿಲ್ಲಾಡಳಿತದ ಮನವಿ ಮೇರೆಗೆ ಸ್ಥಳೀಯ ಗಣ್ಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಪಟ್ಟಿಗೆ ಸೇರಿಸಲಾಗಿತ್ತು. 

ಹಾನಿಗೀಡಾದ ಪ್ರದೇಶಗಳ ಭೇಟಿಯ ನಂತರ ನೆರೆಯಿಂದ ತೀವ್ರ ತೊಂದರೆಗೊಳಗಾದ ನಿವೃತ್ತ ಸೈನಿಕರೊಂದಿಗೆ ರಕ್ಷಣಾ ಸಚಿವರು ಸಂವಾದ ನಡೆಸುವಾಗ ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಆಕ್ಷೇಪ ವ್ಯಕ್ತಪಡಿಸಿ,ಅಧಿಕಾರಿಗಳ ಸಭೆಯನ್ನು ಮೊದಲು ನಡೆಸುವಂತೆ ವಾದಿಸಿದರು. ಆದರೆ, ಮಾಜಿ ಸೈನಿಕರ ಯೋಗಕ್ಷೇಮವೂ ರಕ್ಷಣಾ ಇಲಾಖೆಯ ಆದ್ಯತೆಗಳಲ್ಲಿ ಒಂದಾದ ಕಾರಣ ರಕ್ಷಣಾ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದರು. ಆದರೂ, ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಸಭೆ ನಿಲ್ಲಿಸಿಅಧಿಕಾರಿಗಳ ಸಭೆಗೆ ಹೋಗಬೇಕೆಂದು ಒತ್ತಾಯಿಸಿದರು. ಆಗ ಪರಿಸ್ಥಿತಿಯನ್ನು ಅರಿತ ರಕ್ಷಣಾ ಸಚಿವರು ಮತ್ತಷ್ಟು ಗೊಂದಲ ಉಂಟಾಗುವುದನ್ನು ತಪ್ಪಿಸಲು ಆ ಸಭೆಯನ್ನು ಸ್ಥಗಿತಗೊಳಿಸಿ ಅಧಿಕಾರಿಗಳ ಸಭೆಗೆ ತೆರಳಿದರು.

ಅಲ್ಲಿ ಆಗಲೇ ಪತ್ರಿಕಾಗೋಷ್ಠಿಯ ವ್ಯವಸ್ಥೆ ಮಾಡಲಾಗಿತ್ತು. ಅದೇ ಸ್ಥಳಕ್ಕೆ ಅಧಿಕಾರಿಗಳನ್ನು ತರಾತುರಿಯಲ್ಲಿ ಕರೆಸಿ ಮಾಧ್ಯಮ ಪ್ರತಿನಿಧಿಗಳ ಉಪಸ್ಥಿತಿಯಲ್ಲೇ ಅಧಿಕಾರಿಗಳ ಸಭೆ ಆರಂಭಿಸಲಾಯಿತು. ಎಲ್ಲಾ ಮಾಧ್ಯಮ ಪ್ರತಿನಿಧಿಗಳ ಎದುರಿನಲ್ಲೇ ಪರಿಶೀಲನಾ ಸಭೆ ನಡೆಸುವ ನಿದರ್ಶನ ಇಲ್ಲವಾದರೂ, ಪರಿಸ್ಥಿತಿಯನ್ನು ತಿಳಿಯಾಗಿಸಲು ಸಭೆ ನಡೆಸಲಾಯಿತು. ಅದಾದ ಬಳಿಕ, ರಕ್ಷಣಾ ಸಚಿವರು ತಮಗಾಗಿ ಕಾದಿದ್ದ ಮಾಜಿ ಸೈನಿಕರೊಂದಿಗೆ ಸಂವಾದ ನಡೆಸಿ ಅವರ ಅಹವಾಲು ಆಲಿಸಿದರು.

ಜಿಲ್ಲಾಡಳಿತವೇ ಅಂತಿಮಗೊಳಿಸಿದ ಕಾರ್ಯಕ್ರಮದಪ್ರಕಾರವೇ ರಕ್ಷಣಾ ಸಚಿವರು ಸಭೆ ನಡೆಸಿದರೂ, ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಪ್ರತಿಕ್ರಿಯೆ ಮತ್ತು ಅವರ ಟೀಕೆ ದುರದೃಷ್ಟಕರ ಎಂದು ಎಂದು ಪತ್ರಿಕಾ ಹೇಳಿಕೆಯಲ್ಲಿ ವಿಷಾದಿಸಲಾಗಿದೆ. ರಕ್ಷಣಾ ಸಚಿವರ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆ ಕೀಳು ಅಭಿರುಚಿಯಿಂದ ಕೂಡಿದ್ದಾಗಿದ್ದು, ಅವರ ನಡವಳಿಕೆ ಪ್ರತಿಕ್ರಿಯೆಗೂ ಯೋಗ್ಯವಲ್ಲ. ಅಲ್ಲದೆ, ಪತ್ರಿಕಾಗೋಷ್ಠಿಯಲ್ಲಿ ಸಚಿವರು ಪರಿವಾರ ಎಂದು ಉಲ್ಲೇಖೀಸಿದ್ದನ್ನು ತಪ್ಪಾಗಿ ವ್ಯಾಖ್ಯಾನಿಸಿರುವುದೂ ಗಮನಕ್ಕೆ ಬಂದಿದೆ. ರಕ್ಷಣಾ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ನಿವೃತ್ತ ಸೈನಿಕರ ಕಲ್ಯಾಣವೂ ಒಂದಾಗಿದ್ದು, ರಕ್ಷಣಾ ಇಲಾಖೆಯ ಪರಿವಾರದಲ್ಲಿ ನಿವೃತ್ತ ಸೈನಿಕರು ಸೇರುತ್ತಾರೆಂಬ ಅರ್ಥದಲ್ಲಿ ಪರಿವಾರ ಎನ್ನುವ ಪದ ಬಳಕೆ ಮಾಡಲಾಗಿದೆ. ಉಳಿದಂತೆ ಬೇರೆಲ್ಲ ಅಭಿಪ್ರಾಯಗಳೂ ಅಪಾರ್ಥದಿಂದ ಕೂಡಿರುವುದಲ್ಲದೆ ಖಂಡನೀಯವಾಗಿವೆ ಎಂದು ಪ್ರಕಟಣೆಯಲ್ಲಿ ಟೀಕಿಸಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.