ಹೋಂ ಸ್ಟೇಗಳಿಗೆ ಹಾನಿಯಾಗಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ


Team Udayavani, Aug 24, 2018, 6:00 AM IST

chamundeshwari-nagara-3.jpg

ಮಡಿಕೇರಿ: ಜಿಲ್ಲೆಯ ಹಲವೆಡೆ ಗುಡ್ಡ ಕುಸಿದು ಅಪಾರ ಪ್ರಮಾಣದ ನಷ್ಟವಾಗಿದೆ. ಮನೆ, ಜಮೀನು ನಾಶವಾಗಿದ್ದರೂ ಹೋಂಸ್ಟೇಗಳಿಗೆ ಹಾನಿಯಾಗಿರುವ ಕುರಿತು ಒಂದೇ ಒಂದು ದೂರು ಕೂಡ ಪ್ರವಾಸೋದ್ಯಮ ಇಲಾಖೆಗೆ ಬಂದಿಲ್ಲ.

ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆದಿರುವ 209 ಹೋಂಸ್ಟೇಗಳಿದ್ದು, ಇನ್ನೂ 320 ಹೋಂಸ್ಟೇ  ಅರ್ಜಿ ಇತ್ಯರ್ಥವಾಗದೇ ಪ್ರವಾಸೋದ್ಯಮ ಇಲಾಖೆಯಲ್ಲೇ ಉಳಿದುಕೊಂಡಿದೆ. ಇಷ್ಟು ಮಾತ್ರವಲ್ಲದೇ, ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆಯದೇ 3500ರಿಂದ 4000 ಸಾವಿರ ಹೋಂಸ್ಟೇಗಳು ಕಾರ್ಯನಿರ್ವಹಿಸುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಮೂಲಗಳು ಖಚಿತಪಡಿಸಿವೆ.

ಕಳೆದ ವಾರ ನಿರಂತರ ಮಳೆ ಸುರಿದ ಪರಿಣಾಮ ಜಿಲ್ಲೆಯ ಅನೇಕ ಭಾಗದಲ್ಲಿ ಗುಡ್ಡ ಕುಸಿದು ಅಪಾರ ಹಾನಿಯಾಗಿದೆ. 10 ಮಂದಿ ಜೀವ  ಕಳೆದುಕೊಂಡಿದ್ದಾರೆ. 1118 ಮನೆ ನಾಶವಾಗಿದೆ. 4,440 ಜನರನ್ನು ರಕ್ಷಣೆ ಮಾಡಲಾಗಿದೆ. 6996 ಜನರಿಗೆ 51 ನಿರಾಶ್ರಿತರ ಕೇಂದ್ರದಲ್ಲಿ ವ್ಯವಸ್ಥೆ ಮಾಡಿಕೊಡಲಾಗಿದೆ. ಇಷ್ಟೇಲ್ಲ ಆದರೂ, ಒಂದೇ ಒಂದು ಹೋಂಸ್ಟೇ ನಾಶವಾಗಿರುವ ಬಗ್ಗೆ ದೂರು ಬಂದಿಲ್ಲ.

ಜಿಲ್ಲಾಡಳಿತದಿಂದ ಪರವಾನಿಗೆ ತೆಗೆದುಕೊಳ್ಳದೇ ಹೋಂಸ್ಟೇ ನಡೆಸುತ್ತಿರುವುದರಿಂದ ಹಲವರು ಹಾನಿಯಾಗಿದ್ದರೂ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಕೆಲವರು ಮನೆ ಹಾನಿಯಾಗಿದೆ ಎಂದಷ್ಟೇ ದೂರು ಕೊಡುತ್ತಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಗನ್ನಾಥ್‌ ಅವರು ವಿವರಿಸಿದರು.

ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇಗಳ ಬಗ್ಗೆ ಜಿಲ್ಲಾಧಿಕಾರಿಗಳು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಮಡಿಕೇರಿ-ಸಂಪಾಜೆ ರಸ್ತೆಯಲ್ಲಿ ಇರುವ ಕಾವೇರಿ ಹೋಂಸ್ಟೇಗೆ ಹಾನಿಯಾಗಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಆದರೆ, ಅವರಿಂದ ಯಾವುದೇ ದೂರು ಬಂದಿಲ್ಲ. ಆ ಹೋಂಸ್ಟೇನಲ್ಲಿ ಅತಿಥಿಗಳು ಯಾರು ಇರಲಿಲ್ಲ. ಜಿಲ್ಲೆಯ ಯಾವುದೇ ಹೋಂಸ್ಟೇಗಳಲ್ಲಿಯೂ ಅತಿಥಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ. ಅನುಮತಿ ಪಡೆದು ನಡೆಸುತ್ತಿರುವ ಹೋಂಸ್ಟೇಗಳಲ್ಲಿ ಯಾವುದಕ್ಕೂ ಹಾನಿಯಾಗಿಲ್ಲ ಎಂಬ ಮಾಹಿತಿ ನೀಡಿದರು.

ರೆಸಾರ್ಟ್‌ಗೂ ಹಾನಿಯಾಗಿಲ್ಲ:
ಪ್ರವಾಸೋದ್ಯಮ ಇಲಾಖೆಯಿಂದ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಿರುವುದು 42 ರೆಸಾರ್ಟ್‌ಗಳು ಮಾತ್ರ. ಇನ್ನುಳಿದಂತೆ ಕೆಲವು ರೆಸಾರ್ಟ್‌ಗಳು ನಗರಾಭಿವೃದ್ಧಿ ಪ್ರಾಧಿಕಾರ, ನಗರ ಸಭೆ ಅಥವಾ ಗ್ರಾಮಪಂಚಾಯತಿ ಅನುಮತಿ ಪಡೆದು ನಡೆಸುತ್ತಿವೆ. ಇನ್ನು ಕೆಲವು ಅನುಮತಿ ಇಲ್ಲದೇ ನಡೆಸುತ್ತಿವೆ. ರೆಸಾರ್ಟ್‌ಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆಯಬೇಕಾಗಿಲ್ಲ. ಆದರೆ, ಗ್ರಾಮಪಂಚಾಯತಿ, ನಗರಸಭೆ ಅಥವಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ರೆಸಾರ್ಟ್‌, ಹೋಟೆಲ್‌ ಲಾಡ್ಜಿಂಗ್, ಬೋರ್ಡಿಂಗ್‌ ಸೇರಿದಂತೆ 300ರಿಂದ 350ಕ್ಕೂ ಅಧಿಕ ರೆಸಾರ್ಟ್‌ಗಳಿರಬಹುದು. ಆದರೆ, ಎಷ್ಟು ರೆಸಾರ್ಟ್‌ಗಳು ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿವೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಹಾಗೆಯೇ ಗುಡ್ಡ ಕುಸಿತ ಅಥವಾ ಮಳೆಯಿಂದ ಯಾವ ರೆಸಾರ್ಟ್‌ಗೂ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದರು.

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್: HDK ಆರೋಪ

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್: HDK ಆರೋಪ

Dk Suresh

Lok Sabha Election;ರಾಜಕೀಯ ಸಾಕು: ಅಚ್ಚರಿಯ ಹೇಳಿಕೆ ನೀಡಿದ ಸಂಸದ ಡಿ.ಕೆ.ಸುರೇಶ್

1-sdsadsa

Police ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದಿಲ್ಲ: ಡಾ.ಜಿ.ಪರಮೇಶ್ವರ್ ಎಚ್ಚರಿಕೆ

UT Khader met Rajya Sabha Chairman Jagdeep Dhankhar

ಶಾಸನ ಸಭೆಯ ಗೌರವ ಕಾಪಾಡಿ: ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ