ನಗರ ಸುತ್ತಮುತ್ತಲಿನ ಕನ್ನಡೇತರ ನಾಮಫ‌ಲಕ ತೆರವು ಕಾರ್ಯಾಚರಣೆ


Team Udayavani, Jul 4, 2019, 5:19 AM IST

namafalaka

ಮಡಿಕೇರಿ: ಕುಶಾಲನಗರ ರಸ್ತೆ ಬದಿ ಹಾಗೂ ವಿವಿಧ ಅಂಗಡಿ ಮಳಿಗೆಗಳ ಎದುರು ರಾರಾಜಿಸುತ್ತಿದ್ದ ಕನ್ನಡೇತರ ನಾಮಫ‌ಲಕಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಪಟ್ಟಣ ಪಂಚಾಯತ್‌ ಮುಂದಾಗಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬೃಹತ್ತಾದ ಕನ್ನಡೇತರ ನಾಮಫ‌ಲಕಗಳೇ ಹೆಚ್ಚಾಗಿ ರಾರಾಜಿಸುತ್ತಿದ್ದು, ಇದು ರಾಜ್ಯದ ಭಾಷಾ ನೀತಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿಸುವಂತೆ ಇಲ್ಲವೇ ಆ ನಾಮಫ‌ಲಕಗಳಲ್ಲಿ ಕನ್ನಡಕ್ಕೆ ಪ್ರಾಧಾನ್ಯತೆ ನೀಡುವಂತೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ಎಸ್‌.ಲೋಕೇಶ್‌ಸಾಗರ್‌ ಅವರು ಕೆಡಿಪಿ ಸಭೆಯಲ್ಲಿ ಗಮನ ಸೆಳೆದಿದ್ದರು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿರ್ವ ಹಣಾಧಿಕಾರಿಗಳು ಆಯಾ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇ ಶಿಸಿದ ಮೇರೆಗೆ ಆಯಾ ವ್ಯಾಪ್ತಿಯ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಸೋಮವಾರ ಕುಶಾಲನಗರ-ಮಡಿಕೇರಿ ರಾಜ್ಯ ಹೆದ್ದಾರಿಯ ಹೊಸಕೋಟೆ ಮತ್ತು ಶುಂಠಿಕೊಪ್ಪ ವ್ಯಾಪ್ತಿಗಳಲ್ಲಿ ರಾರಾಜಿಸುತ್ತಿದ್ದ ಕನ್ನಡೇತರ ಬೃಹತ್‌ ಜಾಹಿರಾತು ನಾಮಫ‌ಲಕಗಳನ್ನು ತೆರವುಗೊಳಿಸಿದ್ದಾರೆ. ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ನಿಮಯ ಉಲ್ಲಂಘಿಸಿ ಅಳವಡಿಸಿದ್ದ ಕನ್ನಡೇತರ ನಾಮಫ‌ಲಕಗಳನ್ನು ತೆರವು ಗೊಳಿಸುತ್ತಿರುವುದು ಕಂಡುಬಂದಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಅವರು, ಸರ್ಕಾರಿ ಆದೇಶದಂತೆ ನಾಮಫ‌ಲಕಗಳಲ್ಲಿ ಶೇ. 60ರಷ್ಟು ಜಾಗ ಕನ್ನಡ ಭಾಷೆಯಲ್ಲಿರಬೇಕು. ಉಳಿದಂತೆ ಅದರ ಕೆಳಭಾಗದಲ್ಲಿ ಶೇ.40ರಷ್ಟು ಜಾಗದಲ್ಲಿ ಅನ್ಯ ಭಾಷೆಗಳನ್ನು ಬಳಸಬಹುದಾಗಿದೆ ಎಂದು ಸುನಿಲ್ ಅವರು ಹೇಳಿದರು.

ಆದರೆ ಜಾಹೀರಾತು ಸಂಸ್ಥೆಗಳು ಮತ್ತು ಅಂಗಡಿ ಮಾಲಕರು ನಾಮಫ‌ಲಕ ಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡದೆ ಕನ್ನಡೇತರ ಭಾಷೆಗಳಿಗೆ ಆದ್ಯತೆ ನೀಡಿರುವುದು ಗೋಚರಿಸಿದೆ. ಇವುಗಳನ್ನು ತೆರವುಗೊಳಿಸಲು ಆಯಾಯ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಈಗಾಗಲೇ ಅಧಿಕಾರಿಗಳು ಕಾರ್ಯೋ ನ್ಮುಖರಾಗಿದ್ದಾರೆ. ಈ ನಿಯಮವನ್ನು ಉಲ್ಲಂಘಿಸಿದವರ ಅಂಗಡಿಯ ಪರವಾನಗಿಯನ್ನು ರದ್ದುಪಡಿಸುವಂತೆ ಸೂಚಿಸಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ತಾಲೂಕಿ ನಾದ್ಯಂತ ಎಲ್ಲ ಗ್ರಾ. ಪಂ. ಗಳ ವ್ಯಾಪ್ತಿ ಯಲ್ಲಿರುವ ಕನ್ನಡೇತರ ನಾಮ ಫ‌ಲಕ ತೆರವುಗೊಳಿಸುವಂತೆ ಅಭಿವೃದ್ಧಿ ಅಧಿ ಕಾರಿಗಳಿಗೆ ಸೂಚನೆ ನೀಡಲಾಗಿದೆ. ಗ್ರಾ. ಪಂ. ವ್ಯಾಪ್ತಿಗಳಲ್ಲಿ ನಾಮ ಫ‌ಲ ಕಗಳನ್ನು ಅಳವಡಿಸಲು ಒಪ್ಪಿಗೆ ಪತ್ರಕ್ಕೆ ಬರುವ ಸಂದರ್ಭ ಸರ್ಕಾರದ ನಿಯಮ ದಂತೆ ಶೇ.60ರಷ್ಟು ಕನ್ನಡ ಭಾಷೆ ನಾಮಫ‌ಲಕಗಳಿಗೆ ಅವಕಾಶ ನೀಡ ಬೇಕೆಂದು ಸೂಚಿಸಲಾಗಿದೆ ಎಂದರು.

500 ರೂ. ದಂಡ

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದೇಶದ ಮೇರೆಗೆ ಸುಂಟಿಕೊಪ್ಪ ಪಟ್ಟಣದಲ್ಲಿ ಕೂಡ ಆಂಗ್ಲಭಾಷೆಯ ನಾಮಫ‌ಲಕಗಳನ್ನು ತೆರವುಗೊಳಿಸ ಲಾಗುತ್ತಿದೆ. Óಸುಂಟಿಕೊಪ್ಪ ನಗರದಲ್ಲಿ ಕಾನೂನನ್ನು ಉಲ್ಲಂಘಿಸಿ ಹೊಟೇಲು, ಅಂಗಡಿ ಮುಂಗಟ್ಟುಗಳಲ್ಲಿ, ವಿವಿಧ ದೂರವಾಣಿ ಸಂಸ್ಥೆಗಳ ಜಾಹೀರಾತು ಫ‌ಲಕ ಮತ್ತು ಇತರ ವಸತಿ ಗೃಹಗಳ ಮೇಲ್ಭಾಗಗಳಲ್ಲಿ ಎದ್ದು ಕಾಣುವಂತೆ ಅಳವಡಿಸಿದ್ದ ಆಂಗ್ಲ ಭಾಷೆಯ ಬೃಹತ್‌ ಗಾತ್ರದ ನಾಮಫ‌‌ಲಕಗಳನ್ನು ತೆರವುಗೊಳಿಸಲಾಯಿತು. ನಿಯ ಮವನ್ನು ಉಲ್ಲಂಘಿಸಿದ ಅಂಗಡಿ ಮಾಲಕರಿಗೆ 500 ರೂ. ದಂಡ, ಅನಂತರ ಪರವಾನಗಿ ರದ್ದು ಪಡಿಸಲಾಗುವುದು ಎಂದು ಪಂಚಾ ಯತ್‌ ಅಧ್ಯಕ್ಷರು ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.