ಕಾಡುಪಾಲಾದ ಸಿದ್ದಾಪುರದ ಹಳೇ ಠಾಣೆ : ವಸತಿಗೃಹ ನಿರ್ಮಿಸಲು ಒತ್ತಾಯ


Team Udayavani, Mar 17, 2020, 5:25 AM IST

ಕಾಡುಪಾಲಾದ ಸಿದ್ದಾಪುರದ ಹಳೇ ಠಾಣೆ : ವಸತಿಗೃಹ ನಿರ್ಮಿಸಲು ಒತ್ತಾಯ

ಮಡಿಕೇರಿ : ಸರ್ಕಾರದ ಚಿಂತನೆಗಳೇ ಹೀಗೆ, ಹೊಸ ಯೋಜನೆಯೊಂದು ಸಾಕಾರಗೊಂಡರೆ ಹಳೆಯ ವ್ಯವಸ್ಥೆಗೆ ಎಳ್ಳುನೀರು ಬಿಡುವುದೇ ಹೆಚ್ಚು. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕಟ್ಟಡಗಳು ಮತ್ತು ಅವುಗಳಿರುವ ಪ್ರದೇಶದ ಗತಿ ಕೂಡ ಇದೇ ಆಗಿದೆ.

ಇದಕ್ಕೆ ಸಾಕ್ಷಿ ಎಂಬಂತೆ ಸಿದ್ದಾಪುರದ ಹೃದಯ ಭಾಗದಲ್ಲಿದ್ದ ಹಳೆಯ ಪೊಲೀಸ್‌ ಠಾಣೆಯ ಕಟ್ಟಡ ಇದೀಗ ಅನಾಥವಾಗಿದೆ. ಬೀಗ ಜಡಿದ ಕಟ್ಟಡದ ಸುತ್ತ ಕುರುಚಲು ಗಿಡಗಳು ಬೆಳೆಯಲಾರಂಬಿಸಿದ್ದು, ಕಟ್ಟಡ ಮತ್ತಷ್ಟು ಶಿಥಿಲಾವಸ್ಥೆಗೆ ತಲುಪಿದೆ. ಕಟ್ಟಡದೊಳಗೆ ಹಾವು, ಹೆಗ್ಗಣಗಳು ಓಡಾಡುವುದನ್ನು ಸ್ಥಳೀಯರು ನೋಡಿದ್ದಾರೆ. ಮಳೆಗಾಲದಲ್ಲಿ ಹಳೆಯ ಕಟ್ಟಡ ಸಂಪೂರ್ಣವಾಗಿ ಹಾನಿಗೀಡಾಗುವ ಮುನ್ಸೂಚನೆಯನ್ನು ನೀಡಿದೆ.

ಈ ಕಟ್ಟಡದಲ್ಲಿ ಪೊಲೀಸ್‌ ಠಾಣೆ ಕಾರ್ಯ ನಿರ್ವಹಿಸುತ್ತಿದ್ದಾಗ ಸಿದ್ದಾಪುರ ಪಟ್ಟಣದ ಸುತ್ತಮುತ್ತಲ ಚಿತ್ರಣ ಪೊಲೀಸರಿಗೆ ಸುಲಭವಾಗಿ ತಿಳಿದು ಬಿಡುತ್ತಿತ್ತು. ಅಲ್ಲದೆ ಅಪರಾಧ ಪ್ರಕರಣಗಳನ್ನು ತಕ್ಷಣ ನಿಯಂತ್ರಿಸುವುದಕ್ಕೂ ಸಹಕಾರಿಯಾಗಿತ್ತು. ಆದರೆ ಈಗ ಎಂ.ಜಿ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಪೊಲೀಸ್‌ ಇಲಾಖೆಯ ನೂತನ ಕಟ್ಟಡಕ್ಕೆ ಪೊಲೀಸ್‌ ಠಾಣೆ ಸ್ಥಳಾಂತರಗೊಂಡಿದ್ದು, ಹಳೆಯ ಠಾಣೆಯ ಕಟ್ಟಡ ಕಾಡು ಪಾಲಾಗುವ ಸ್ಥಿತಿಯಲ್ಲಿದೆ.

ಸಿದ್ದಾಪುರ ಮತ್ತು ನೆಲ್ಯಹುದಿಕೇರಿ ಗ್ರಾಮಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದು, ಅಪರಾಧ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ. ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಗೆ ಸಿದ್ದಾಪುರ, ಪಾಲಿಬೆಟ್ಟ, ಚೆನ್ನಯ್ಯನಕೋಟೆ, ಕಳತ್ಮಾಡು, ಮಾಲ್ದಾರೆ, ಕೊಂಡಂಗೇರಿ, ಹಾಲುಗುಂದ, ಅರೆಕಾಡು, ವಾಲೂ°ರು-ತ್ಯಾಗತ್ತೂರು ಗ್ರಾಮಗಳು ಒಳ ಪಡುತ್ತವೆ. ಹೆಚ್ಚಿನ ಗ್ರಾಮಗಳು ಮತ್ತು ಹೆಚ್ಚಿನ ಜನಸಂಖ್ಯೆ ಇರುವುದರಿಂದ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಹೆಚ್ಚುವರಿ ಪೊಲೀಸ್‌ ಸಿಬಂದಿ ಅಗತ್ಯಇದೆ.

ಈ ಪ್ರದೇಶದಲ್ಲಿ ಅಶಾಂತಿಯ ವಾತಾವರಣ ಮೂಡಿದಾಗ ಹೆಚ್ಚಿನ ಸಂಖ್ಯೆಯ ಪೊಲೀಸ್‌ ಸಿಬಂದಿ ನಿಯೋಜಿಸುವುದು ವಾಡಿಕೆ. ಹೀಗೆ ನಿಯೋಜನೆಗೊಳ್ಳುವ ಜಿಲ್ಲಾ ಸಶಸ್ತ್ರ ಪಡೆಯ ಸಿಬಂದಿಗೆ ಸಿದ್ದಾಪುರದಲ್ಲಿ ತಂಗಲು ಸೂಕ್ತ ವ್ಯವಸ್ಥೆಗಳು ಇಲ್ಲದ ಪರಿಸ್ಥಿತಿ ಹಿಂದಿನಿಂದಲೂ ಕಾಡುತ್ತಿದೆ. ಅಲ್ಲದೆ ನಿತ್ಯ ಠಾಣಾ ಕರ್ತವ್ಯಕ್ಕೆ ಹಾಜರಾಗುವ ಪೊಲೀಸ್‌ ಸಿಬಂದಿಗೂ ವಸತಿ ವ್ಯವಸ್ಥೆಯ ಕೊರತೆ ಇದೆ. ಆದ್ದರಿಂದ ದಕ್ಷ ಅಧಿಕಾರಿ ಎನಿಸಿಕೊಂಡಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಳೆಯ ಪೊಲೀಸ್‌ ಠಾಣೆಯ ಕಟ್ಟಡವನ್ನು ಮತ್ತು ಅದು ಇರುವ ಪ್ರದೇಶವನ್ನು ಸದ್ಬಳಕೆ ಮಾಡಿಕೊಳ್ಳಲು ಯೋಜನೆ ರೂಪಿಸಬೇಕಾಗಿದೆ.

ಪಟ್ಟಣದ ಹೃದಯ ಭಾಗದಲ್ಲೇ ಬೆಲೆ ಬಾಳುವ ಜಾಗವಿರುವುದರಿಂದ ಪೊಲೀಸ್‌ ಸಿಬಂದಿಗಾಗಿ ವಸತಿಗೃಹವನ್ನು ನಿರ್ಮಿಸುವುದು ಸೂಕ್ತ ಎನ್ನುವ ಅಭಿಪ್ರಾಯ ಸ್ಥಳೀಯರಿಂದ ಕೇಳಿ ಬಂದಿದೆ. ಅನೇಕ ಮಂದಿ ಅವಿವಾಹಿತ ಯುವ ಪೊಲೀಸ್‌ ಸಿಬಂದಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ಇವರು ತಂಗಲು ಅತಿಥಿಗೃಹ ಸಹಕಾರಿಯಾಗಲಿದೆ. ಆದ್ದರಿಂದ ಸರಕಾರದ ಭೂಮಿ ಒತ್ತುವರಿಯಾಗುವುದನ್ನು ಮತ್ತು ಹಳೆಯ ಕಟ್ಟಡ ಹಾನಿಗೀಡಾಗುವುದನ್ನು ತಪ್ಪಿಸಲು ಸುಸಜ್ಜಿತ ಹಾಗೂ ಎಲ್ಲಾ ಸೌಲಭ್ಯಗಳಿರುವ ವಸತಿಗೃಹದ ಯೋಜನೆಗೆ ಹಿರಿಯ ಅಧಿಕಾರಿಗಳು ಮುಂದಾಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹೊಸ ಯೋಜನೆಯೊಂದು ಸಾಕಾರಗೊಂಡಾಗ ಹಳೆಯ ವ್ಯವಸ್ಥೆಯನ್ನು ನಿರ್ಲಕ್ಷಿಸುವುದು ಸರಿಯಲ್ಲವೆಂದು ಅಭಿಪ್ರಾಯಪಟ್ಟಿರುವ ಹಿರಿಯ ನಾಗರೀಕರು, ಪೊಲೀಸ್‌ ವರಿಷ್ಠಾಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ನಡೆಸಿ ವಸತಿಗೃಹದ ಯೋಜನೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.