ಶನಿವಾರಸಂತೆ: ಶ್ರೀರಾಮ ನವಮಿ ಪ್ರಯುಕ್ತ ವಿಶೇಷ ಪೂಜೆ
Team Udayavani, Apr 16, 2019, 6:30 AM IST
ಶನಿವಾರಸಂತೆ: ಶ್ರೀರಾಮ ನವಮಿ ಪ್ರಯುಕ್ತ ಶನಿವಾರಸಂತೆ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ದೇವಾಲಯದಲ್ಲಿ ಎ 10 ರಿಂದಲೂ ಶ್ರೀರಾಮ ನವಮಿ ಪ್ರಯುಕ್ತ ಪ್ರತಿ ದಿನ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ರವಿವಾರ ಬೆಳಗ್ಗೆ ರಾಮ ಮಂದಿರದಲ್ಲಿ ಹೋಮ ಹವನ ಮುಂತಾದ ಪೂಜಾ ವಿಧಾನವನ್ನು ನೆರವೇರಿಸಲಾಯಿತು.
ರವಿವಾರ ಬೆಳಗ್ಗೆ 8 ಗಂಟೆಗೆ ಮಹಾ ಗಣಪತಿ, ನವಗ್ರಹ ಪೂಜಾ ಪೂರ್ವಕ ಸೀತಾಲಕ್ಷ್ಮಣ ಅಂಜನೇಯ ಸಹಿತ ರಾಮಚಂದ್ರನಿಗೆ ಫಲ ಪಂಚಾಮೃತ ಅಭಿಷೇಕ, ಪುರುಷ ಸೂಕ್ತ ನಾರಾಯಣ ಸೂಕ್ತ, ಶ್ರೀಸೂಕ್ತ, ಜಲಾಭಿಷೇಕ ಹಾಗೂ ದೇವರಿಗಳಿಗೆ ಅಲಂಕಾರ ಪೂಜೆ ಸಲ್ಲಿಸಲಾಯಿತು.
ಬೆಳಗ್ಗೆ 10 ಗಂಟೆಗೆ ಮಹಾ ಗಣಪತಿ ಹೋಮ ಮತ್ತು ಶ್ರೀ ಆಂಜನೇಯ ಸ್ವಾಮಿಗೆ ಫಲಹೋಮ ಸಲ್ಲಿಸಲಾಯಿತು. ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಮಹಾ ಮಂಗಳಾರತಿ ಮತ್ತು ಭಕ್ತಾಧಿಗಳಿಗೆ ತೀರ್ಥ ಪ್ರಸಾದದೊಂದಿಗೆ ಪೂಜಾ ಕಾರ್ಯಕ್ರಮ ಕೊನೆಗೊಂಡಿತು. ದೇವಾಲಯ ಸಮಿತಿಯಿಂದ ಬೆಲ್ಲದ ಪಾನಕ ವಿತರಣೆ ಹಾಗೂ ಅನ್ನಸಂತರ್ಪಣೆ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…