ವ್ಯಾಘ್ರ ಸೆರೆಗೆ ಮುಂದಾದ ಇಲಾಖೆ


Team Udayavani, Apr 9, 2018, 8:25 AM IST

Tiger-6.jpg

ಮಡಿಕೇರಿ: ದಕ್ಷಿಣ ಕೊಡಗಿನ ವಿವಿಧ ಭಾಗಗಳಲ್ಲಿ ಕಳೆದ ಎರಡು ತಿಂಗಳುಗಳಿಂದ ಹುಲಿಗಳ ಹಾವಳಿ ಮಿತಿಮೀರಿದ್ದು, 15ಕ್ಕೂ ಹೆಚ್ಚು ಜಾನುವಾರುಗಳು ಬಲಿಯಾಗಿವೆ. ಅರಣ್ಯ ಇಲಾಖೆಯು ವ್ಯಾಘ್ರನ ಸೆರೆಗೆ ಪ್ರಯತ್ನ ಆರಂಭಿಸಿದೆ. ಕೊಟ್ಟಗೇರಿಯ ಮಾಪಂಗಡ ಮುದ್ದಯ್ಯನವರ ಮನೆ ಸಮೀಪವಿರುವ ದೇವರಕಾಡು ಅರಣ್ಯ ಹಾಗೂ ಸಮೀಪದ ಕುರುಚಲು ಕಾಡು ಹಾಗೂ ಕಾಫಿ ತೋಟಗಳಲ್ಲಿ ರವಿವಾರ ಮುಂಜಾನೆ 5 ಗಂಟೆಗೆ ಇಲಾಖೆಯ ಸಿಬಂದಿ ನಾಲ್ಕು ಆನೆಗಳ ಸಹಾಯದಿಂದ ಶೋಧ ನಡೆಸಿ ಹುಲಿಯ ಸೆರೆಗೆ ಪ್ರಯತ್ನಿಸಿದರು.

ಮರಗಳ ಮೇಲೆ 11 ಸಿಬಂದಿ ಕಾವಲಿದ್ದು, ಹುಲಿಯ ಸಂಚಾರದ ಬಗ್ಗೆ ನಿಗಾ ವಹಿಸಿದ್ದರು. ಸುತ್ತಮುತ್ತ 17 ಕೆಮರಾಗಳನ್ನು ಅಳವಡಿಸಲಾಗಿತ್ತು. ಹುಲಿಯ ಚಲನವಲನದ ಬಗ್ಗೆ ಕೆಮರಾಗಳಿಂದ ಸಿಕ್ಕ ಮಾಹಿತಿ ಗಮನಿಸಿ ಈ ಭಾಗದಲ್ಲಿ ಬೆಳಗಿನಿಂದಲೇ ಮತ್ತಿಗೋಡು ಆನೆ ಕ್ಯಾಂಪ್‌ನಲ್ಲಿದ್ದ ಅಭಿಮನ್ಯು, ಕೃಷ್ಣ, ದ್ರೋಣ ಹಾಗೂ ಭೀಮ ಎಂಬ ಸಾಕಾನೆಗಳ ಸಹಾಯ ಪಡೆದು ತೋಟ ಹಾಗೂ ಕಾಡಿನಲ್ಲಿ ಸಂಚಾರ ನಡೆಸಿ ಹುಲಿ ಸೆರೆಗೆ ಪ್ರಯತ್ನ ಮಾಡಿದರು. ಬೆಳಗ್ಗೆ 10 ಗಂಟೆಯವರೆಗೆ ಸತತವಾಗಿ ಕಾರ್ಯಚರಣೆ ನಡೆಸಿದರಾದರೂ ಹುಲಿಯ ಜಾಡು ಸಿಗಲೇ ಇಲ್ಲ.


ಕೊಟ್ಟಗೇರಿಯ ಮಾಪಂಗಡ ಮುದ್ದಯ್ಯನವರ ಕೊಟ್ಟಿಗೆಯಲ್ಲಿದ್ದ 3 ಹಸುಗಳನ್ನು ಕೆಲವು ದಿನಗಳ ಹಿಂದೆ ಹುಲಿಯು ತಿಂದು ಹಾಕಿತ್ತು. ಅನಂತರ ಅರಣ್ಯ ಇಲಾಖೆಯ ಸಿಬಂದಿ ಈ ಭಾಗದಲ್ಲಿ ಹುಲಿ ಸೆರೆಗೆ ಬೋನು ಇರಿಸಿ ಪ್ರಯತ್ನ ನಡೆಸಿದ್ದರು. ಆದರೆ ಹುಲಿ ಬೋನಿನತ್ತ ಸುಳಿದಿರಲಿಲ್ಲ. ರೈತ ಸಂಘ ಹಾಗೂ ಜೆಡಿಎಸ್‌ ಮುಖಂಡರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಇಲಾಖೆ ಮುಂಜಾನೆಯಿಂದಲೇ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಿತ್ತು. ನಾಗರಹೊಳೆ, ತಿತಿಮತಿ, ಭಾಗದ ಅರಣ್ಯ ಅಧಿಕಾರಿಗಳು, ಸಿಬಂದಿ, ರ್ಯಾಪಿಡ್‌ ಫೋರ್ಸ್‌ ಸಿಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಹುಲಿ ಸೆರೆಗೆ ಪ್ರಯತ್ನ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಡಿಎಫ್ಒ ಕೃಷ್ಣರಾಜ್‌, ಎಸಿಎಫ್ ಪೌಲ್‌ ಆ್ಯಂಟೋನಿ, ಆರ್‌ಎಫ್ಒ ಗಂಗಾಧರ್‌, ಕಿರಣ್‌, ಅಶೋಕ್‌ ಹುನಗುಂದ, ಸ್ನೇಕ್‌ ಸತೀಶ್‌, ಸ್ಥಳೀಯರು ಹಾಜರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.