ಕೊಡಗು ಜಿಲ್ಲೆಯಲ್ಲಿ ಶೇ. 26ರಷ್ಟು ಮಳೆ ಕೊರತೆ


Team Udayavani, Aug 4, 2017, 6:25 AM IST

male-korate.jpg

ಮಡಿಕೇರಿ : ಹಿಂದೆ ಆಷಾಡ ಮಾಸವೆಂದರೆ ಮಳೆಯ ಸಂಭ್ರಮವಿರುತ್ತಿತ್ತು. ಆಷಾಡ ಮಾಸದಲ್ಲಿ ಮನೆಯಲ್ಲಿದ್ದ ಧವಸ ಧಾನ್ಯವೆಲ್ಲ ಖಾಲಿಯಾಗಿ ಶ್ರಾವಣ ಮಾಸದ ಆರಂಭದಲ್ಲಿ ರಾಗಿ, ಜೋಳ, ಕಂಬು, ನವಣೆ, ಅಲಸಂದೆ ಜೊತೆಗೆ ವಾಣಿಜ್ಯ ಬೆಳೆಯಾದ ಸೂರ್ಯಕಾಂತಿ, ಕಡ್ಲೆಕಾಯಿ ಹೀಗೆ ನಾನಾ ರೀತಿಯ ಹೊಸ ಬೆಳೆಗಾಗಿ ಕಾಯುತ್ತಿದ್ದರು. ಜುಲೈ ಅಂತ್ಯ ಹಾಗೂ ಆಗಸ್ಟ್‌ ಆರಂಭದ ಅವಧಿಯಲ್ಲಿ ಹೊಲದಲ್ಲಿ ಬೆಳೆಗಳನ್ನು ನೋಡುವುದೇ ಒಂದು ರೀತಿ ಸಂತಸವಾಗುತ್ತಿತ್ತು.   
ಆದರೆ  ಇದು ಒಂದೆಡೆಯಾದರೆ, ಮಲೆನಾಡು ಕೊಡಗು ಜಿಲ್ಲೆಯಲ್ಲಿಯೇ ಕಳೆದ ನಾಲ್ಕು ವರ್ಷಗಳಿಂದ ಸರಾಸರಿ ಮಳೆಯ ಪ್ರಮಾಣ ಕಡಿಮೆಯಾಗುತ್ತಾ ಬಂದಿರುವುದು ಕಾವೇರಿ ಕಣಿವೆಯ ಜನತೆಯಲ್ಲಿ ಆತಂಕಕ್ಕೆ ದೂಡಿದೆ. ಜೂನ್‌ ಮತ್ತು ಜುಲೈ ತಿಂಗಳಲ್ಲಿ ವಾಡಿಕೆ ಮಳೆಯಾದರೆ ಕಾವೇರಿ ಕಣಿವೆಯ ಎಲ್ಲಾ ಜಲಾಶಯಗಳು ಭರ್ತಿಯಾಗುತ್ತಿದ್ದವು, ಆದರೆ ಹಾರಂಗಿ ಜಲಾಶಯ ಹೊರತುಪಡಿಸಿ  ಕೃಷರಾಜ ಸಾಗರ, ಕಬಿನಿ, ಹೇಮಾವತಿ ಜಲಾಶಯಗಳು ಭರ್ತಿಯಾಗದಿರುವುದು ಎಲ್ಲರನ್ನೂ ಚಿಂತೆಗೆ ದೂಡಿದೆ. ಜುಲೈ ಅಂತ್ಯ ಹಾಗೂ ಆಗಸ್ಟ್‌ ಆರಂಭದಲ್ಲಿ ಹಾಗಾಗ ಮಳೆ ಮತ್ತು ಮೊಡಕವಿದ ವಾತಾವರಣವಿದೆಯೇ ಹೊರತು, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ, ಇದರಿಂದ ಮುಂದಿನ ದಿನಗಳಲ್ಲಿ  ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವುದಾದರೂ ಹೇಗೆ ಎಂಬುದು ಕಾಡುತ್ತಿದೆ.    
ಒಟ್ಟಾರೆ ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿನ ಸರಾಸರಿ ಮಳೆಯ ಪ್ರಮಾಣವನ್ನು ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಜುಲೈ ಅಂತ್ಯದವರೆಗೆ ಸರಾಸರಿ ವಾಡಿಕೆ ಮಳೆ 1669.86 ಮಿ.ಮೀ.ಗಳಾಗಿದ್ದು, 2017ರ ಜನವರಿಯಿಂದ ಜುಲೈ ಅಂತ್ಯದವರೆಗೆ 1224.43 ಮಿ.ಮೀ.ಮಳೆಯಾಗಿದ್ದು, ಶೇ.73.33 ರಷ್ಟು ಮಳೆಯಾಗಿದೆ. 2016ರಲ್ಲಿ 1184.31 ಮಿ.ಮೀ. ಮಳೆಯಾಗಿದ್ದರೆ, 2015ರ ಇದೇ ಅವಧಿಯಲ್ಲಿ 1544.27 ಮಿ.ಮೀ. ಮಳೆಯಾಗಿತ್ತು.  ಒಟ್ಟಾರೆ ಜಿಲ್ಲೆಯಲ್ಲಿ ಶೇ. 26 ಮಳೆ ಕೊರತೆ ಉಂಟಾಗಿದೆ. 
ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ ತಾಲ್ಲೂಕಿನಲ್ಲಿ ಜುಲೈ ಅಂತ್ಯದವರೆಗೆ ಸರಾಸರಿ ವಾಡಿಕೆ ಮಳೆ 1992.30ಮಿ.ಮೀ.ಗಳಾಗಿದ್ದು, 2017ರ ಜನವರಿಯಿಂದ ಜುಲೈ, 31ರ ವರೆಗೆ 1683.75 ಮಿ.ಮೀ.ಮಳೆಯಾಗಿದೆ. 2016ರ ಇದೇ ಅವಧಿಯಲ್ಲಿ 1759.32 ಮಿ.ಮೀ. ಮಳೆಯಾಗಿದ್ದರೆ, 2015ರ ಇದೇ ಅವಧಿಯಲ್ಲಿ 2286.70 ಮಿ.ಮೀ.ಮಳೆಯಾಗಿತ್ತು. ಒಟ್ಟಾರೆ ತಾಲ್ಲೂಕಿನಲ್ಲಿ ಈ ಬಾರಿ ಶೇ 84.51 ರಷ್ಟು ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಜನವರಿಯಿಂದ ಜುಲೈ ಅಂತ್ಯದವರೆಗೆ ಸರಾಸರಿ ವಾಡಿಕೆ ಮಳೆ 1294 ಮಿ.ಮೀ.ಗಳಾಗಿದ್ದು, 2017ರ ಜನವರಿಯಿಂದ ಇಲ್ಲಿಯವರೆಗೆ 952.55 ಮಿ.ಮೀರಷ್ಟು ಮಳೆಯಾಗಿದೆ. 2016ರ ಇದೇ ಅವಧಿಯಲ್ಲಿ 912.60 ಮಿ.ಮೀ.ಮಳೆಯಾಗಿದೆ. ಹಾಗೆಯೇ 2015ರ ಇದೇ ಅವಧಿಯಲ್ಲಿ 1059.41 ಮಿ.ಮೀ. ಮಳೆಯಾಗಿತ್ತು. ತಾಲ್ಲೂಕಿನಲ್ಲಿ ಶೇ.73.61ರಷ್ಟು ಮಳೆಯಾಗಿದೆ. 
ವಿರಾಜಪೇಟೆ ತಾಲ್ಲೂಕಿನಲ್ಲಿ ಜನವರಿಯಿಂದ ಜುಲೈ ಅಂತ್ಯದವರೆಗೆ ಸರಾಸರಿ ವಾಡಿಕೆ ಮಳೆ 1723.30 ಮಿ.ಮೀ.ಗಳಾಗಿದ್ದು, 2017ರ ಜನವರಿಯಿಂದ ಇಲ್ಲಿಯವರೆಗಿನ ಮಳೆ 1036.98 ಮಿ.ಮೀ.ರಷ್ಟು ಮಳೆಯಾಗಿದೆ. 2016ರ ಇದೇ ಅವಧಿಯಲ್ಲಿ 881.05 ಮಿ.ಮೀ. ಮಳೆಯಾಗಿದೆ. ಹಾಗೆಯೇ 2015ರ ಇದೇ ಅವಧಿಯಲ್ಲಿ 1286.68 ಮಿ.ಮೀ. ಮಳೆಯಾಗಿ ಶೇ. 60.17ರಷ್ಟು ಮಾತ್ರ ಮಳೆಯಾಗಿದೆ. 
ಒಟ್ಟಾರೆ ಈ ಬಾರಿ ಉತ್ತಮ ಮಳೆಯಾಗುತ್ತದೆ ಎಂಬ ನಿರೀಕ್ಷೆ ಇತ್ತು, ಆದರೆ ಕಳೆದ ಮೂರು ವರ್ಷಗಳಲ್ಲಿ ಮಳೆಯ ಕೊರತೆ ಉಂಟಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.
 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.