BJP ಕಾರ್ಯಕರ್ತರ ಸಮಾವೇಶದಲ್ಲಿ ಪಿಕ್ ಪಾಕೆಟ್: 13 ಮಂದಿಯ ಸೆರೆ; ನಗದು ವಶ
Team Udayavani, Apr 4, 2024, 12:15 AM IST
ಮಡಿಕೇರಿ: ಇತ್ತೀಚೆಗೆ ಕುಶಾಲನಗರ ಮತ್ತು ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಶಾಸಕರ ಸಹಿತ ಇತರರ ಜೇಬಿನಿಂದ ಪಿಕ್ ಪಾಕೆಟ್ ಮಾಡಿದ್ದ 13 ಮಂದಿ ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಮೂಲದ 11 ಮತ್ತು ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಇದೀಗ ನ್ಯಾಯಾಲಯದ ವಶಕ್ಕೆ ನೀಡಲಾಗಿದೆ. ಆರೋಪಿಗಳು ಪಿಕ್ ಪಾಕೆಟ್ ಮಾಡಿದ್ದ 1 ಲಕ್ಷದ 96 ಸಾವಿರದ 300 ರೂ.ಗಳ ಪೈಕಿ 65 ಸಾವಿರದ 960 ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದ 12 ಮೊಬೈಲ್ ಫೋನ್ಗಳು, 2 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರು:
ಶಿವಮೊಗ್ಗ ಭದ್ರಾವತಿಯ ಜಯಣ್ಣ ಅಲಿಯಾಸ್ ಕಿರಿಕ್ ಜಯ (38), ಪುಟ್ಟರಾಜು ಅಲಿಯಾಸ್ ಪುಟ್ಟ (39), ಸಿ. ನಾಗರಾಜ ಅಲಿಯಾಸ್ ಕೋತಿ ಕಿಚ್ಚ (43), ರಾಮು ಅಲಿಯಾಸ್ ಕುಳ್ಳರಾಮು (43), ಕೆ. ಉಮೇಶ್ (36), ಜಯಣ್ಣ ಅಲಿಯಾಸ್ ದೊಡ್ಡಜಯಣ್ಣ (53), ಬೋಜಪ್ಪ ಅಲಿಯಾಸ್ ಬೋಜ (50), ಮೆಹಬೂಬ್ ಸುಭಾನ್ (48), ಡಿ. ಗಿರೀಶ (31), ಬಾಲು (35), ಬೆಂಗಳೂರು ಹೆಬ್ಬುಗೋಡಿಯ ಹರೀಶ (35), ನೆಲಮಂಗಲದ ರಂಗಣ್ಣ ಅಲಿಯಾಸ್ ರಂಗ (50) ಬಂಧಿತರು.
ಕುಶಾಲನಗರ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ. ಪ್ರಕಾಶ್, ಠಾಣಾಧಿಕಾರಿ ಬಿ.ಎಸ್. ಉಮಾ, ಕುಶಾಲನಗರ ಠಾಣಾ ಸಿಬಂದಿ ಹಾಗೂ ಕ್ರೆçಂ ಸಿಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಸಿಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಶ್ಲಾ ಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ