ಕುಟ್ಟದಲ್ಲಿ ಸಂಪೂರ್ಣ ಸೂರ್ಯಗ್ರಹಣ ಗೋಚರ ಸಾಧ್ಯತೆ

ವಿಜ್ಞಾನಿಗಳ ತಂಡದಿಂದ ವಿಶೇಷ ಸಿದ್ಧತೆ

Team Udayavani, Dec 23, 2019, 7:46 PM IST

sd-17

ಮಡಿಕೇರಿ: ಕಂಕಣ ಸೂರ್ಯಗ್ರಹಣ ದಕ್ಷಿಣ ಕೊಡಗಿನ ಕುಟ್ಟ ಗ್ರಾಮದಲ್ಲಿ ಸಂಪೂರ್ಣವಾಗಿ ಗೋಚರಿಸುತ್ತಿರುವುದು ವಿಶೇಷ. ಸೂರ್ಯಗ್ರಹಣ ದಕ್ಷಿಣ ಕೊಡಗಿನ ಕುಟ್ಟ ಆಸುಪಾಸಿನಲ್ಲಿ ಶೇ.99ರಿಂದ ಶೇ.100ರಷ್ಟು ಪ್ರಮಾಣದಲ್ಲಿ ಗೋಚರವಾಗಲಿದೆ. ಹಾಗಾಗಿ ಕುಟ್ಟ ಸಮೀಪದ ಕಾಯಿಮಾನಿ ಗ್ರಾಮದಲ್ಲಿ ಮಹಾರಾಷ್ಟ್ರ ಪುಣೆಯ ಖಗೋಳ ಮತ್ತು ಪರಿಸರ ಕೇಂದ್ರದ (ಎಎಸ್‌ಇಇಎಂಟಿಐ) ವಿಜ್ಞಾನಿಗಳ ತಂಡ ಸೂರ್ಯಗ್ರಹಣ ವೀಕ್ಷಣೆಗೆ ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ದಕ್ಷಿಣ ಭಾರತದಲ್ಲಿ ಈ ಸೂರ್ಯ ಗ್ರಹಣ ಗೋಚರಿಸುವ ಪ್ರಮಾಣ ಬೆಂಗಳೂರಿನಲ್ಲಿ ಶೇ.89.4 ರಷ್ಟಿದ್ದರೆ, ಚೆನ್ನೆçನಲ್ಲಿ ಶೇ.84.6 ಹಾಗೂ ಮುಂಬೈನಲ್ಲಿ ಶೇ.78.8ರಷ್ಟು ಇರಲಿದೆ. ದಕ್ಷಿಣ ಕೊಡಗು ಮಾತ್ರವಲ್ಲದೇ, ಕೊಡಗು ಜಿಲ್ಲೆಯ ಇತರ ಭಾಗಗಳಲ್ಲೂ ಸೂರ್ಯಗ್ರಹಣ ಗೋಚರವಾಗಲಿದ್ದು, ಕುಟ್ಟ ವ್ಯಾಪ್ತಿಯಲ್ಲಿ ಕಾಣಿಸುವಷ್ಟೇ ಸ್ಪಷ್ಟವಾಗಿ ತಲಕಾವೇರಿ, ಭಾಗಮಂಡಲದಲ್ಲೂ ಗ್ರಹಣ ಕಂಡು ಬರಲಿದೆ ಎಂದು ಹೇಳಲಾಗಿದೆ. ಆದರೆ ಇಲ್ಲಿ ದಿನದ ಬಹುತೇಕ ಸಮಯ ಮೋಡ ಮತ್ತು ಮಂಜು ಮುಸುಕಿದ ವಾತಾವರಣ ಇರುವುದರಿಂದ ವಿಜ್ಞಾನಿಗಳು ಕುಟ್ಟ ಬಳಿಯ ಕಾಯಿಮಾನಿ ಎನ್ನುವ ಪ್ರದೇಶವನ್ನು ಸೂರ್ಯಗ್ರಹಣ ವೀಕ್ಷಣೆಗೆ ಆಯ್ದುಕೊಂಡಿದ್ದಾರೆ. ವಿರಾಜಪೇಟೆಯಲ್ಲಿ ಶೇ.96, ಮಡಿಕೇರಿ ಶೇ.93, ಕುಶಾಲನಗರ ಶೇ.90.5 ಮತ್ತು ಸೋಮವಾರಪೇಟೆಯಲ್ಲಿ ಶೇ.90 ರಷ್ಟು ಪ್ರಮಾಣದಲ್ಲಿ ಸೂರ್ಯ ಗ್ರಹಣ ಕಾಣಿಸಲಿದೆ.

ವೀಕ್ಷಣೆಗೆ ಸಿದ್ಧತೆ
ಸೂರ್ಯಗ್ರಹಣದ ಬಗ್ಗೆ ಜನಸಾಮಾನ್ಯರಲ್ಲಿ ಮನೆ ಮಾಡಿರುವ ಮೂಢನಂಬಿಕೆ ಹೊಡೆದೋಡಿಸಲು ಕೂಡ ಇದೊಂದು ಉತ್ತಮ ಅವಕಾಶ. ಈ ಹಿನ್ನೆಲೆಯಲ್ಲಿ ಕುಟ್ಟ ಸಮೀಪದ ಕಾಯಿಮಾನಿ ಗ್ರಾಮದಲ್ಲಿ ಪುಣೆಯ ಖಗೋಳ ಮತ್ತು ಪರಿಸರ ಕೇಂದ್ರ (ಎಎಸ್‌ಇಇಎಂಟಿಐ) ಸೂರ್ಯಗ್ರಹಣ ವೀಕ್ಷಣೆಗೆ ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. ಸಂಸ್ಥೆಯ ವಿಜ್ಞಾನಿಗಳ ತಂಡ ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಜ್ಞಾನಿಗಳು, ಖಗೋಳಾಸಕ್ತರು, ವಿದ್ಯಾರ್ಥಿಗಳು ಇಲ್ಲಿಗೆ ಆಗಮಿಸುವ ನಿರೀಕ್ಷೆ ಇದೆ.

ಹೊಳೆಯುವ ಉಂಗುರದ ರೀತಿಯಲ್ಲಿ ಕಂಕಣ ಸೂರ್ಯ ಗ್ರಹಣ ಡಿ.26ರ ಬೆಳಗ್ಗೆ ಸರಿಯಾಗಿ 8 ಗಂಟೆ 05 ನಿಮಿಷಕ್ಕೆ ಪ್ರಾರಂಭವಾಗಲಿದೆ. 9 ಗಂಟೆ 25 ನಿಮಿಷಕ್ಕೆ ಪೂರ್ಣ ಪ್ರಮಾಣದಲ್ಲಿ ಗೋಚರವಾಗಲಿದ್ದು, 11 ಗಂಟೆಗೆ ಗ್ರಹಣ ಅಂತ್ಯವಾಗಲಿದೆ. ಗ್ರಹಣದ ಅವಧಿಯಲ್ಲಿ ಉತ್ತರದ 12 ಡಿಗ್ರಿ ಸರಳ ರೇಖೆ ಮತ್ತು ಪಶ್ಚಿಮದ 75 ಡಿಗ್ರಿ ಸರಳ ರೇಖೆಯಲ್ಲಿ ಸೂರ್ಯ ಹಾದು ಹೋಗುವುದರಿಂದ ಈ ಭಾಗದಲ್ಲಿ ಇರುವ ಪ್ರದೇಶಗಳಲ್ಲಿ ಸೂರ್ಯಗ್ರಹಣ ಸಂಪೂರ್ಣವಾಗಿ ಕಾಣುತ್ತದೆ. ಚಂದ್ರ ನಿಧಾನವಾಗಿ ಸೂರ್ಯನ ಎದುರು ಹಾದು ಹೋಗುವುದರಿಂದ ಸೂರ್ಯ ಕೂಡ ಮರೆಯಾಗುತ್ತಾ ಹೋದಂತೆ ಕಾಣುತ್ತದೆ ಎಂದು ಎಂದು ರಾಜ್ಯ ವಿಜ್ಞಾನ ಪರಿಷತ್‌ ಸಂಚಾಲಕಪ್ರೇಮ್‌ಕುಮಾರ್‌ ತಿಳಿಸಿದ್ದಾರೆ.

ವೀಕ್ಷಣೆಗೆ ವ್ಯವಸ್ಥೆಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಕೊಡಗು ಘಟಕದ ವತಿಯಿಂದ ಜಿಲ್ಲೆಯ ಶಾಲೆಗಳಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ಸೂರ್ಯ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೂರ್ಯ ಗ್ರಹಣದ ಬಗ್ಗೆ ಜನರಲ್ಲಿರುವ ಮೂಢನಂಬಿಕೆ ನಿವಾರಣೆಯ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಈ ಬಗ್ಗೆ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನೂ ನಡೆಸಲು ಚಿಂತಿಸಲಾಗಿದೆ. ಆಸಕ್ತರಿಗೋಸ್ಕರ ಸೂರ್ಯ ಗ್ರಹಣ ವೀಕ್ಷಣೆಗಾಗಿ ವಿಶೇಷ ಕನ್ನಡಕಗಳನ್ನು ತರಿಸಲಾಗುತ್ತಿದ್ದು, 20, 45 ಹಾಗೂ 60 ರೂ. ದರದಲ್ಲಿ ಪರಿಷತ್‌ನ ಪದಾಧಿಕಾರಿಗಳ ಬಳಿಯಿಂದ ಖರೀದಿಸ ಬಹುದಾಗಿದೆ ಎಂದು ಮಾಹಿತಿ ನೀಡಿರುವ ಪ್ರೇಮ ಕುಮಾರ್‌ ಆಸಕ್ತರು ತಮ್ಮನ್ನು ಸಂಪರ್ಕಿಸ ಬಹುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.