ಶೀಘ್ರ ಮನೆ ಹಸ್ತಾಂತರ: ಕೊಡಗು ಡಿಸಿ ನಿರ್ದೇಶನ


Team Udayavani, Feb 22, 2019, 12:30 AM IST

kodagu-dc-joy.jpg

ಮಡಿಕೇರಿ: ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆಗಳನ್ನು ಸಂಬಂಧಪಟ್ಟ ಅರ್ಹ ಫ‌ಲಾನುಭವಿಗಳಿಗೆ ಹಸ್ತಾಂತರ ಮಾಡಲು ಬಾಕಿ ಇರುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ಮನೆಗೆ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಬಾಕಿ ಉಳಿದಿರುವ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು.
  
ಈಗಾಗಲೇ ಬಸವನಹಳ್ಳಿಯಲ್ಲಿ 138 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 34 ಮನೆಗಳ ಕಾಮಗಾರಿ ಬಾಕಿ ಇದೆ. ಹಾಗೆಯೇ ಬ್ಯಾಡಗೊಟ್ಟದಲ್ಲಿ 132 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 21 ಮನೆಗಳ ಕಾಮಗಾರಿ ಬಾಕಿ ಇದೆ ಎಂದು ಐಟಿಡಿಪಿ ಅಧಿಕಾರಿ ಶಿವಕುಮಾರ್‌ ಮಾಹಿತಿ ನೀಡಿದರು. 

ಬಾಕಿ ಉಳಿದಿರುವ ಮನೆಗಳ ನಿರ್ಮಾಣ ಕಾಮಗಾರಿ ತಾತ್ಕಾಲಿಕ ಶೆಡ್‌ಗಳನ್ನು ತೆರವುಗೊಳಿಸಿದ ನಂತರ ಪ್ರಾರಂಭಿಸಲಾಗುವುದು ಎಂದು ಐಟಿಡಿಪಿ ಇಲಾಖೆ ಅಧಿಕಾರಿ ಅವರು ತಿಳಿಸಿದರು.  

ಅಂತಿಮ ಹಂತದಲ್ಲಿರುವಂತಹ ಕಾಮಗಾರಿಗಳನ್ನು ತುರ್ತಾಗಿ ಒಂದು ವಾರದೊಳಗೆ ಪೂರ್ಣಗೊಳಿಸಬೇಕು ಮತ್ತು ಕೆಆರ್‌ಐಡಿಸಿಎಲ್‌ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲೀಕರಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕೀತು ಮಾಡಿದರು.

ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಮನೆ ಪಡೆದು ಕೊಳ್ಳುತ್ತಿರುವ ಅರ್ಹ ಫ‌ಲಾನುಭವಿಗಳಿಗೆ ವಿಶೇಷ ಶಿಬಿರ ಆಯೋಜಿಸಿ ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್‌ ಖಾತೆ ಹೊಂದುವಂತೆ ಹಾಗೂ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಪತ್ರ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿಗೆ ತಿಳಿಸಿದರು.  

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.