ಸಂತ್ರಸ್ತರಿಗೆ ಶೀಘ್ರ ಮನೆ: ದೇಶಪಾಂಡೆ
Team Udayavani, Jun 20, 2019, 5:50 AM IST
ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾದ ಕುಟುಂಬದವರಿಗೆ ಮನೆಗಳನ್ನು ಶೀಘ್ರ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಸೂಚನೆ ನೀಡಿದ್ದಾರೆ.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ಪ್ರಕೃತಿ ವಿಕೋಪದಿಂದ ಉಂಟಾದ ನಷ್ಟ, ಪರಿಹಾರ ಮನೆಗಳ ಪ್ರಗತಿ ಮತ್ತಿತರ ಬಗ್ಗೆ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು. ಜುಲೈ 31ರೊಳಗೆ ಕರ್ಣಂಗೇರಿ ಮನೆಗಳನ್ನು ಹಸ್ತಾಂತರಿಸಬೇಕು. ಹಾಗೆಯೇ ಆಗಸ್ಟ್ 15ರೊಳಗೆ ಮದೆನಾಡು ಬಳಿ ನಿರ್ಮಿಸಲಾಗಿರುವ ಮನೆಗಳನ್ನು ಹಸ್ತಾಂತರಿಸಬೇಕು. ಜಂಬೂರಿನಲ್ಲಿ ನಿರ್ಮಾಣವಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.