ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಪೊಲೀಸ್‌ ಅಧಿಕಾರಿಗಳ ಮನವಿ


Team Udayavani, Apr 12, 2017, 5:09 PM IST

Z-POLICE-MEETING-2.jpg

ಮಡಿಕೇರಿ: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಮಾಜ ಘಾತುಕ ಶಕ್ತಿಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯವೆಂದು ಡಿವೈಎಸ್‌ಪಿ ಛಬ್ಬಿ, ವೃತ್ತ ನಿರೀಕ್ಷಕರಾದ ಐ.ಪಿ. ಮೇದಪ್ಪ ಹಾಗೂ ಠಾಣಾಧಿಕಾರಿ ಭರತ್‌ ಮನವಿ ಮಾಡಿದ್ದಾರೆ. ಗಾಂಜಾ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳು ವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. 

ನಗರ ಪೊಲೀಸ್‌ ಠಾಣೆಯಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಪೊಲೀಸ್‌ ಅಧಿಕಾರಿಗಳು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಿಬಂದಿಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

ಸಾರ್ವಜನಿಕರು, ವಾಹನ ಮಾಲೀಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಮಾತನಾಡಿ ನಗರದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಗಾಂಜಾ ಮತ್ತು ಮದ್ಯ ಪಾನದಿಂದ ಹಾದಿ ತಪ್ಪುತ್ತಿರುವ ಯುವ ಸಮೂಹ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ನಗರದ ಪ್ರಮುಖ ಪ್ರದೇಶದಲ್ಲೇ ಕೊಲೆ, ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಆದರೂ ಪೊಲೀಸರು ಯಾವುದೇ ಕಠಿನ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿದರು.
 
ರಾತ್ರಿ ಪೊಲೀಸ್‌ ಸಿಬಂದಿಗಳು ಗಸ್ತು ತಿರುಗುತ್ತಿಲ್ಲ. ಮಾದಕ ವ್ಯಸನಿಗಳು ಸಾರ್ವಜನಿಕರಿಗೆ ಕಿರಿಕಿರಿಯನ್ನುಂಟು ಮಾಡು ತ್ತಿದ್ದು, ಕೆಲವು ಬಡಾವಣೆಗಳಲ್ಲಿ ಪೋಲಿ-ಪುಂಡರ ಹಾವಳಿ ಹೆಚ್ಚಾಗಿದೆ. ಸಂಶಯಾಸ್ಪದವಾಗಿ ನಡೆದುಕೊಳ್ಳುವ ಮತ್ತು ಸಮಾಜದಲ್ಲಿ ಆತಂಕವನ್ನು ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 

ಕೆಲವು ಆಟೋ ಚಾಲಕರು ನಿಯಮ ಉಲ್ಲಂ ಸುತ್ತಿದ್ದು, ಪೊಲೀಸರು ಇವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಡಿ.ಎಚ್‌. ಮೇದಪ್ಪ ಆಗ್ರಹಿಸಿದರು.

ಕೆಲವು ಹೋಂಸ್ಟೇಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿ ರುವ ಬಗ್ಗೆ ದೂರುಗಳಿದ್ದು, ಕಾನೂನು ವ್ಯಾಪ್ತಿಯಲ್ಲಿ ಹೋಂಸ್ಟೇ ನಿಯಮವನ್ನು ಬಿಗಿಗೊಳಿಸಬೇಕು. ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಗಾಂಜಾ ಸೇರಿದಂತೆ ಮಾದಕ ಪದಾರ್ಥಗಳು ಮಾರಾಟವಾಗುತ್ತಿದ್ದು, ಆತಂಕ ಸೃಷ್ಟಿಯಾ ಗಿದೆ. ಗಾಂಜಾ ಮಾರಾಟ ಮಾಡುತ್ತಿರುವವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೆಲವೇ ಕ್ಷಣಗಳಲ್ಲಿ ಮಾರಾಟಗಾರನಿಗೆ ಈ ಬಗ್ಗೆ ಮಾಹಿತಿ ರವಾನೆಯಾಗುತ್ತಿದೆ ಎಂದು ಜನರು ಆರೋಪಿಸಿದರು. ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನಗರ ದಲ್ಲಿ ಇಸ್ಪೀಟ್‌ ಕ್ಲಬ್‌ಗಳು ಅನಧಿಕೃತವಾಗಿ ಕಾರ್ಯ ನಿರ್ವಹಿಸು ತ್ತಿದ್ದು, ಈ ದಂಧೆಯನ್ನು ನಿಯಂತ್ರಿಸುವಲ್ಲಿಯೂ ಪೊಲೀಸರು ವಿಫ‌ಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದರು.   

ಈ ಸಂದರ್ಭ ಮಾತನಾಡಿದ ಪೊಲೀಸ್‌ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯ ನಿಷ್ಠೆಯ ಬಗ್ಗೆ ಸಮರ್ಥಿಸಿಕೊಂಡರು. ಎಲ್ಲಾ ಬಡವಾಣೆಗಳಲ್ಲಿ, ಪ್ರತಿಯೊಂದು ಸಂದರ್ಭಗಳಲ್ಲೂ ಪೊಲೀಸರು ಹಾಜರಿರಲು ಸಾಧ್ಯವಿಲ್ಲ. ಸಂಶಯಾಸ್ಪದ ಪ್ರಕರಣಗಳು ನಡೆದರೆ, ಯಾರಾದರು ಸಮಾಜ ಘಾತುಕ ಕೃತ್ಯದಲ್ಲಿ ತೊಡಗಿದ್ದರೆ ಅಥವಾ ಗಾಂಜಾ ಮಾರಾಟ ವಾಗುತ್ತಿದ್ದರೆ ತತ್‌ಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸ್‌ ಅಧಿಕಾರಿಗಳು ಮನವಿ ಮಾಡಿದರು. ಕಾನೂನು, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವೆಂದರು.
ಹಿರಿಯ ಪತ್ರಕರ್ತರಾದ ಜಿ. ಚಿದ್ವಿಲಾಸ್‌, ಶ್ರೀಧರ್‌ ನೆಲ್ಲಿತ್ತಾಯ ಸೇರಿದಂತೆ ಸಾರ್ವಜನಿಕರು ಹಾಗೂ  ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ನಗರದಲ್ಲಿ  ಪೊಲೀಸ್‌ ವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.