ಉಗ್ರ ನಿಗ್ರಹ ಮಾಡಿದ ಕೊಡಗಿನ ವೀರಯೋಧ ಮಹೇಶ್‌ಗೆ ಶೌರ್ಯ ಚಕ್ರ


Team Udayavani, Mar 17, 2019, 3:17 AM IST

q-23.jpg

ಮಡಿಕೇರಿ: ಉಗ್ರರು ಸಾಕಷ್ಟು ಸಂಖ್ಯೆಯಲ್ಲಿದ್ದರೂ ಅಂಜದೆ ಅವರ ಅಡಗುದಾಣದ ಮೇಲೆ ದಾಳಿ ನಡೆಸಿ ಭಯೋತ್ಪಾದಕ ಕೃತ್ಯಕ್ಕೆ ಕಡಿವಾಣ ಹಾಕಿದ ಕೊಡಗಿನ ವೀರ ಯೋಧ ಸಿಪಾಯಿ ಎಚ್‌.ಎನ್‌. ಮಹೇಶ್‌ ಅವರಿಗೆ  ಶಾಂತಿ ಕಾಲದ ಉನ್ನತ ಪ್ರಶಸ್ತಿಯಾದ ಶೌರ್ಯ ಚಕ್ರ ಪ್ರದಾನ ಮಾಡಿ ಗೌರವಿಸಲಾಗಿದೆ.

ಭಾರತೀಯ ಸೇನಾ ಪಡೆ ಯಿಂದ ನೀಡಲಾಗುವ ಶೌರ್ಯ ಚಕ್ರವನ್ನು ಗುರುವಾರ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರು ಮಹೇಶ್‌ ಅವರಿಗೆ ಪ್ರದಾನ‌ ಮಾಡಿದರು. ಗೋಣಿಕೊಪ್ಪದ ಗುತ್ತಿಗೆದಾರ ನಾಗರಾಜ್‌ ಮತ್ತು ಲಕ್ಷ್ಮೀ ದಂಪತಿಯ ಪುತ್ರ ಮಹೇಶ್‌ ಏಳು ವರ್ಷಗಳಿಂದ ಸೇನೆಯಲ್ಲಿ ಸಿಪಾಯಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ವರ್ಷ ಜಮ್ಮುಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿ ಸಂದರ್ಭ ಆ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಮಹೇಶ್‌ ತತ್‌ಕ್ಷಣ ಉಗ್ರರನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆಗಿಳಿದಿದ್ದರು. ಮಹೇಶ್‌ ಅವರು ಉಗ್ರರ ಗುಂಡಿನ ದಾಳಿಯನ್ನು ಲೆಕ್ಕಿಸದೆ ಮುನ್ನುಗ್ಗಿ ಅವರ ಮೇಲೆ ಸತತ ಗುಂಡಿನ ಮಳೆಗೆರೆಯುತ್ತಾ ಹಿಮ್ಮೆಟ್ಟಿಸಿದ್ದರು. ಈ ಸಂದರ್ಭ ಓರ್ವ ಉಗ್ರನನ್ನು ಬಲಿ ಪಡೆದಿದ್ದರು. ಮತ್ತೋರ್ವ ಉಗ್ರ ಗಂಭೀರವಾಗಿ ಗಾಯಗೊಂಡು ಪಲಾಯನಗೈದಿದ್ದ.

ಕೊಡಗಿನ ಹಿರಿಮೆ
ಮಹೇಶ್‌ ಹಾಗೂ ಅವರ ಜತೆಗಿದ್ದ ಸೇನಾ ತಂಡ ಗುಂಡಿನ ಮಳೆಗರೆಯುತ್ತಿದ್ದಾಗ ಉಗ್ರರು ಜೀವಭಯದಿಂದ ಅಡಗು  ತಾಣವೊಂದರಲ್ಲಿ ಆಶ್ರಯ ಪಡೆದಿದ್ದರು. ತನ್ನಲ್ಲಿದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಮಯಪ್ರಜ್ಞೆ ಮತ್ತು ವಿವೇಚನೆಯಿಂದ ಬಳಸಿ ಹೆಚ್ಚುವರಿ ಸೇನಾ ಸಹಾಯ ಆಗಮಿಸುವ ವರೆಗೂ ಉಗ್ರರನ್ನು ಅಲ್ಲಿಯೇ ಹಿಡಿದಿರಿಸುವಲ್ಲಿ ಮಹೇಶ್‌ ಯಶಸ್ವಿಯಾಗಿದ್ದರು. ಮರು ದಿನವೂ ಕಾರ್ಯಾಚರಣೆ ಮುಂದು ವರಿಸಿ ಉಗ್ರ ರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದರು. ಮಹೇಶ್‌ ಅವರ ಶೌರ್ಯ ಸಾಧನೆಗೀಗ ಶೌರ್ಯಚಕ್ರ ಪ್ರಶಸ್ತಿ ಲಭಿಸಿದೆ. ಮಹೇಶ್‌ ಅವರು ಶೌರ್ಯಚಕ್ರ ಪ್ರಶಸ್ತಿ ಸ್ವೀಕರಿಸುವ ಸಂದರ್ಭ ಅವರ ತಂದೆ ನಾಗರಾಜ್‌ ಮತ್ತು ತಾಯಿ ಲಕ್ಷ್ಮೀ ಅವರು ಹಾಜರಿದ್ದು ಪುತ್ರನ ಸಾಧನೆಗೆ ಆನಂದಬಾಷ್ಪ ಮೂಲಕ ಹರ್ಷ ವ್ಯಕ್ತಪಡಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೂ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.