ಎಂ.ಸಿ.ನಾಣಯ್ಯ ಭೇಟಿ ಮಾಡಿದ ಸಿದ್ದರಾಮಯ್ಯ
Team Udayavani, Jan 10, 2018, 10:24 AM IST
ಮಡಿಕೇರಿ/ಬೆಂಗಳೂರು: ಜೆಡಿಎಸ್ನ ಹಿರಿಯ ಮುಖಂಡ ಎಂ.ಸಿ.ನಾಣಯ್ಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚಿ ಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಎಂ.ಸಿ.ನಾಣಯ್ಯ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ ಸಂಬಂಧ ಚರ್ಚೆ ನಡೆಸಿದ್ದ ಬೆನ್ನಲ್ಲೇ ಇದೀಗ ಸಿಎಂ ಅವರು ಮಡಿಕೇರಿಯಲ್ಲಿ ನಾಣಯ್ಯ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರಸಕ್ತ
ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಮಾತುಕತೆ ವೇಳೆ ನಾಣಯ್ಯ ಅವರಿಗೆ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಚರ್ಚೆ ನಡೆದಿಲ್ಲ: ಭೇಟಿ ನಂತರ ಮಾತನಾಡಿದ ಸಿದ್ದರಾಮಯ್ಯ, “ನಾನು, ನಾಣಯ್ಯ ಹಳೆ ಸ್ನೇಹಿತರು. ರಾಜಕಾರಣದಲ್ಲಿ ನಾಣಯ್ಯ ನನಗಿಂತ ಹಿರಿಯರು. ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿದ್ದೆ. ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಿಲ್ಲ ಎಂದರು. ಎಂ.ಸಿ.ನಾಣಯ್ಯ ಮಾತನಾಡಿ, “ನನ್ನ ಆರೋಗ್ಯ ವಿಚಾರಿಸಲು ಸಿದ್ದರಾಮಯ್ಯ ಬಂದಿದ್ದರು. ಅವರಿಗೆ ನಾನು ಶುಭ ಕೋರುವೆ. ನಾನು, ಸಿದ್ದರಾಮಯ್ಯ ಹಲವಾರು
ವರ್ಷಗಳ ಸ್ನೇಹಿತರು. ಸರ್ಕಾರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಹೀಗಾಗಿ, ಒಬ್ಬ ಗೆಳೆಯನಾಗಿ ಬಂದಿದ್ದರು. ಜೆಡಿಎಸ್ ನಾಯಕರ ವರ್ತನೆ ಬಗ್ಗೆ ಸ್ಥಳೀಯ ಕಾರ್ಯಕರ್ತರು, ಮುಖಂಡರಿಗೆ ಅಸಮಾಧಾನ ಆಗಿದೆ. ಅದು ಬಂಡಾಯವಲ್ಲ. ನಾನು ಅವರ ಜತೆ ಮಾತನಾಡುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ