ಮಾನವೀಯ ನೆಲೆಗಟ್ಟಿನಡಿ ಪರಿಹಾರ: ಜೆಡಿಎಸ್‌ ಆಗ್ರಹ


Team Udayavani, Sep 12, 2019, 5:35 AM IST

Z-JDS-2

ಮಡಿಕೇರಿ: ಮಹಾಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ದಾಖಲೆಗಳನ್ನೇ ಆಧಾರವಾಗಿಸದೆ ಮಾನವೀಯ ನೆಲೆಗಟ್ಟಿನಡಿ ಪರಿಹಾರ ವಿತರಿಸುವಂತೆ ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌ ಸರಕಾರವನ್ನು ಒತ್ತಾಯಿಸಿದ್ದಾರೆ.

ಜಿಲ್ಲಾ ಜೆಡಿಎಸ್‌ ವತಿಯಿಂದ ಕಾಂಡನಕೊಲ್ಲಿಯ ನಿರಾ]ತ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಸಂದರ್ಭ ಅವರು ಮಾತನಾಡಿದರು.

ಪ್ರವಾಹ ಮತ್ತು ಭೂಕುಸಿತದಿಂದ ಕೊಡಗಿನ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹಲವು ಕುಟುಂಬಗಳು ವಾಸದ ಮನೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅಸಹಾಯಕ ಸ್ಥಿತಿಯಲ್ಲಿರುವ ಸಂತ್ರಸ್ತರಿಗೆ ಪರಿಹಾರವನ್ನು ಸಕಾಲ ದಲ್ಲಿ ಒದಗಿಸದೆ ದಾಖಲೆಗಳನ್ನೇ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಗಣೇಶ್‌ ಟೀಕಿಸಿದರು.

ಕಾಂಡನಕೊಲ್ಲಿಯ ಬಾವುಕ ಮತ್ತು ಬೀಪಾತು ಎಂಬುವವರು ಅಣ್ಣ ತಂಗಿಯರಾಗಿದ್ದು, ಕಳೆದ 45 ವರ್ಷಗಳಿಂದ ವಾಸವಿದ್ದ ಮನೆಯನ್ನು ಮಹಾಮಳೆಯಿಂದ ಕಳೆದುಕೊಂಡಿದ್ದಾರೆ. ಇವರ ಮನೆಗೆ ಹಕ್ಕುಪತ್ರ ದೊರೆಯದೆ ಇದ್ದ ಕಾರಣವನ್ನೇ ನೆಪ ಮಾಡಿಕೊಂಡು ಮನೆ ಕಳೆದುಕೊಂಡವರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು ನೀಡದೆ ವಂಚಿಸಲಾಗಿದೆ.

ವಾರಸುದಾರರು ಯಾರೂ ಇಲ್ಲದೆ ವೃದ್ಧಾಪ್ಯದ ದಿನಗಳನ್ನು ಕಳೆಯುತ್ತಿರುವ ಇವರಿಬ್ಬರ ಬದುಕು ಅತಂತ್ರವಾಗಿದೆ. ಆದ್ದರಿಂದ ಜಿಲ್ಲಾಡಳಿತ ದಾಖಲೆಗಳನ್ನು ಕಡ್ಡಾಗೊಳಿಸದೆ ಪ್ರತ್ಯಕ್ಷವಾಗಿ ಕಾಣುತ್ತಿರುವ ನಷ್ಟವನ್ನು ತುಂಬಿಕೊಡಬೇಕೆಂದು ಗಣೇಶ್‌ ಒತ್ತಾಯಿಸಿದರು.

ಅನೇಕ ಪ್ರಕರಣಗಳು ಜಿಲ್ಲೆಯಲ್ಲಿದ್ದು, ಸಂತ್ರಸ್ತರು ಪರಿಹಾರದಿಂದ ವಂಚಿತರಾಗದಂತೆ ಸರಕಾರ ಸೂಕ್ತ ನಿರ್ದೇಶ ನೀಡಿ ಪರಿಹಾರದ ಮೊತ್ತವನ್ನು ಹಂಚಿಕೆ ಮಾಡಬೇಕೆಂದು ಅವರು ಹೇಳಿದರು. ಮನೆ ಕಳೆದುಕೊಂಡಿರುವ ಅಣ್ಣ, ತಂಗಿಗೆ ಜೆಡಿಎಸ್‌ ವತಿಯಿಂದ ಆರ್ಥಿಕ ನೆರವನ್ನು ವಿತರಿಸಲಾಯಿತು. ಈ ಸಂದರ್ಭ ಪಕ್ಷದ ಪ್ರಮುಖರಾದ ಸುನೀಲ್‌, ಡೆನ್ನಿ ಬರೋಸ್‌, ಷರೀಫ್, ಅಬ್ದುಲ್ಲ, ಯೂಸುಫ್. ಹನೀಫ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.