ತುಂಬಿ ಹರಿದ ನದಿ ತೊರೆಗಳು,ಬೆಟ್ಟ,ಗುಡ್ಡ,ಬರೆ ಕುಸಿಯುವ ಆತಂಕ​​​​​​​


Team Udayavani, Aug 18, 2018, 6:00 AM IST

16spt3.jpg

ಸೋಮವಾರಪೇಟೆ: ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಗ್ರಾಮೀಣ ಭಾಗದಲ್ಲಿ ನದಿ ತೊರೆಗಳು ಭೋರ್ಗರೆಯುತ್ತಿದ್ದು, ಬೆಟ್ಟ, ಗುಡ್ಡ, ಬರೆಗಳು ಕುಸಿಯುವ ಆತಂಕದಲ್ಲಿ ನಿವಾಸಿಗಳು ಗ್ರಾಮ ತೊರೆಯುತ್ತಿದ್ದಾರೆ. 

ಬರೆ ಕುಸಿತಕ್ಕೆ ಹೆದರಿ ಊರುಬಿಟ್ಟರು
ಮಾದಾಪುರ ಸಮೀಪದ ಶಿರಂಗಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಗುಡ್ಡ ಕುಸಿಯುತ್ತಿರುವ ಮುನ್ಸೂಚನೆ ಸಿಕ್ಕಿದ ಗ್ರಾಮದ 150ಕ್ಕೂ ಹೆಚ್ಚು ಮಂದಿ, ಕೈಗೆ ಸಿಕ್ಕ ವಸ್ತುಗಳನ್ನು ತೆಗೆದುಕೊಂಡು ಗ್ರಾಮ ತೊರೆದಿದ್ದಾರೆ. ರಸ್ತೆಗೆ ಬರೆ ಕುಸಿದ ಪರಿಣಾಮ ಪಟ್ಟಣಕ್ಕೆ ತಲುಪಲು ಸಾಧ್ಯವಾಗದೆ ಸಹಾಯಕ್ಕಾಗಿ ಅಂಗಲಾಚು ತ್ತಿದ್ದಾರೆ. ಈಗಾಗಲೆ ಅಲ್ಲಿನ ಅಂಚೆ ಕಚೇರಿಯ ಸಮೀಪದ ತಂಗುದಾಣದಲ್ಲಿ ಆಶ್ರಯ ಪಡೆದಿದ್ದಾರೆ.

ಬರೆ ಕುಸಿತ: ಮೂವರಿಗೆ ಗಾಯ
ಮೂವತ್ತೂಕ್ಲು ಗ್ರಾಮದಲ್ಲಿ ಮನೆ ಮೇಲೆ ಬರೆ ಕುಸಿದ ಪರಿಣಾಮ, ಮನೆಯೊಳಗಿದ್ದ ಪ್ರಕೃತಿ, ಪ್ರೇಮಾ, ಬೋಪಯ್ಯ ಗಾಯಗೊಂಡಿದ್ದಾರೆ. ಗ್ರಾಮಸ್ಥರು ಅವರನ್ನು ರಕ್ಷಣೆ ಮಾಡಿ, ಸುಂಠಿಕೊಪ್ಪ ಆಸ್ಪತ್ರೆಗೆ ಸಾಗಿಸಿದ್ದಾರೆ.

ನೂರಾರು ಎಕರೆ 
ಕೃಷಿಭೂಮಿ ಜಲಾವೃತ

ಶಾಂತಳ್ಳಿ ಹೋಬಳಿಯ ಬಹುತೇಕ ಗ್ರಾಮಗಳ ನೂರಾರು ಎಕರೆ ಭತ್ತ ಭೂಮಿ ಜಲಾವೃತಗೊಂಡಿದೆ. ಕುಡಿಗಾಣ ಗ್ರಾಮ ಸಂಪರ್ಕ ಕಡಿತಗೊಂಡಿದೆ. ಕಳೆದ ನಾಲ್ಕು ದಿನಗಳಿಂದ ಗ್ರಾಮದ ಸೇತುವೆ ಜಲಾವೃತ ಗೊಂಡಿದ್ದು, ಪಟ್ಟಣಕ್ಕೆ ತಲುಪಲು ಗ್ರಾಮಸ್ಥರು ಇನ್ನೊಂದು ದಾರಿಯನ್ನು ಆಶ್ರಯಿಸಿದ್ದರು. ಆದರೆ ಗುರುವಾರ ಬೆಳಗ್ಗೆ ಆ ರಸ್ತೆ ಮೇಲೆ ಬರೆ ಕುಸಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.

ಚೋರನಹೊಳೆ ತುಂಬಿ ಹರಿಯು ತ್ತಿದ್ದು, ಐಗೂರು ಗ್ರಾಮದ ಹೊಳೆದಂಡೆಯ ಮನೆಗಳು ಜಲಾವೃತಗೊಳ್ಳುವ ಆತಂಕ ಎದುರಾಗಿದೆ. ಮೋಹನ್‌ದಾಸ್‌, ವಿಶ್ವನಾಥ್‌, ಲೋಕನಾಥ್‌, ಇಂದಿರಾ ಅವರ ಮನೆಗಳು ನೀರಿನಿಂದ ಅವೃತವಾಗಿವೆ.
 
ಕಿರಗಂದೂರು ಗ್ರಾ.ಪಂ. ವ್ಯಾಪ್ತಿಯ ಮುರುಗ, ರಾಮು, ಪನ್ನಿರು, ಸುಬ್ರಮಣಿ, ಚಂದ್ರ, ಮಣಿ, ಗಣೇಶ್‌, ರಾಜೇಂದ್ರ, ಓಡಿ, ಸುಂದರರಾಜು, ಪಾಪಣ್ಣ, ಗಣೇಶ್‌, ಮುತ್ತಪ್ಪ ಅವವರ ಮನೆಗಳು ಜಲಾವೃತಗೊಂಡಿವೆ. ಇವರನ್ನು ಕಾಜೂರಿನ ಶಾಲೆಯಲ್ಲಿ ತೆರೆಯಲಾಗಿರುವ ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಗ್ರಾಮ ಸಂಪರ್ಕಕ್ಕೆ ತೆಪ್ಪವನ್ನು ಉಪಯೋಗಿಸಲಾಗುತ್ತಿದೆ. ಹರಗ ಗ್ರಾಮದಲ್ಲಿ ಮುಖ್ಯ ರಸ್ತೆಯ ಮೋರಿ ಕುಸಿದ ಪರಿಣಾಮ ಸಂಪರ್ಕ ಕಡಿತದೊಂಡಿದೆ. ಯಡೂರು ಗ್ರಾಮದ ಕೃಷಿ ಭೂಮಿಯ ಸಮೀಪ ಹರಿಯುವ ತೊರೆಯ ಮೇಲೆ ಭೂಕುಸಿತವಾಗಿದ್ದು, ನೀರು ಗದ್ದೆಯ ಮೇಲೆ ಹರಿಯುತ್ತಿದ್ದು, ಬಹಳಷ್ಟು ನಷ್ಟವಾಗಿದೆ.

ಸರಣಿ ಮನೆ ಕುಸಿತ
ಬಜೆಗುಂಡಿ ಕಾಲನಿಯಲ್ಲಿ ಸರಣಿ ಮನೆ ಕುಸಿತವಾಗುತ್ತಿದ್ದು, ಬುಧವಾರ ರಾತ್ರಿ ಮತ್ತೆರಡು ಮನೆಗಳು ಕುಸಿದಿವೆ. ಚೆನ್ನಾ ಮತ್ತು ಪ್ರಿಯಾ ರತೀಶ್‌ ಅವರ ಮನೆಗಳು ಕುಸಿದಿವೆ. ಕಮಲ ಮತ್ತು ದೇವಕ್ಕಿ ಅವರ ಮನೆ ಪಕ್ಕ ಬರೆ ಕುಸಿದು ಹಾನಿಯಾಗಿದೆ. ಕ್ಯಾತೆ ಗ್ರಾಮದ ಪುಟ್ಟಸ್ವಾಮಿ, ರಾಮೇಗೌಡ, ಮಸಗೋಡು ಗ್ರಾಮದ ಸರೋಜಾ, ಜಾನಕಿ, ಅರೆಯೂರು ಗ್ರಾಮದ ರಮೇಶ್‌, ಹಾನಗಲ್ಲು ಗ್ರಾಮದ ಚಂದ್ರಕಲಾ, ಕಲ್ಕಂದೂರು ಗ್ರಾಮದ ಉಮಾ ಅವರ ಮನೆಗಳ ಗೋಡೆ ಕುಸಿದು ಹಾನಿಯಾಗಿದೆ. ಕಿರಿಕೊಡ್ಲಿ ಗ್ರಾಮದಲ್ಲಿ ಬರೆ ಕುಸಿದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಐಗೂರಿನ ಶೋಭಾ ಅವರ ಮನೆಯ ಮೇಲೆ ಮರಬಿದ್ದು ಹೆಚ್ಚಿನ ಹಾನಿಯಾಗಿದೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.