ಪುತ್ರಿಯನ್ನು ಅಂಗನವಾಡಿಗೆ ದಾಖಲಿಸಿ ಮಾದರಿಯಾದ ಎಸ್‌ಪಿ


Team Udayavani, Oct 17, 2019, 5:29 AM IST

sp

ಮಡಿಕೇರಿ :ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸುಮನ್‌ ಡಿ.ಪನ್ನೇಕರ್‌ ಅವರು ತಮ್ಮ ಮಗುವನ್ನು ಸರಕಾರಿ ಅಂಗನವಾಡಿಗೆ ದಾಖಲಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಕೂಡ ಪ್ರತಿಷ್ಠೆಯನ್ನಾಗಿ ಪರಿಗಣಿಸುತ್ತಿರುವ ಇಂದಿನ ಪೋಷಕರು ಮಕ್ಕಳು ಜನಿಸುತ್ತಲೇ ಇಂಗ್ಲೀಷ್‌ ಪದ ಪ್ರಯೋಗಗಳನ್ನು ಆರಂಭಿಸುತ್ತಾರೆ. ಬೇಬಿ ಸಿಟ್ಟಿಂಗ್‌, ಎಲ್‌ಕೆಜಿ, ಯುಕೆಜಿ ತರಗತಿಗಳಿಗಾಗಿ ವರ್ಷಗಟ್ಟಲೆ ಕಾದು ಸೀಟು ಗಿಟ್ಟಿಸಿಕೊಳ್ಳುವ ರಿಸ್ಕ್ ಕೂಡ ಪೋಷಕರ ಮೇಲಿದೆ.

ಆದರೆ ಯಾವುದೇ ಪೈಪೋಟಿಗಳಿಲ್ಲದೆ ಸುಲಭ ಮಾರ್ಗ ತೋರುವ ಅಂಗನವಾಡಿಗಳು ಕಾಲ ಬುಡದಲ್ಲಿದ್ದರೂ ಅವುಗಳ ಬಗ್ಗೆ ಕನ್ನಡ ಪೋಷಕರಿಗೆ ತಾತ್ಸಾರವೇ ಹೆಚ್ಚು. ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳಂತೂ ತಮ್ಮ ಮಕ್ಕಳನ್ನು ಸರಕಾರಿ ಶಾಲೆಯ ಕಡೆಗೆ ತಿರುಗಿಯೂ ನೋಡದಂತೆ ಮಾಡುತ್ತಾರೆ ಎನ್ನುವ ಅಪವಾದವಿದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೊಡಗು ಎಸ್‌ಪಿ ಸುಮನ್‌ ಡಿ.ಪನ್ನೇಕರ್‌ ಅವರು ತಮ್ಮ ಎರಡೂವರೆ ವರ್ಷದ ಪುತ್ರಿ ಖುಷಿಯನ್ನು ಫೀ.ಮಾ.ಕಾರ್ಯಪ್ಪ ಕಾಲೇಜು ಸಮೀಪದ ಅಂಗನವಾಡಿಗೆ ದಾಖಲಿಸಿದ್ದಾರೆ.

ಮಕ್ಕಳಿಗೆ ಬಾಲ್ಯದಿಂದಲೇ ನೈತಿಕತೆ ಮತ್ತು ಮೌಲ್ಯಗಳ ಪಾಠ ಅಗತ್ಯವೆನ್ನುವ ಕಾರಣಕ್ಕಾಗಿ “”ಖುಷಿ”ಗೆ ಅಂಗನವಾಡಿ ಮೂಲಕವೇ ಮೊದಲ ಪಾಠ ಆರಂಭಿಸುತ್ತಿರುವುದಾಗಿ ಎಸ್‌ಪಿ ತಿಳಿಸಿದ್ದಾರೆ. ಸ್ಥಳೀಯ ಅಂಗನವಾಡಿ ವ್ಯವಸ್ಥೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂಗನವಾಡಿಯ ಇತರ ಮಕ್ಕಳು “”ಖುಷಿ”ಯೊಂದಿಗೆ ಖುಷಿ, ಖುಷಿಯಾಗಿ ದಿನ ಕಳೆಯುತ್ತಿರುವುದು ವಿಶೇಷ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.