ಅಂಗವಿಕಲ ವಿದ್ಯಾರ್ಥಿಗಳಿಗೆ ವಿಶೇಷ ಪ್ರಾಧಾನ್ಯ ನೀಡಿ: ಬಸವರಾಜು 


Team Udayavani, Feb 26, 2019, 1:00 AM IST

angavikala.jpg

ಮಡಿಕೇರಿ :ಸರಕಾರದ ವಿಶೇಷ ಯೋಜನೆಯಡಿ ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳಿಗೆ ವಿಶೇಷ ಪ್ರಾಧಾನ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರವು ಸಾಕಷ್ಟು ಯೋಜನೆ ಹಾಗೂ ಅನುದಾನ ನೀಡಿದೆ. ವಿಕಲಚೇತನರ ಕ್ಷೇಮಾಭಿವೃದ್ಧಿಗೆ ಅಧಿಕಾರಿಗಳು ಮತ್ತು ಪೋಷಕರು ವಿಶೇಷ ಜವಾಬ್ದಾರಿಯನ್ನು ತೆಗೆದುಕೊಳ್ಳುವುದು ಅಗತ್ಯ ಎಂದು ಅಂಗವಿಕಲರ ರಾಜ್ಯ ಆಯುಕ್ತರ ವಿ.ಎಸ್‌.ಬಸವರಾಜ್‌ ಅವರು ಸೂಚನೆ ನೀಡಿದ್ದಾರೆ.   

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಅಂಗವಿಕಲರ ‌ ಕ್ಷೇಮಾ ಭಿವೃದ್ಧಿ ಬಗ್ಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅಂಗವಿಕಲ‌ರಿಗೆ ವಿಶೇಷ ಪ್ರಾಧಾನ್ಯ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರತಿಯೊಂದು ಇಲಾಖೆಗಳಿಗೂ ಕೂಡ ಅನುದಾನ ಬಿಡುಗಡೆ ಮಾಡಿದೆ. ಅನುದಾನವು ಫ‌ಲಾನುಭವಿಗಳಿಗೆ ನೇರವಾಗಿ ವಿತರಣೆಯಾಗಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಅಂಗವಿಕಲರ ಸಂಭಂಧಪಟ್ಟ ಸಮಸ್ಯೆಗಳಿಗೆ ಅಧಿಕಾರಿಯಾಗಿ ಮಾತ್ರವಲ್ಲದೆ ಮಾನ ವೀಯ ದೃಷ್ಟಿಯಿಂದ ಸ್ಪಂದಿಸುವ ಮೂಲಕ ನೆರವಾಗಬೇಕು ಎಂದು ಅವರು ತಿಳಿಸಿದರು.      

ಬ್ಯಾಂಕ್‌ಗಳಲ್ಲಿ ಕೆಲವೊಂದು ಯೋಜನೆ ಗಳಡಿ ವಿಕಲಚೇತನರು ಸಾಲಕ್ಕೆ ಅರ್ಜಿ ಸಲ್ಲಿಸಿದರೆ, ಯಾವುದೇ ಸೂಕ್ತ ಕಾರಣ ನೀಡದೇ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ವಿಕಲಚೇತನರು ಸಭೆಯ ಗಮನಕ್ಕೆ ತಂದರು.  ಅರ್ಜಿ ಸಲ್ಲಿಸಿದ ಎಲ್ಲರಿಗೂ ಸಾಲ ನೀಡಬೇಕು ಎಂದು ಹೇಳಲಾಗುವುದಿಲ್ಲ. ಸೂಕ್ತ ದಾಖಲಾತಿಗಳಿದ್ದರೇ ಅಂತಹವರಿಗೆ ಸಾಲ ನೀಡಿ ಹಾಗೂ ಯಾವ ಕಾರಣಕ್ಕಾಗಿ ಅವರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂಬುದರ ಬಗ್ಗೆ ಬ್ಯಾಂಕ್‌ಗಳು ಮಾಹಿತಿ ನೀಡಬೇಕು ಎಂದು ಲೀಡ್‌ ಬಾಂಕ್‌ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಅಂಗವಿಕಲ‌ರಿಗೆ ನೀಡಲಾಗುವ ಸೌಲಭ್ಯಗಳಿಂದ ವಂಚಿತರಾಗದಂತೆ ಎಲ್ಲಾ ಅಧಿಕಾರಿಗಳ ಕರ್ತವ್ಯವಾಗಿದ್ದು. ಅಧಿಕಾರಿಗಳು ಯಾವುದೇ ಕೆಲಸಗಳನ್ನು ಮಾಡಬೇಕಾದರೆ ಗುರಿ ಇಟ್ಟುಕೊಂಡು ಕೆಲಸ ಮಾಡಿದಾಗ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುವುದಿಲ್ಲ ಎಂದು ಸಲಹೆ ಮಾಡಿದರು.ಅಂಗವಿಕಲರಿಗೆ ನೀಡಲಾಗುವ ಪ್ರಮಾಣ ಪತ್ರಗಳನ್ನು ನೀಡುವಲ್ಲಿ ವೈದ್ಯರು ವಿನಾಕಾರಣ ವಿಳಂಬ ದೋರಣೆ ಮಾಡಿದರೆ ಅಂತಹ ವೈದ್ಯರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.    ಜಿ.ಪಂ.ಸಿಇಒ ಕೆ.ಲಕ್ಷಿ¾ಪ್ರಿಯಾ ಅವರು ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಮಾಹಿತಿ ನಿಡಬೇಕು. ಎಂದು ಹೇಳಿದರು.  ಜಿಲ್ಲಾಧಿಕಾರಿ ಅನೀಸ್‌ ಕನ್ಮಣಿ ಜಾಯ್‌, ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಡಾ.| ಸುಮನ್‌ ಡಿ.ಪನ್ನೇಕರ್‌ ಮೊದಲಾದರು ಉಪಸ್ಥಿತರಿದ್ದರು.

ವಿಕಲ ಸ್ನೇಹಿ ಶೌಚಾಲಯ 
ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ಪಡೆದ ಬಸವರಾಜ್‌ ಅವರು ವಿಕಲಚೇತನರ ಕ್ಷೇಮಾಭಿವೃದ್ಧಿಗೆ ವಿಶೇಷವಾದ “ವಿಕಲ ಸ್ನೇಹಿ ಶೌಚಾಲಯ ನಿರ್ಮಾಣ”, ವಿಶೇಷವಾದ ವಿದ್ಯಾರ್ಥಿ ನಿಲಯಗಳ ಸ್ಥಾಪನೆ, ಶಿಕ್ಷಣ ಇಲಾಖೆಯ ಮೂಲಕ ಶಾಲೆಯಿಂದ ಹೊರಗುಳಿದ 18 ವರ್ಷದ ಒಳಗಿನ ಮಕ್ಕಳ ಬಗ್ಗೆ ಕಾಳಜಿ ವಹಿಸಿ “”ಮರಳಿ ಶಾಲೆಗೆ” ಶಿಬಿರ ಏರ್ಪಡಿಸುವಂತಾಗಬೇಕು ಎಂದು ಹೇಳಿದ‌ರು.     

ವಿಕಲಚೇತನರಿಗೆ ಇರುವ ಸೌಲಭ್ಯಗಳ ಬಗ್ಗೆ ಗ್ರಾಮ ಪಂಚಾಯತ್‌ ಮಟ್ಟದಲ್ಲಿ  ಪಿಡಿಒ ಸೌಲಭ್ಯಗಳನ್ನು ಒದಗಿಸುವಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲು ಇಒ ಗಳಿಗೆ ಬಸವರಾಜ್‌ ಅವರು ಈ ಸಂದರ್ಭದಲ್ಲಿ ನಿರ್ದೇಶ ನೀಡಿದರು.  

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.