ಶ್ರೀಮಂಗಲ ರಾಮತೀರ್ಥ ಪ್ರವಾಹ : ಅಪಾರ ಕೃಷಿ ಹಾನಿ
Team Udayavani, Aug 15, 2019, 5:45 AM IST
ಮಡಿಕೇರಿ: ಶ್ರೀ ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಕೂರು ಗ್ರಾಮದಲ್ಲಿ ಹರಿಯುತ್ತಿರುವ ರಾಮತೀರ್ಥ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ಕೋಟ್ರಂಗಡ ಕುಟುಂಬಸ್ಥರಿಗೆ ಸೇರಿದ ನೂರಾರು ಎಕರೆ ನಾಟಿ ಮಾಡಿದ ಗದ್ದೆ ಮುಳುಗಡೆಯಾಗಿ ಲಕ್ಷಾಂತರ ಮೌಲ್ಯದ ಕೃಷಿ ನಷ್ಟ ಉಂಟಾಗಿದೆ ಎಂದು ಕೆ.ಎಂ.ಚಿಣ್ಣಪ್ಪ ಅವರು ತಿಳಿಸಿದ್ದಾರೆ.
ಗದ್ದೆಯನ್ನು ಉಳುಮೆ ಮಾಡಿ ನಾಟಿ ಕಾರ್ಯ ಮುಗಿಸಲಾಗಿತ್ತು. ಮಳೆಯಿಂದಾಗಿ ರಾಮತೀರ್ಥ ಹೊಳೆಯಲ್ಲಿ ಪ್ರವಾಹ ಉಂಟಾಗಿ, ನಾಟಿ ಮಾಡಲಾದ ಗದ್ದೆಯಲ್ಲಿ ಮರಳು, ಹೂಳು ತುಂಬಿಕೊಂಡಿದೆ. ಭತ್ತದ ಸಸಿ ಕೊಳೆತು ಹೋಗುವ ಸ್ಥಿತಿಯಲ್ಲಿದ್ದು ಸುಮಾರು ರೂ.20 ಲಕ್ಷ ನಷ್ಟ ಸಂಭವಿಸಿದೆ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗಿನ ವರ್ಷದಲ್ಲಿ ರೈತರು ಭತ್ತಕ್ಕೆ ಸೂಕ್ತ ಬೆಂಬಲ ಬೆಲೆ ದೊರಕದೆ, ಕಾಡು ಪ್ರಾಣಿಗಳ ಉಪಟಳ, ಕಾರ್ಮಿಕರ ಕೊರತೆಯಿಂದಾಗಿ ಭತ್ತದ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಈ ಹಂತದಲ್ಲಿ ಕೃಷಿ ಇಲಾಖೆ ಹಾಗೂ ರಾಜ್ಯ ಸರ್ಕಾರಗಳ ಉತ್ತೇಜನ ಅಗತ್ಯ. ಇದೀಗ ಭತ್ತದ ಗದ್ದೆಯಿಂದ ಮರಳನ್ನು ತೆಗೆಯುವದೇ ಪ್ರಯಾಸದ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು ಅರಿತು ಪರಿಹಾರ ಕಲ್ಪಿಸಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ