ಗೋಹತ್ಯೆ ತಡೆಗೆ ಕಾರ್ಯಪಡೆ ರಚನೆ: ಸಚಿವ ಬೊಮ್ಮಾಯಿ


Team Udayavani, Nov 6, 2020, 10:50 PM IST

ಗೋಹತ್ಯೆ ತಡೆಗೆ ಕಾರ್ಯಪಡೆ ರಚನೆ: ಸಚಿವ ಬೊಮ್ಮಾಯಿ

ಮಡಿಕೇರಿ: ಗೋಹತ್ಯೆ, ಗೋವು ಕಳ್ಳಸಾಗಾಟ ತಡೆಗಟ್ಟಲು ವಿಶೇಷ ಕಾರ್ಯಪಡೆಯೊಂದನ್ನು ರಚಿಸುವ ಚಿಂತನೆ ಇರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ, ಗೋವು ಕಳ್ಳಸಾಗಾಟ ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸರಕಾರೇತರ ಸಂಸ್ಥೆಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ಈ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಗೋ ಹತ್ಯೆ ಜತೆಗೆ ಜಾನುವಾರು ಕಳ್ಳಸಾಗಾಟ ಮಾಡುವವರ ವಿರುದ್ಧವೂ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಕಾರ್ಯಪಡೆ ರಚಿಸುವ ಚಿಂತನೆಯಿದೆ ಎಂದರು.

ಲಾಕ್‌ಡೌನ್‌ ಸಂದ ರ್ಭ ಅಪರಾಧ ಪ್ರಕರಣಗಳು ನಿಯಂತ್ರಣದಲ್ಲಿದ್ದು, ಈಗ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚ ರಿಕೆ ವಹಿಸುವಂತೆ ಈಗಾಗಲೇ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶಿ ಸಲಾಗಿದ್ದು, ವಿಶೇಷವಾಗಿ ಕೊಲೆ, ಅತ್ಯಾಚಾರ ಬಗ್ಗೆ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದರು.

ಪರಿಹಾರ ಹೆಚ್ಚಳಕ್ಕೆ ಕ್ರಮ
ಕೊಡಗು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಆದರೆ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಯಿಂದಾಗಿ ಬೆಳೆ ಹಾಗೂ ಜೀವ ಹಾನಿಯೂ ಆಗುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಸರಕಾರ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದರು.

ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆಯ ಬಲವರ್ಧಿಸಲು ಗೃಹ ಇಲಾಖೆ ಬದ್ಧವಾಗಿದೆ. ಪೊಲೀಸ್‌ ಅಧೀಕ್ಷಕರ ಕಚೇರಿ ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಜತೆಗೆ ಅಗತ್ಯ ಸಿಬಂದಿ ನೇಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅನಧಿಕೃತ ಹೋಂಸ್ಟೇ ವಿರುದ್ಧ ಕ್ರಮ
ಜಿಲ್ಲೆಯ ಅನಧಿಕೃತ ಹೋಂ ಸ್ಟೇಗಳ ವಿರುದ್ಧ ಮುಂದಿನ ದಿನಗಳಲ್ಲಿ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಗೋಹತ್ಯೆ ನಿಷೇಧ ಅಗತ್ಯ: ಸುಧಾಕರ್‌
ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಮತ್ತಷ್ಟು ಚರ್ಚೆಯಾಗಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ಅಭಿಪ್ರಾಯಪಟ್ಟರು. ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದಲ್ಲಿ ಗೋವು ಪವಿತ್ರ ಎಂದು ಪರಿಗಣನೆಯಾಗಿದ್ದು, ಗೋಹತ್ಯೆ ಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಗೋವನ್ನು ಕುಟುಂಬದ ಸದಸ್ಯರಂತೆ ನಾವು ಗೌರವಿಸುತ್ತೇವೆ. ಗೋಹತ್ಯೆ ಹಿಂದೂಗಳ ಸಂಪ್ರದಾಯಕ್ಕೆ ವಿರು ದ್ಧವಾದ ಕ್ರಮವಾಗಿದೆ ಎಂದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.