ಕೊಡಗು ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ


Team Udayavani, Aug 25, 2018, 6:00 AM IST

hebbettugeri-road.jpg

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಹಾಗೂ ಗುಡ್ಡ ಕುಸಿತದಿಂದ ನಿರ್ವಸತಿಕರಾಗಿರುವ 443 ಕುಟುಂಬಗಳಿಗೆ ತಾತ್ಕಾಲಿಕ ಶೆಡ್‌ ವಸತಿ ಕಲ್ಪಿಸಲು ಜಿಲ್ಲಾಡಳಿತ ಮುಂದಾಗಿದೆ.ಮಡಿಕೇರಿ-ಮಕ್ಕಂದೂರು ಮಾರ್ಗದಲ್ಲಿರುವ ಕರ್ಣಿಗೇರಿಯಲ್ಲಿ ಸಮತಟ್ಟಾಗಿರುವ 5 ಎಕರೆ ಹಾಗೂ ಮಡಿಕೇರಿ ಆರ್‌ಟಿಒ ಕಚೇರಿ ಸಮೀಪದಲ್ಲಿ ಹ್ಯಾಲಿಪ್ಯಾಡ್‌ ನಿರ್ಮಿಸಲು ಮೀಸಲಿಟ್ಟಿರುವ 4.75 ಎಕರೆ ಜಮೀನನ್ನು ತಾತ್ಕಾಲಿಕ ಶೆಡ್‌ ನಿರ್ಮಿಸಲು ಗುರುತಿಸಲಾಗಿದೆ.

ಪ್ರತಿ ಕುಟುಂಬಕ್ಕೆ ತಾತ್ಕಾಲಿಕ ಶೆಡ್‌ ಮನೆ ನಿರ್ಮಿಸಿ ಅಡುಗೆ ಮಾಡಿಕೊಳ್ಳಲು ಸಿಲಿಂಡರ್‌, ಸ್ಟೌವ್‌ ಸೇರಿ ಪಾತ್ರೆ ಒದಗಿಸಲು ನಿರ್ಧರಿಸಲಾಗಿದೆ. ಮಳೆ ಬಂದರೂ ಸೋರದಂತೆ ಅಲ್ಯುಮಿನಿಯಂ ಶೆಡ್‌ಗಳನ್ನು ನಿರ್ಮಿಸಿಕೊಡಲು ತೀರ್ಮಾನಿಸಲಾಗಿದೆ.

ಮಳೆ ಹಾಗೂ ಗುಡ್ಡ ಕುಸಿತದಿಂದ 443 ಕುಟುಂಬಗಳ ಮನೆ ಸಂಪೂರ್ಣವಾಗಿ ನೆಲಸಮವಾಗಿದ್ದು, ಅವರ ಜಾಗ ಗುರುತಿಸಿ ಅಲ್ಲಿ ಹೊಸದಾಗಿ ಮನೆ ನಿರ್ಮಿಸಿಕೊಡಲು 6 ತಿಂಗಳು ಹಿಡಿಯಲಿದೆ. ಅಲ್ಲಿಯವರೆಗೆ ಶೆಡ್‌ನ‌ಲ್ಲಿ ಕುಟುಂಬಗಳು ವಾಸಿಸಲು ಅನುಕೂಲ ಮಾಡಿಕೊಡಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ.

ಈ ಮಧ್ಯೆ, ನಿರಾಶ್ರಿತ ಶಿಬಿರದಲ್ಲಿ ಆಶ್ರಯ ಪಡೆದಿದ್ದವರು ದಿನೇ ದಿನೆ ಕಡಿಮೆಯಾಗುತ್ತಿದ್ದು, ಹೆಚ್ಚು ದಿನ ಶಿಬಿರದಲ್ಲಿ ಇರಲು ಸಾಧ್ಯವಾಗದೇ ಮೈಸೂರು, ಬೆಂಗಳೂರು ಸೇರಿ ನೆಂಟರ ಮನೆಗಳತ್ತ ಹೊರಟಿದ್ದಾರೆ. ಆರಂಭದಲ್ಲಿ ಇದ್ದ 6,685 ನಿರಾಶ್ರಿತರ ಸಂಖ್ಯೆ ಅರ್ಧಕ್ಕರ್ಧ ಕಡಿಮೆಯಾಗಿದೆ. ಉಳಿದ ಕುಟುಂಬಗಳಿಗೆ ತಾತ್ಕಾಲಿಕ ಶೆಡ್‌ಗಳ ನಿರ್ಮಾಣ ಮಾಡಲಾಗುತ್ತಿದೆ.

ಮಳೆ ಕಡಿಮೆಯಾಗಿರುವುದರಿಂದ ಸ್ವಲ್ಪ ಮಟ್ಟಿಗೆ ಹಾನಿಯಾಗಿರುವ ತಮ್ಮ ಮನೆಗಳನ್ನು ದುರಸ್ಥಿಪಡಿಸಿ ಅಲ್ಲೇ ವಾಸಿಸುವ ಬಯಕೆಯನ್ನೂ ಕೆಲವರು ವ್ಯಕ್ತಪಡಿಸಿ, ಸರ್ಕಾರದಿಂದ ನೆರವು ಕೋರುತ್ತಿದ್ದಾರೆ.

ನಿರಾಶ್ರಿತರ ಶಿಬಿರದಲ್ಲಿ ಇರುವ ಅನೇಕರ ಮನೆ ಪೂರ್ಣ ಹಾನಿಗೊಳಗಾಗಿದೆ. ಕೆಲವರ ಮನೆ ಭಾಗಶಃ ಹಾನಿಯಾಗಿದೆ. ಇನ್ನು ಕೆಲವರ ಮನೆಗೆ ಯಾವುದೇ ಹಾನಿಯಾಗಿಲ್ಲ. ಆದರೆ, ತೋಟ ಹಾಗೂ ಜಮೀನಿಗೆ ನಷ್ಟವಾಗಿದೆ. ಮನೆಗೆ ಯಾವುದೇ ಹಾನಿಯಾಗದವರು ಮಳೆ ಪ್ರಮಾಣ ಸಂಪೂರ್ಣ ಇಳಿದ ನಂತರ ವಾಪಸ್‌ ಅದೇ ಮನೆಗೆ ಹೋಗುವ ಸಾಧ್ಯತೆ ಹೆಚ್ಚಿದೆ. ಇನ್ನು, ಮನೆ ಸಂಪೂರ್ಣ ಹಾನಿಯಾದವರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಡುವುದು ಅನಿವಾರ್ಯವಾಗಿದೆ.

ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಸುತ್ತಮುತ್ತ ಗುಡ್ಡ ಇಲ್ಲದ ಸಮತಟ್ಟಾದ ಎರಡು ಜಾಗ ಗುರುತಿಸಿ ವಿವರ ಸಲ್ಲಿಸಿದ್ದೇವೆ. ಜಿಲ್ಲಾಡಳಿತ ಒಪ್ಪಿಗೆ ಸೂಚಿಸಿದ ನಂತರ ತಾತ್ಕಾಲಿಕ ಶೆಡ್‌ ನಿರ್ಮಾಣ ಆರಂಭಿಸಲಿದ್ದೇವೆ ಎಂದು  ಮಡಿಕೇರಿ ತಹಶೀಲ್ದಾರ್‌ ಕುಸುಮಾ ತಿಳಿಸಿದರು.

ನಿರಾಶ್ರಿತರ ಶಿಬಿರದಲ್ಲಿ ಹೆಚ್ಚುದಿನ ಅಧಿಕ ಜನರನ್ನು ಸಲವುದು ಕಷ್ಟಸಾಧ್ಯವಾಗುತ್ತದೆ. ಹೀಗಾಗಿ ತುರ್ತು ಅಗತ್ಯ ಇರುವವರಿಗೆ ಶೆಡ್‌ಗಳ ನಿರ್ಮಾಣ ಮಾಡಲೇ ಬೇಕಾಗುತ್ತದೆ. 443 ಕುಟುಂಬಗಳನ್ನು ಗಮನದಲ್ಲಿ ಇಟ್ಟುಕೊಂಡು ಅಲೂಮಿನಿಯಂ ಶೆಡ್‌ಗಳ ನಿರ್ಮಾಣ ಮಾಡಲಾಗುತ್ತದೆ. ಪ್ರತಿ ಕುಟುಂಬಕ್ಕೂ ಪ್ರತ್ಯೇಕ ಶೆಡ್‌ ನಿರ್ಮಿಸಲಾಗುತ್ತದೆ. ಶೌಚಾಲಯ ಸೇರಿ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುತ್ತದೆ ಎಂದು ಹೇಳಿದರು.

ಶಾಶ್ವತ ಮನೆ:
ನಿರಾಶ್ರಿತರ ಕೇಂದ್ರದಿಂದ ಶೆಡ್‌ಗೆ ವರ್ಗಾಯಿಸಿದ ನಂತರ ಕನಿಷ್ಠ ಮೂರ್‍ನಾಲ್ಕು ತಿಂಗಳಾದರೂ ಅದೇ ಶೆಡ್‌ನ‌ಲ್ಲಿ ಇರಬೇಕಾಗುತ್ತದೆ. ನಂತರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದಂತೆ ಶಾಶ್ವತ ಪರಿಹಾರ ನೀಡಲಾಗುತ್ತದೆ. ಮನೆ ನಿರ್ಮಾಣ ಜವಾಬ್ದಾರಿ ಪಂಚಾಯತಿ, ನಗರಸಭೆ ಅಥವಾ ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕವೇ ಮಾಡಲಾಗುತ್ತದೆ. ಅನೇಕ ಕುಟುಂಬಗಳು ಮನೆ ಎಲ್ಲಿದೆ ಎಂಬುದನ್ನು ಇನ್ನೂ ಗುರುತಿಸಲು ಸಾಧ್ಯವಾಗಿಲ್ಲ. ಇಂತಹ ಕುಟುಂಬಕ್ಕೆ ಪರ್ಯಾಯ ಜಾಗ ನೀಡಿ ಮನೆ ನಿರ್ಮಿಸಬೇಕಾಗುತ್ತದೆ. ಇದೆಲ್ಲವೂ ಸರ್ಕಾರ ಅಂತಿಮ ತೀರ್ಮಾನದ ಮೇಲೆಯೇ ಅವಲಂಬಿಸಿದೆ ಎಂದು ಹೇಳಿದರು.

ಚೆಕ್‌ ಮೂಲಕವೇ ಪರಿಹಾರ:
ಮನೆ, ಜಮೀನು ಕಳೆದುಕೊಂಡ ಎಲ್ಲರಿಗೂ ಪರಿಹಾರ ಸಿಕ್ಕೇ ಸಿಗುತ್ತದೆ. ಮನೆ ಪೂರ್ಣ ಹಾನಿಯಾಗಿರುವುದು, ಭಾಗಶಃ ಹಾನಿಯಾಗಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಅದರ ಸ್ಥಿತಿಗತಿಯ ಆಧಾರದಲ್ಲಿ ಪರಿಹಾರ ನೀಡಲಾಗುತ್ತದೆ. ಬೆಳೆ ಹಾನಿಯ ಪರಿಹಾರವನ್ನೂ  ನೀಡಲಾಗುತ್ತದೆ. ನಗದು ನೀಡುವುದರಿಂದ ಅವ್ಯವಹಾರ ಆಗುವ ಸಾಧ್ಯತೆ ಇದೆ ಅಥವಾ ಫ‌ಲಾನುಭವಿಗಳಲ್ಲದವರೂ ಪರಹಾರ ಪಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಚೆಕ್‌ ಮೂಲಕವೇ ಎಲ್ಲ ರೀತಿಯ ಪರಿಹಾರ ಒದಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಪ್ರಾಥಮಿಕ ಪರಿಹಾರ:
ನಿರಾಶ್ರಿತರ ಕೇಂದ್ರದಲ್ಲಿ ಇರುವ 443 ಕುಟುಂಬಗಳಿಗೆ ಪ್ರಾಥಮಿಕ ಪರಿಹಾರವಾಗಿ 3800 ರೂ. ಚೆಕ್‌ ಮೂಲಕ ವಿತರಿಸುವ ಕಾರ್ಯ ಆರಭವಾಗಿದೆ. ಶುಕ್ರವಾರ ಬಹುತೇಕ ಕುಟುಂಬಗಳಿಗೆ ಪ್ರಾಥಮಿಕ ಪರಿಹಾರ ಹಂಚಿಕೆ ಮಾಡಲಾಗಿದೆ.  ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರವೇ  ಪರಿಹಾರದ ಚೆಕ್‌ ನೀಡಲಾಗಿದೆ. ಅಗತ್ಯವಾಗಿ ಬೇಕಿರುವ ಬಟ್ಟೆ, ಪಾತ್ರೆ ಇತ್ಯಾದಿಗಳನ್ನು ಈ ಹಣದಿಂದ ಖರೀದಿಸಬಹುದಾಗಿದೆ. ನಿರಾಶ್ರಿಯರ ಶಿಬಿರದಲ್ಲಿ ಇರುವ ಎಲ್ಲರಿಗೂ ಅಗತ್ಯ ಬಟ್ಟೆ, ಹೊದಿಕೆ ಇತ್ಯಾದಿ ಉಚಿತವಾಗಿಯೇ ನೀಡಲಾಗಿದೆ. ಪರಿಹಾರ ಚೆಕ್‌ ಮೂಲಕ ನೀಡಿದ್ದರಿಂದ ನಗದು ಪಡೆಯುವಾಗ ಒಂದೆರೆಡು ದಿನ ವಿಳಂಬವಾಗಬಹುದು. ಆದರೆ, ಅರ್ಹ ಫ‌ಲಾನುಭವಿಗೆ ಸರ್ಕಾರ ಸೌಲಭ್ಯ ತಲುಪುತ್ತದೆ ಎಂದು ತಹಸೀಲ್ದಾರ್‌ ವಿವರಿಸಿದರು.

700 ಕೋಟಿ ರೂ. ಬೆಳೆನಷ್ಟ ಅಂದಾಜು
ಈ ಮಧ್ಯೆ, ಮಳೆಯಿಂದ 6755 ಹೆಕ್ಟೇರ್‌ ತೋಟಗಾರಿಕೆ ಹಾಗೂ 2830 ಕೃಷಿ ಭೂಮಿಯಲ್ಲಿ ಬೆಳೆ ನಾಶವಾಗಿದೆ. ಕಾಫಿ, ಶುಂಠಿ, ಏಲಕ್ಕಿ, ಬಾಳೆ, ಭತ್ತ ಹೀಗೆ ಸುಮಾರು 700 ಕೋಟಿ ರೂ. ಮೊತ್ತದ ಬೆಳೆ ನಾಶದ ಅಂದಾಜು ಮಾಡಲಾಗಿದೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.