ಊರಿಗೆ ಬಂತು 23 ಕಾಡಾನೆ ಹಿಂಡು!
Team Udayavani, Apr 21, 2019, 6:05 AM IST
ಮಡಿಕೇರಿ: ಚೆಟ್ಟಳ್ಳಿ,ಮೀನುಕೊಲ್ಲಿ ಸೇರಿದಂತೆ ಪರಿಸರದ ವಿವಿಧ ಗ್ರಾಮಗಳಲ್ಲಿ ಸಂಚರಿಸುತ್ತಿದ್ದ ಒಟ್ಟು 23 ಕಾಡಾನೆಗಳ ಹಿಂಡನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳಿಂದ ಐದು ಮರಿಯಾನೆಗಳೊಂದಿಗೆ ಗ್ರಾಮ ಗಳಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಕಾಡಾನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಡ ಹೇರಿದ್ದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಒಂದು ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಸಿದ್ದರು.
ಶನಿವಾರ ಕಾಡಾನೆಗಳ ಉಪಟಳ ಹೆಚ್ಚಾದ ಕಾರಣ ರೇಡಿಯೋ ಕಾಲರ್ನ ಮಾಹಿತಿಯನ್ನು ಅನುಸರಿಸಿ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಚೆಟ್ಟಳ್ಳಿ, ಮೀನುಕೊಲ್ಲಿ, ವಾಲೂ°ರು, ತ್ಯಾಗತ್ತೂರು ಭಾಗದಿಂದ ಕುಶಾಲನಗರದ ದುಬಾರೆ ಮೂಲಕ ಮೀಸಲು ಅರಣ್ಯಕ್ಕೆ ಕಾಡಾನೆಗಳನ್ನು ಓಡಿಸುವಲ್ಲಿ ಯಶಸ್ವಿಯಾದರು.
ಕುಶಾಲನಗರ ವಲಯ ಅರಣ್ಯಾಧಿಕಾರಿ ಅರುಣ್, ಉಪವಲಯ ಅರಣ್ಯಾಧಿಕಾರಿ ವಿಲಾಸ್ ಅವರ ನೇತೃತ್ವದಲ್ಲಿ ಅರಣ್ಯ ರಕ್ಷಕ ಚರಣ್, ವೀಕ್ಷಕ ಧರ್ಮಪಾಲ್, ಜಗದೀಶ್ ಸೇರಿದಂತೆ ಸಿಬಂದಿ ವರ್ಗ ಕಾಡಾನೆಗಳ ಹಿಂಡನ್ನು ಕಾಡಿಗಟ್ಟಲು ಬೆಳಗ್ಗಿನಿಂದಲೇ ಹರಸಾಹಸ ಪಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ
Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ