ಕಳೆದ ವರ್ಷ ಅತಿ ಮಳೆ ಕಂಡ ಜಿಲ್ಲೆಗೆ ಈ ಬಾರಿ ಮಳೆ ಇಲ್ಲ

ಬಿಸಿಲಿನ ವಾತಾವರಣ ಮುಂದುವರಿಕೆ

Team Udayavani, Jul 20, 2019, 5:33 AM IST

Z-CHIKLI-HOLE-2

ಮಡಿಕೇರಿ: ಮುಂದಿನ ಐದು ದಿನಗಳ ಕಾಲ ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಗೆ ವಿರುದ್ಧವಾದ ವಾತಾವರಣ ಕೊಡಗಿನಲ್ಲಿದೆ.

ಹವಾಮಾನ ಇಲಾಖೆಯ ಪ್ರಕಟನೆಯಂತೆ ಜು.18 ರಿಂದ ಧಾರಾಕಾರ ಮಳೆ ಸುರಿಯಬೇಕಾಗಿತ್ತು. ಆದರೆ ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಮಳೆಯ ನಿರೀಕ್ಷೆ ಹುಸಿಯಾಗಿದೆ. ಕಳೆದ ವರ್ಷ ಅತಿ ಮಳೆಯನ್ನು ಕಂಡಿದ್ದ ಕೊಡಗು ಈ ಬಾರಿ ಮಳೆಗಾಲದ ಮಳೆಯನ್ನೇ ಕಂಡಿಲ್ಲ.

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 6.53 ಮಿ.ಮೀ. ಕಳೆದ ವರ್ಷ ಇದೇ ದಿನ 36.94 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆೆ 718.12 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2236.82 ಮಿ.ಮೀ ಮಳೆಯಾಗಿತ್ತು. ಈ ಪ್ರಕಾರವಾಗಿ ಪ್ರಸ್ತುತ ವರ್ಷ ಜನವರಿಯಿಂದ ಜುಲೈ 18 ರವರೆಗೆ ಕೊಡಗಿನಲ್ಲಿ ಸುಮಾರು 1500 ಮಿ.ಮೀ ನಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯಾದ್ಯಂತ ಮಳೆಗಾಲದಲ್ಲೂ ಬಿಸಿಲಿನ ವಾತಾವರಣವಿದ್ದು, ಜನತೆಯಲ್ಲಿ ಆತಂಕ ಸೃಷ್ಟಿಯಾಗಿದೆ. ರೈತರು ಮಳೆಯ ಕಣ್ಣಾಮುಚ್ಚಾಲೆಯಿಂದ ಕಂಗಾಲಾಗಿದ್ದಾರೆ.

ಮಡಿಕೇರಿ ತಾಲೂಕಿನಲ್ಲಿ ಸರಾಸರಿ ಮಳೆ 15.80 ಮಿ.ಮೀ. ಕಳೆದ ವರ್ಷ ಇದೇ ದಿನ 45.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 910.85 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3090.31 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.87 ಮಿ.ಮೀ. ಕಳೆದ ವರ್ಷ ಇದೇ ದಿನ 28.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 822.22 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1873.48 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ ಮಳೆ 1.93 ಮಿ.ಮೀ. ಕಳೆದ ವರ್ಷ ಇದೇ ದಿನ 36.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 421.28 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1746.68 ಮಿ.ಮೀ. ಮಳೆಯಾಗಿತ್ತು. ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 13.80, ನಾಪೋಕ್ಲು 7, ಸಂಪಾಜೆ 31.80, ಭಾಗಮಂಡಲ 10.60, ಹುದಿಕೇರಿ 10, ಶ್ರೀಮಂಗಲ 1.20, ಸೋಮವಾರಪೇಟೆ ಕಸಬಾ 2, ಶಾಂತಳ್ಳಿ 2.60, ಸುಂಟಿಕೊಪ್ಪ 7 ಮಿ.ಮೀ. ಮಳೆಯಾಗಿದೆ.

ಚಿಕ್ಲಿ ಹೊಳೆ ಜಲಾಶಯವೂ ಬರಿದು!
ಮಳೆಯಿಲ್ಲದೆ ಬಿಸಿಲಕಾವು ಏರತೊಡಗಿದ ಪರಿಣಾಮ ಚಿಕ್ಲಿಹೊಳೆ ಜಲಾಶಯವು ಸೊರಗಿದಂತಿದೆ. ಕಳೆದ ವರ್ಷ ಹಾರಂಗಿ ಜಲಾಶಯದ ಜೊತೆ ಜೊತೆಗೆ ಚಿಕ್ಲಿಹೊಳೆ ಜಲಾಶಯ ಕೂಡ ತುಂಬಿಕೊಂಡು ಬೋರ್ಗರೆಯುತ್ತಾ ಹರಿಯುತ್ತಾ ಪ್ರವಾಸಿಗರನ್ನು ಆಕರ್ಷಿಸುತ್ತಿತ್ತು.ಆದರೆ ಪ್ರಸ್ತುತ ವರ್ಷ ಮಳೆಗಾಲ ಆರಂಭವಾಗಿ ಒಂದೂವರೆ ತಿಂಗಳು ಕಳೆದಿದ್ದರು ಚಿಕ್ಲಿಹೊಳೆ ಜಲಾಶಯದಲ್ಲಿ ನೀರಿಲ್ಲ. ಪ್ರತಿದಿನ ಇಲ್ಲಿಗೆ ಆಗಮಿಸುತ್ತಿರುವ ನೂರಾರು ಪ್ರವಾಸಿಗರು ಜಲಾಶಯ ಸೊರಗಿದ ಹಿನ್ನೆಲೆ ನಿರಾಶೆಯಿಂದ ಮರಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಬಹುದೆನ್ನುವ ನಿರೀಕ್ಷೆ ಕೊಡಗಿನ ಜನರಲ್ಲಿ ಮಾತ್ರವಲ್ಲ ಪ್ರವಾಸಿಗರಲ್ಲೂ ಮೂಡಿದೆ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.