ಸಂಸ್ಕೃತಿಯ ಮೂಲಸತ್ವ ಸಡಿಲವಾಗಬಾರದು: ಕಣ್ಣನ್‌


Team Udayavani, Sep 10, 2017, 7:55 AM IST

Z-KANNAN-2.jpg

ಮಡಿಕೇರಿ:  ಭಾರತೀಯ ಸಂಸ್ಕೃತಿಯ ಮೂಲ ಸತ್ವವಾದ ಜಾನಪದದ ಬೇರುಗಳು ಎಂದಿಗೂ ಸಡಿಲವಾಗಕೂಡದು. ಜಾನಪದ ಸಂಸ್ಕೃತಿಯೆ ಬದುಕಿಗೆ ನೈಜ ಅರ್ಥವನ್ನು ಕಲ್ಪಿಸಿ ಕೊಡುವಂತದ್ದಾಗಿದೆ ಎಂದು ಖ್ಯಾತ ವಾಗ್ಮಿ ಹಿರೇ ಮಗಳೂರು ಕಣ್ಣನ್‌ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‌ ಮತ್ತು ಮಡಿಕೇರಿ ತಾಲೂಕು ಜಾನಪದ ಪರಿಷತ್‌ ವತಿಯಿಂದ ನಗರದ ರೋಟರಿ ಸಭಾಂಗಣದಲ್ಲಿ ಶಿಕ್ಷಕ-ಶಿಕ್ಷಕಿಯರಿಗೆ ನಡೆದ ಕನ್ನಡ ಭಾಷೆಯಲ್ಲಿ ಜಾನಪದ ಸೊಗಡು ವಿಚಾರ ಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬದುಕಿನಲ್ಲಿ ಜಾನಪದ ಹಾಸುಹೊಕ್ಕಾಗಿರು ವುದನ್ನು ಗಾದೆ ಮಾತುಗಳು, ಹಾಡುಗಳನ್ನು ಉದಾಹರಿಸಿ ಸ್ವಾರ‌ಸ್ಯಕರವಾಗಿ ವಿವರಿಸುವ ಮೂಲಕ ಸಭೆಯ ಗಮನ ಸೆಳೆದರು.

ಅಜ್ಞಾತ ವ್ಯಕ್ತಿಗಳಿಂದ ರೂಪ‌ುಗೊಂಡ ಜಾನಪದ ಸಂಸ್ಕೃತಿ ಬದುಕಿನ ಸಾರ ಸರ್ವಸ್ವವನ್ನು ಕಟ್ಟಿಕೊಡ ಬಲ್ಲುದು, ಅಂತಹ ಜಾನಪದ ಸಂಸ್ಕೃತಿ ಯಿಂದ ನಾವು ದೂರವಾದರೆ ನಮ್ಮ ಭಾಷೆ ಮತ್ತು ಬದುಕಿನೊಂದಿಗೆ ನಾಡು ನುಡಿಯ ಸಂಬಂಧಗಳನ್ನೆ ಕಳೆದುಕೊಳ್ಳುವ ಮೂಲಕ ನೆಲದ ಸಂಸ್ಕೃತಿಯಿಂದ ದೂರವಾಗಬೇಕಾಗುತ್ತದೆ ಎಂದರು.

ಲೌಕಿಕ ಬದುಕಿಗೆ ನಮ್ಮನ್ನು ನಾವು ಒಪ್ಪಿಸಿಕೊ ಳ್ಳುವ ಮೂಲಕ ಬದುಕಿನ ಸ್ವಾರಸ್ಯವನ್ನೆ ಕಳೆದುಕೊಳ್ಳು ತ್ತಿರುವುದಾಗಿ ವಿಷಾದಿಸಿದರು. ನೋಡುವ ಕಣ್ಣಿಗೆ ಕೇಳುವ ಸಾಮರ್ಥ್ಯವಿಲ್ಲವಾದರೆ, ಕೇಳುವ ಕಿವಿ ನೋಡುವ ಶಕ್ತಿಯನ್ನು ಹೊಂದಿಲ್ಲ. ಹೀಗಿದ್ದೂ ಮೂಗಿನ ಮೇಲೆ ಕೂರುವ ಕನ್ನಡಕದ ಕಾಲಿಗೆ ಕಿವಿ ಆಸರೆ ನೀಡುವ ಮೂಲಕ ಹೊಂದಾಣಿಕೆಯನ್ನು ಸಾಧಿಸುವ ರೀತಿಯಲ್ಲಿ ಬದುಕಿನಲ್ಲಿ ಜಾನಪದ ಸಂಸ್ಕೃತಿಯನ್ನು ಮಿಳಿತಗೊಳಿಸಿ ಮುನ್ನಡೆಯುವ ಹೊಂದಾಣಿಕೆ ತೀರಾ ಅವಶ್ಯವೆಂದು ಕಣ್ಣನ್‌ ಹಾಸ್ಯ ಭರಿತವಾಗಿ ತಿಳಿಸಿದರು. 

ಜಾನಪದ ಎಂದರೆ ಜ್ಞಾನ, ವಿಜ್ಞಾನ  ಸೇರಿದಂತೆ ಬದುಕಿನ ಎಲ್ಲ ವಿಚಾರಗಳನ್ನು ಒಳಗೊಂಡಿರುವಂತಹದ್ದು ಮತ್ತು ಯಾವತ್ತು ಹದವಾಗಿರುವಂಥದ್ದೆಂದು ವಿಶ್ಲೇಷಿಸಿದರು.

ಬದುಕಿನ ಸ್ವಾರಸ್ಯವನ್ನು ಕಾಪಿಡುವಂತಹದ್ದು ಜಾನಪದ ಸಂಸ್ಕೃತಿಯಾಗಿದ್ದು, ಇದು ಬದುಕಿಗೆ ಪೂರಕ ಮತ್ತು ಪ್ರೇರಕವಾಗಿದೆ. ಯಾವತ್ತು ನಮ್ಮ ಜಾನಪದ ಸಂಸ್ಕೃತಿಯ ಭಾಗವಾದ ನೆಲದ ಭಾಷೆಯನ್ನು ನಾವು ಹೊರ ಹಾಕಿ ಇತರ ಭಾಷೆಗಳನ್ನು ನಮ್ಮದನ್ನಾಗಿ ಮಾಡಿಕೊಳ್ಳಲು ಮುಂದಾಗುತ್ತೇವೋ ಅದು ಯಾವತ್ತೂ ಮಾರಕ ವಾಗುತ್ತದೆ. ವಿಶ್ವಮಾನವತೆಯ ಜಾನಪದ ಸಂಸ್ಕೃತಿಯ ಬೇರುಗಳು ಸಡಿಲವಾಗಿಲ್ಲ. ಆದರೆ, ಇಂತಹ ಜಾನಪದಕ್ಕೆ ಕಸಿ ಮಾಡಲು ಹೊರಟಾಗ ಕಸಿವಿಸಿಯಾಗುತ್ತದೆಂದು ಇಂದಿನ ಆಂಗ್ಲಭಾಷಾ ವ್ಯಾಮೋಹ ಮತ್ತು ಸಂಸ್ಕೃತಿಯ ಅನುಕರಣೆಯನ್ನು ಕಣ್ಣನ್‌ ಟೀಕೆಗೆ ಒಳಪಡಿಸಿದರು.

ಇಂಗ್ಲಿಷ್‌ ವ್ಯಾಮೋಹದಿಂದ ಇಂಟರ್‌ನ್ಯಾಷನಲ್‌ ಸ್ಕೂಲ್‌ಗ‌ಳಿಗೆ ದಾಖಲಾಗುವ ಮಕ್ಕಳು ತಮ್ಮ ಮೂಲ ಸಂಸ್ಕೃತಿಯಿಂದ ದೂರವಾಗಿ ಅಂತರ್‌ ಪಿಶಾಚಿಗಳಂತಾಗುತ್ತಿರುವ ಬಗ್ಗೆ ಅತೀವ ಬೇಸರವನ್ನು ವ್ಯಕ್ತಪಡಿಸಿದ ಕಣ್ಣನ್‌, ನಮ್ಮೆಲ್ಲ ಭಾವನೆಗಳಿಗೆ ಹತ್ತಿರವಾದ ಭಾಷೆಯನ್ನು ದೂರಮಾಡಿ ಬದುಕು ಜಠಿಲವಾಗುತ್ತಿದೆಯೆಂದರು.

ಪ್ರಸ್ತುತ ವ್ಯವಸ್ಥೆಯಡಿ ಯಾವುದಾದರು ಒಂದು ವೃತ್ತಿ ಜಾತ್ಯತೀತವೆಂದಿದ್ದರೆ ಅದು ಶಿಕ್ಷಕ ವೃತ್ತಿ. ಶಿಕ್ಷಕ ಮತ್ತು ಶಿಕ್ಷಕಿಯರು ಸಮಾಜದ ರಕ್ಷಕ ಮತ್ತು ರಕ್ಷಕಿಯರೆ ಆಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ವಿಚಾರಗೋಷ್ಠಿಯನ್ನು ಸಸಿಗೆ ನೀರೆರೆದು ಉದ್ಘಾಟಿಸಿದ ಮಾತನಾಡಿದ ರೋಟರಿ ಜೋನಲ್‌ ಲೆಫ್ಟಿನೆಂಟ್‌ ಅಂಬೆಕಲ್‌ ವಿನೋದ್‌ ಕುಶಾಲಪ್ಪ, ರೊಟರಿ ಸಂಸ್ಥೆ ತನ್ನ ಕ್ಲಬ್‌ಗಳ ಮೂಲಕ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದರು. ಪ್ರಸ್ತುತ ಶಿಕ್ಷಣಕ್ಕೆ ಪ‌ೂರಕವಾದ ಟೀಚ್‌ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, 10 ಸಾವಿರ ಇ-ಲರ್ನಿಂಗ್‌ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಹೊಂದಿದೆಯೆಂದು ತಿಳಿಸಿದರು.

ಕೊಡಗು ಜಿಲ್ಲಾ ಜಾನಪದ ಪರಿಷತ್‌ ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ, ಜೀವನ ಮೌಲ್ಯಗಳು ಅಳಿಸಿಹೋಗುತ್ತಿರುವ ಹಂತದಲ್ಲಿ ಗ್ರಾಮೀಣ ಜಾನಪದ ಸೊಗಡನ್ನು ಬದುಕಿನಲ್ಲಿ ಅಳವಡಿಸಿ ಕೊಳ್ಳುವುದು ಅತ್ಯವಶ್ಯ ಎಂದರು.

ವ್ಯಾವಹಾರಿಕವಾಗಿ ನಾವು ಇಂಗ್ಲಿಷ್‌ ಸೇರಿದಂತೆ ವಿವಿಧ ಭಾಷೆಗಳನ್ನು ಬಳಸುತ್ತೇವಾದರು ನೆಲದ ಭಾಷೆ ಕನ್ನಡದ ಬಳಕೆಯಿಂದ ಮಾತ್ರ ಇದು ನನ್ನದು ಎನ್ನುವ ಭಾವನೆ ಮೂಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 

ಮಂಜುನಾಥ್‌ಗೆ ಗೌರವಾರ್ಪಣೆ 
ಹಿರೇಮಗಳೂರು ಕಣ್ಣನ್‌ ಮತ್ತು ಅವರನ್ನು ಇಲ್ಲಿಗೆ ಬರಮಾಡಿಕೊಳ್ಳಲು ಕಾರಣರಾದ ಹಿರಿಯ ಪತ್ರಕರ್ತ ಎಂ.ಎನ್‌. ಮಂಜುನಾಥ್‌ ಅವರನ್ನು  ಇದೇ ಸಂದರ್ಭ ಗೌರವಿಸಲಾಯಿತು. ಇದೇ ಸಂದರ್ಭ ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡ ಶಿಕ್ಷಕರಿಗೆ ಅಭಿನಂದನಾ ಪತ್ರವನ್ನು ನೀಡಲಾಯಿತು.ವೇದಿಕೆಯಲ್ಲಿ ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್‌ ಅಧ್ಯಕ್ಷ ಅನಿಲ್‌ ಎಚ್‌.ಟಿ., ಮಿಸ್ಟಿ ಹಿಲ್ಸ್‌ ಗೌರವ ಕಾರ್ಯದರ್ಶಿ ಪಿ.ಎಂ. ಸಂದೀಪ್‌, ರೋಟರಿ ಟೀಚ್‌ ಕಾರ್ಯಕ್ರಮದ ಅಧ್ಯಕ್ಷರಾದ ರಾಜೇಶ್‌ ಬಿ.ಎಂ. ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.