“ಕಾವೇರಿ ನಾಡಿಗೆ ಬಜೆಟ್ನಲ್ಲಿ ಶೂನ್ಯ ಭಾಗ್ಯ ಕೊಡಗನ್ನು ಮರೆತ ಸರಕಾರ
Team Udayavani, Mar 17, 2017, 2:18 PM IST
ಮಡಿಕೇರಿ: ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಮೂಲ ಕಾರಣವಾಗಿರುವ ಕಾವೇರಿ ನದಿ ಹುಟ್ಟುವ ಕೊಡಗು ಜಿಲ್ಲೆಗೆ ರಾಜ್ಯ ಸರ್ಕಾರದ ಬಜೆಟ್ನಲ್ಲಿ ಯಾವುದೇ ಕೊಡುಗೆಗಳನ್ನು ನೀಡದೆ ನಿರಾಶೆ ಮೂಡಿಸಿದೆ.
ಪ್ರತಿವರ್ಷ ವಿಶೇಷ ಪ್ಯಾಕೇಜ್ನ ಹೆಸರಿನಲ್ಲಿ ಕೊಡಗಿನ ಜನರ ಕಣ್ಣೊರೆಸುವ ತಂತ್ರವಾದರು ನಡೆಯುತ್ತಿತ್ತು. ಆದರೆ, ಈ ಬಾರಿಯ ಚುನಾವಣೆಯ ಬಜೆಟ್ನಲ್ಲಿ ಕಾಂಗ್ರೆಸ್ ಸರ್ಕಾರ ಜಿಲ್ಲೆಗೆ ಯಾವುದೇ ಕೊಡುಗೆಯನ್ನು ನೀಡದೆ ನಿರ್ಲಕ್ಷ್ಯ ತೋರಿದೆ.
ನಾಮಕಾವಸ್ಥೆಗೆ ಕಾರವಾರ ಮತ್ತು ಚಿಕ್ಕಮಗಳೂರಿಗೆ ನೀಡಿದಂತೆ ಮಡಿಕೇರಿಗೆ ವಿಮಾನ ಇಳಿದಾಣವನ್ನು ನೀಡಿದ್ದು ಬಿಟ್ಟರೆ ಮಹತ್ವದ ಯಾವುದೇ ಘೋಷಣೆಗಳಾಗಲಿ, ಪ್ಯಾಕೇಜ್ಗಳನ್ನಾಗಲಿ ನೀಡಿಲ್ಲ. ಕೊಡಗಿನಲ್ಲಿ ಪ್ರಮುಖವಾಗಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳ ಅಗತ್ಯವಿತ್ತು. ಅಲ್ಲದೆ, ಇತ್ತೀಚಿನ ವರ್ಷಗಳಲ್ಲಿ ಕಾವೇರಿ ನದಿ ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದ್ದು, ಕಾವೇರಿ ನದಿಯ ಸ್ವತ್ಛತೆಯನ್ನು ಕಾಪಾಡಲು ಮಹತ್ವಾಕಾಂಕ್ಷೆಯ ಯೋಜನೆ ಘೋಷಣೆಗೊಳ್ಳುವ ನಿರೀಕ್ಷೆ ಇತ್ತಾದರೂ ಎಲ್ಲವೂ ಹುಸಿಯಾಗಿದೆ.
ಕೊಡಗಿನಲ್ಲಿ ಅಭಿವೃದ್ಧಿಯ ದೃಷ್ಟಿಯಿಂದ ಕೆಲವು ತಾಲ್ಲೂಕು ರಚನೆಯ ಬಗ್ಗೆ ಬೇಡಿಕೆ ಇತ್ತು. ಇವುಗಳ ಬಗ್ಗೆಯೂ ಸರ್ಕಾರ ಗಮನ ಹರಿಸಿಲ್ಲ. ಬರ ಪರಿಸ್ಥಿತಿ ನಿರ್ವಹಣೆಗೆ ಹೆಚ್ಚಿನ ಅನುದಾನ, ಜಿಲ್ಲೆಯ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆಗಳು, ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರವಾಹದ ಸಂದರ್ಭ ಪರಿಹಾರೋಪಾಯ ಸೇರಿದಂತೆ ಯಾವುದಕ್ಕೂ ಅನುದಾನವನ್ನು ಘೋಷಿಸಿಲ್ಲ. ಕಳೆದ ಬಜೆಟ್ನಲ್ಲಿ ಮಡಿಕೆೇರಿಯ ಹೆಸರುವಾಸಿ ಪ್ರವಾಸಿ ತಾಣ ರಾಜಾಸೀಟು ಉದ್ಯಾನವನದ ಅಭಿವೃದ್ಧಿಗಾಗಿ ಅನುದಾನವನ್ನು ಮೀಸಲಿಡಲಾಗಿತ್ತಾದರು ಈ ಯೋಜನೆಯ ಅನುಷ್ಠಾನ ಇನ್ನು ಕೂಡ ಕೈಗೂಡಿಲ್ಲ.
ಜಿಲ್ಲೆಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಿದ್ದು, ಪ್ರವಾಸೋದ್ಯಮದ ಕ್ಷೇತ್ರದಲ್ಲಿ ಕೊಡಗನ್ನು ವಿಶ್ವಮಟ್ಟದಲ್ಲಿ ಪ್ರತಿಬಿಂಬಿಸಲು ನೂತನ ಯೋಜನೆಗಳನ್ನು ರೂಪಿಸಬಹುದಾಗಿತ್ತು. ಆದರೆ ರಾಜ್ಯದ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ 572 ಕೋಟಿ ರೂ.ಮೀಸಲಿಟ್ಟ ರಾಜ್ಯ ಸರ್ಕಾರ ಕೊಡಗಿನ ಪ್ರವಾಸೋದ್ಯಮ ಕ್ಷೇತ್ರಗಳ ಬಗ್ಗೆ ಚಿಂತನೆ ಹರಿಸಿಲ್ಲ. ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಕರಾವಳಿ ಸರ್ಫಿಂಗ್ ಉತ್ಸವದ ಬಗ್ಗೆ ಕಾಳಜಿ ತೋರಿದ ರಾಜ್ಯ ಕಾಂಗ್ರೆಸ್ ಸರಕಾರ ಪ್ರವಾಸೋದ್ಯಮದಿಂದಲೆ ಹೆಸರು ವಾಸಿಯಾಗಿರುವ ಪಕ್ಕದ ಕೊಡಗು ಜಿಲ್ಲೆಗೆ ಪ್ರವಾಸೋದ್ಯಮದ ಅಭ್ಯುದಯಕ್ಕಾಗಿ ಏನನ್ನೂ ನೀಡದಿರುವುದು ಜಿಲ್ಲೆಯ ಜನತೆಯ ಅಸಮಾಧಾನಕ್ಕೆ ಕಾರಣವಾಗಿದೆ.
ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಟಿ.ಪಿ.ರಮೇಶ್, ರಾಜ್ಯ ವ್ಯಾಪಿ ಘೋಷಣೆಯಾಗಿರುವ ಯೋಜನೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಮೂಲಭೂತ ಸೌಲಭ್ಯಗಳಿಗಾಗಿ ರಾಜ್ಯಾದ್ಯಂತ ಹಂಚಿಕೆಯಾಗುವಂತೆ ಜಿಲ್ಲೆಗೂ ಅನುದಾನ ಬಿಡುಗಡೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬಜೆಟ್ನಲ್ಲಿ ಕೊಡಗಿಗಾಗಿ ಯೋಜನೆಗಳು ಘೋಷಣೆಯಾಗದಿದ್ದರು ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆಗೆ ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಮಾತನಾಡಿ, ರಾಜ್ಯ ಬಜೆಟ್ನಿಂದ ಕೊಡಗಿನ ಜನರ ಭರವಸೆಗಳು ಹುಸಿಯಾಗಿದೆಯೆಂದು ನಿರಾಸೆ ವ್ಯಕ್ತಪಡಿಸಿದ್ದಾರೆ.
ದೇಶದ ಬೆನ್ನೆಲುಬಾದ ರೈತರನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಅದರಲ್ಲೂ ಕೊಡಗು ಜಿಲ್ಲೆಯನ್ನು ಲೆಕ್ಕಕ್ಕಿಲ್ಲದಂತೆ ಮಾಡಲಾಗಿದೆ. ವಿರಾಜಪೇಟೆಗೆ ಜೈಲು, ಮಡಿಕೇರಿಗೆ ಏರ್ಸ್ಟ್ರಿಪ್, ಕಾವೇರಿ ಕೊಳ್ಳದ ನಾಲೆಗೆ ಅನುದಾನ ಬಿಟ್ಟರೆ ಬೇರೇನೂ ಇಲ್ಲ.
ಈ ಹಿಂದೆ ನಾಮಕಾವಸ್ಥೆಗಾದರೂ ವಿಶೇಶ ಪ್ಯಾಕೇಜ್ ಗಳನ್ನಾದರೂ ಘೋಷಣೆ ಮಾಡಲಾಗುತ್ತಿತ್ತು. ಈ ಬಾರಿ ಅದೂ ಇಲ್ಲವೆಂದಿರುವ ಸುನಿಲ್ ಸುಬ್ರಮಣಿ, ಕೊಡಗಿನ ಜ್ವಲಂತ ಸಮಸ್ಯೆಗಳಾದ ಬರ ಪರಿಸ್ಥಿತಿ, ಕಾವೇರಿ ನದಿ ಸ್ವತ್ಛತೆ, ತಾಲ್ಲೂಕುಗಳ ರಚನೆ ಅಲ್ಲದೇ ಹಲವಾರು ವಿಚಾರಗಳ ಬಗ್ಗೆ ಈ ಹಿಂದೆ ನಾವುಗಳು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರೂ ಯಾವುದೇ ಸ್ಪಂದನೆ ನೀಡಿಲ್ಲ. ಬರ ಪರಿಸ್ಥಿತಿ ಬಂದಾಗ ರಾಜ್ಯದಲ್ಲಿ ಕಾವೇರಿ ನೀರು ನೆನೆಸಿಕೊಳ್ಳುತ್ತಾರೆ. ಆದರೆ ಕಾವೇರಿಯ ನಾಡಿಗೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆದ್ದರಿಂದ ಈ ಬಜೆಟ್ ಸಂಪೂರ್ಣ ನಿರಾಶಾದಾಯಕ ಬಜೆಟ್ ಆಗಿದ್ದು, ಕೊಡಗಿನ ಜನತೆಯ ಭರವಸೆಗಳು ಹುಸಿಯಾಗಿವೆ ಎಂದು ಸುನಿಲ್ ಸುಬ್ರಮಣಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ