ಜಿಎಸ್‌ಟಿ ವ್ಯವಸ್ಥೆಯಿಂದ ಜನಸಾಮಾನ್ಯರಿಗೆ ಅನುಕೂಲ : ರಮೇಶ್‌ 


Team Udayavani, Jul 9, 2017, 2:55 AM IST

Z-GST-MEETING.jpg

ಮಡಿಕೇರಿ: ಒಂದು ರಾಷ್ಟ್ರ, ಒಂದೇ ತೆರಿಗೆ, ಒಂದು ಮಾರುಕಟ್ಟೆ ಮೂಲಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಿಂದ ಜನಸಾಮಾನ್ಯರಿಗೆ ಒಳಿತಾಗಲಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ರಮೇಶ್‌ ಅವರು ತಿಳಿಸಿದ್ದಾರೆ.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ ವತಿಯಿಂದ ಸ್ಥಳೀಯ ಸಂಸ್ಥೆಗಳಾದ ನಗರಸಭೆ ಮತ್ತು ಪಟ್ಟಣ ಪಂಚಾಯತ್‌ಗಳ ಎಂಜಿನಿಯರ್‌ಗಳು ಹಾಗೂ ಲೆಕ್ಕ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 
 
ದಿನ ಬಳಕೆಯ ಪದಾರ್ಥಗಳು ತೆರಿಗೆ ವಿನಾಯಿತಿ ಪಡೆಯಲಿವೆ. ಬಡ ಮತ್ತು ಸಾಮಾನ್ಯ ನಾಗರಿಕರಿಗೆ ಹಾಗೂ ಸಣ್ಣ ವ್ಯಾಪಾರಿಗಳಿಗೆ ಸಾಕಷ್ಟು ಲಾಭಗಳು ದೊರೆಯಲಿವೆ. ಸಣ್ಣ ವ್ಯಾಪಾರಿಗಳು ಹಂತ ಹಂತವಾಗಿ ಬೆಳೆಯಲು ಅವಕಾಶ ಇದೆ ಎಂದು ಅವರು ಹೇಳಿದರು. 

ನೋಂದಣಿ, ಕರ ಪಾವತಿ, ರಿಟರ್ನ್ ಸಲ್ಲಿಕೆ ಮತ್ತು ತೆರಿಗೆಗಳ ಮರು ಸಂದಾಯಕ್ಕೆ ಸಾಮಾನ್ಯ ಪ್ರಕ್ರಿಯೆಗಳು ನಡೆಯಲಿವೆ. ಸಂಘಟಿತ ಸಾಮಾನ್ಯ ಮಾರುಕಟ್ಟೆ ಸೃಷ್ಟಿಯಾಗಲಿದೆ. ಉತ್ಪಾದನಾ ಕೇಂದ್ರ ಜಾಲ ವಿಸ್ತರಿಸಲಿದೆ. ಹೂಡಿಕೆಗಳು ಮತ್ತು ರಫ್ತು ಚೈತನ್ಯ ವರ್ಧಕವಾಗಲಿದೆ ಎಂದು ರಮೇಶ್‌ ಅವರು ತಿಳಿಸಿದರು. 

ಸರಕು ಮತ್ತು ಸೇವೆಗಳಿಗೆ ವಿಧಿಸಲಾಗುತ್ತಿರುವ ಭಿನ್ನ ತೆರಿಗೆ ಕಡಿತಗೊಳಿಸಿ, ವ್ಯವಸ್ಥೆ ಸರಳೀಕರಣವಾಗಲಿದೆ. ತೆರಿಗೆ ಪದ್ಧತಿಯಲ್ಲಿ  ನಿರ್ದಿಷ್ಟತೆ ಖಚಿತಪಡಿಸಲು ಸರಕು ಮತ್ತು ಸೇವೆಗಳನ್ನು ವರ್ಗೀಕರಿಸುವ ನಿಟ್ಟಿನಲ್ಲಿ ಜಿಎಸ್‌ಟಿ ವ್ಯವಸ್ಥೆ ಅನುಕೂಲವಾಗಲಿದೆ ಎಂದು ರಮೇಶ್‌ ಅವರು ಹೇಳಿದರು. 

ಸರಕು ಮತ್ತು ಸೇವೆಗಳ ಚಲನವಲನಗಳು ಸ್ವಾತಂತ್ರ್ಯಗೊಳ್ಳಲಿದ್ದು, ಸ್ಪರ್ಧಾತ್ಮಕ ಹೆಚ್ಚಳ ಉಂಟಾ ಗುವುದರಿಂದ ಗ್ರಾಹಕರಿಗೆ ಲಾಭವಾಗಲಿದೆ. ದೇಶಾ ದ್ಯಂತ ಇರುವ ಉತ್ಪಾದಕರು ಮತ್ತು ಗ್ರಾಹಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಅವರು ವಿವರಿಸಿದರು.  

ಜಿಎಸ್‌ಟಿ ಜಾರಿಯಾಗುವುದರಿಂದ ವಸ್ತುಗಳ ಬೆಲೆ ಕಡಿಮೆಯಾಗುವುದರ ಜೊತೆಗೆ ರಫ್ತಿಗೆ ಸಹಕಾರಿಯಾಗಲಿದೆ. ಅಂತರ ರಾಜ್ಯ ಮತ್ತು ಅಂತರ ರಾಷ್ಟ್ರೀಯ ವಹಿವಾಟು ಬೆಳವಣಿಗೆಗೆ ಜಿಎಸ್‌ಟಿ ಬಹು ಉಪಯುಕ್ತವಾಗಲಿದೆ. ಯಾವುದೇ ಅಡೆತಡೆ ಇಲ್ಲದೆ ವ್ಯಾಪಾರಕ್ಕೆ ಅನುಕೂಲವಾಗಲಿದೆ ಎಂದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.