ಮತ್ತೆ ಪ್ರತಾಪ ಮೆರೆದ ಸಿಂಹ: ವಿಜಯಿಯಾಗದ ಶಂಕರ


Team Udayavani, May 25, 2019, 6:10 AM IST

pratap-mereda-simha

ಮಡಿಕೇರಿ: ಬಲಿಷ್ಠವಾಗಿ ಬೆಳೆದ ಬಿಜೆಪಿಯನ್ನು ಕಟ್ಟಿ ಹಾಕುವ ಪ್ರಯತ್ನವಾಗಿ ಮೈತ್ರಿಕೂಟಗಳು ಹೆಣೆದ ತಂತ್ರಗಾರಿಕೆ ದೇಶದೆಲ್ಲೆಡೆ ವಿಫ‌ಲವಾದಂತೆ ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಸೋಲಾಗಿದೆ. ಬಿಜೆಪಿಯ ಭದ್ರಕೋಟೆ ಕೊಡಗು ಜಿಲ್ಲೆ ಮತ್ತೆ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಕೈಹಿಡಿಯುವ ಮೂಲಕ ಭರ್ಜರಿ ಜಯ ತಂದುಕೊಟ್ಟಿದೆ.

ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು-ಕೊಡಗು ಕ್ಷೇತ್ರದಲ್ಲಿ, ಪಕ್ಷದೊಳಗಿನ ಅಸಮಾಧಾನಗಳ ನಡುವೆಯೇ ಪ್ರತಾಪ ಸಿಂಹ ಅವರು ದ್ವಿತೀಯ ಬಾರಿಗೆ ಮೋದಿ ಅಲೆಯಲ್ಲಿ ತೇಲಿ ಗೆಲುವಿನ ದಡ ಸೇರಿದ್ದಾರೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಿಂದ ಎದುರಾಗಬಹುದಾದ‌ ಆತಂಕ ಮತ್ತು ಪಕ್ಷದೊಳಗೆಯೇ ಪ್ರತಾಪಸಿಂಹ ಅವರ ವಿರುದ್ಧ ನಿರ್ಮಾಣವಾಗಿದ್ದ ಅಸಮಾಧಾನ ಬಿಜೆಪಿಯನ್ನು ಸೋಲಿಸಿ ಬಿಡಬಹುದು ಎನ್ನುವ ನಿರೀಕ್ಷೆಗಳು ಹುಸಿಯಾಗಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪ ಸಿಂಹ ಅವರು ಸರಿ ಸುಮಾರು 1.46 ಲಕ್ಷ ಮತಗಳ ಅಂತರದಿಂದ, ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವಿಜಯಶಂಕರ್‌ ಅವರ ವಿರುದ್ಧ ಸ್ಪಷ್ಟ ಗೆಲುವನ್ನು ದಾಖಲಿಸಿದ್ದಾರೆ.

ಇದು ನಿಜಕ್ಕೂ ಪ್ರತಾಪ ಸಿಂಹ ಅವರ ಕಳೆದ ಐದು ವರ್ಷಗಳ ಅವಧಿಯ ಅವರ ಕಾರ್ಯವೈಖರಿಯಿಂದ ಬಂದಿದೆಯೇ, ಇಲ್ಲ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ಮೈತ್ತಿಯಲ್ಲಿ ಮೂಡಿದ ಗೊಂದಲಗಳಿಂದ ಬಂದಿದೆ‌ಯೇ ಎನ್ನುವುದನ್ನು ಗಮನಿಸಿದಾಗ ಪ್ರಧಾನಿ ಮೋದಿ ಅಲೆ ಎನ್ನುವ ಅಂಶ ಬಯಲಾಗುತ್ತದೆ. ಯಾಕೆಂದರೆ ಪ್ರತಾಪ್‌ ಸಿಂಹ ಅವರ ಕಾರ್ಯವೈಖರಿ ಈ ಕ್ಷೇತ್ರದ ಜನರ ಅಭಿಪ್ರಾಯದಂತೆ ತೃಪ್ತಿಕರವಾಗಿಲ್ಲ.

ಈ ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪ ಸಿಂಹ ಅವರನ್ನು ನಿಜಕ್ಕೂ ಕೈಹಿಡಿದು ಗೆಲುವಿನ ದಡ ಸೇರಿಸಿದ್ದು, ಬಿಜೆಪಿ ಪಕ್ಷ ಆಳವಾಗಿ ಬೇರು ಬಿಟ್ಟ ಕೊಡಗು ಜಿಲ್ಲೆಯ ಎರಡು ವಿಧಾನ ಸಭಾ ಕ್ಷೇತ್ರಗಳೇ ಆಗಿದೆ.

ಶಾಸಕ ಅಪ್ಪಚ್ಚು ರಂಜನ್‌ ಅಭಿಪ್ರಾಯದಂತೆ ಪ್ರತಾಪ ಸಿಂಹ ಅವರಿಗೆ ಜಿಲ್ಲೆಯ ಮಡಿಕೇರಿ ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳು ಸುಮಾರು 90 ಸಾವಿರಕ್ಕು ಹೆಚ್ಚಿನ ಮತಗಳ ಮುನ್ನಡೆಯನ್ನು ನೀಡಿವೆ. ಇದನ್ನು ಗಮನಿಸಿದಾಗ ಮೈಸೂರು ವಿಭಾಗದಲ್ಲಿ ಮಂಕಾದ ಪ್ರತಾಪ ಸಿಂಹ ಅವರು ಕೊಡಗು ಭಾಗದ ಮತಗಳಿಂದ ಸತತ ಎರಡನೇ ಬಾರಿ ಸಂಸತ್‌ನ್ನು ಪ್ರವೇಶಿಸುವ ಅವಕಾಶ ಗಿಟ್ಟಿಸಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.

ಮೈಸೂರು -ಕೊಡಗು ಕ್ಷೇತ್ರದ ಚುನಾವಣೆಯ ಉದ್ದಕ್ಕೂ ಇಲ್ಲಿನ ಎರಡು ಕ್ಷೇತ್ರಗಳಲ್ಲಿ ಜಾತಿ ಧರ್ಮದ ವಿಚಾರಗಳು ಹೆಚ್ಚಾಗಿ ಕೇಳಿ ಬಂದಿಲ್ಲ.
ಇದಕ್ಕೂ ಮಿಗಿಲಾದ ಕುತೂಹಲವೆಂದರೆ ಮತದಾರ ಅಭ್ಯರ್ಥಿಯ ಹೆಸರು ಪ್ರಸ್ತಾಪಿಸಿದ್ದು ವಿರಳವೆ. ಬದಲಾಗಿ ಫಿರ್‌ ಏಕ್‌ ಬಾರ್‌ ಮೋದಿ ಸರ್ಕಾರ್‌‌ ಎನ್ನುವ ಘೋಷಣೆಗೆ ತಕ್ಕಂತೆ ರಾಷ್ಟ್ರೀಯ ಹಿತಾಸಕ್ತಿಯ ಹೆಸರಿನಲ್ಲಿ ಮೋದಿಯ ಹೆಸರಿನಲ್ಲಿ ಬಿಜೆಪಿಗೆ ಮತ ಚಲಾಯಿಸಿರುವುದು ಪ್ರತಾಪ ಸಿಂಹ ಗೆಲುವಿನ ನಗುವಿಗೆ ಕಾರಣವಾಗಿದೆ.

ಚುನಾವಣಾ ಪೂರ್ವದಲ್ಲಿ ಪ್ರತಾಪ ಸಿಂಹ ವಿರುದ್ಧವಾಗಿ ಮೂಡಿದ್ದ ಅಭಿಪ್ರಾಯಗಳು ಈ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯ ಗೆಲುವಿನ ವಿಶ್ವಾಸವನ್ನು ಮೂಡಿಸಿತ್ತು.

ಹೀಗಿದ್ದೂ, ಮೈತ್ರಿ ಎಂಬುದೇ ಇಲ್ಲಿ ಸಮರ್ಪಕವಾಗಿ ಕೆಲಸ ನಿರ್ವಹಿಸದಿದ್ದುದರಿಂದ ಕಾಂಗ್ರೆಸ್‌ ಅಭ್ಯರ್ಥಿ ವಿಜಯಶಂಕರ್‌ರಿಗೆ ಗೆಲುವಿನ ಸಮೀಪಕ್ಕೂ ಹೋಗಲು ಸಾಧ್ಯವಾಗಿಲ್ಲ.

ಮಂಡ್ಯ ಚುನಾವಣೆಯಲ್ಲಿನ ಮೈತ್ರಿಗಳೊಳಗಿನ ಕಚ್ಚಾಟಗಳು ಮೈಸೂರು-ಕೊಡಗು ಕ್ಷೇತ್ರದ ಮೇಲೆ ನಿಚ್ಚಳ ಪರಿಣಾಮಗಳನ್ನು ಬೀರಿದೆ.

ಮನಃಪೂರ್ವಕವಾಗಿ ಕೊಡಗಿನಲ್ಲಿ ವಿಜಯಶಂಕರ್‌ ಪರ ಜೆಡಿಎಸ್‌ನಿಂದ ಕೆಲಸ ನಡೆಯದಿರುವುದಕ್ಕೆ ಫ‌ಲಿತಾಂಶ ಕೈಗನ್ನಡಿ ಹಿಡಿಯುತ್ತಿದ್ದರೆ, ಇದೇ ಸಂದರ್ಭ ಕಾಂಗ್ರೆಸ್‌ ಪಕ್ಷ ತನ್ನ ತಾಕತ್ತಿಗೆ ತಕ್ಕಂತ ಸಂಘಟನೆಯ ಮೂಲಕ ಮತದಾರರ ಮನವೊಲಿಸುವಲ್ಲಿ ವಿಫ‌ಲವಾಗಿರುವುದು ಕೂಡ ಗಮನಾರ್ಹ.
ಭಿನ್ನ ಅಭಿಪ್ರಾಯಗಳ ನಡುವೆಯೂ ಮೈಸೂರು, ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿ ತನ್ನ ಅಸ್ತಿತ್ವವನ್ನು ಮತ್ತಷ್ಟು ಗಟ್ಟಿ ಮಾಡಿಕೊಂಡಿದೆ.

ಗೆಲುವನ್ನು ಸಾಧ್ಯಮಾಡಿಕೊಳ್ಳಬಹುದಾದ ಅವಕಾಶವನ್ನು ತಮ್ಮ ಸ್ವಯಂಕೃತ ಅಪರಾಧ‌ದಿಂದ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಪಕ್ಷಗಳು ಕಳೆದುಕೊಂಡು ತಮ್ಮ ಅಸ್ತಿತ್ವಕ್ಕೆ ಧಕ್ಕೆಯನ್ನು ತಂದುಕೊಂಡಿವೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.